ಅಗಸ್ಟ್ 5ಕ್ಕೆ ಜಮ್ಮ-ಕಾಶ್ಮೀರದ 370 ವಿಧಿ ರದ್ದು ಮಾಡಿದ ಪ್ರಕ್ರಿಯೆಗೆ ಒಂದು ವರ್ಷ ತುಂಬುತ್ತಿರುವುದು ಕೇವಲ ಕಾಕತಾಳೀಯವೆ?

ಲಕ್ನೋ: ‘ಅಗಸ್ಟ್ 3 ಅಥವಾ 5ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಲಾಗಿಸುವುದು. ಪ್ರಧಾನಮಂತ್ರಿಯೇ ಇದನ್ನು ಮಾಡಬೇಕೆಂದು ಟ್ರಸ್ಟ್ ಅಭಿಲಾಷೆಯಾಗಿದ್ದು, ಅವರಿಗೆ ಆಹ್ವಾನ ನೀಡಿದ್ದೇವೆ ಎಂದು ನಿರ್ಮಾಣದ ಜವಾಬ್ದಾರಿ ಪಡೆದಿರುವ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹೇಳಿದೆ.

ಶನಿವಾರ ಅಯೋಧ್ಯೆಯಲ್ಲಿ ಟ್ಟಸ್ಟ್ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಸ್ಟ್ ಸದಸ್ಯ ಕಾಮೇಶ್ವರ್ ಚೌಪಾಲ್ ಈ ಮಾಹಿತಿ ನೀಡಿದರು.

ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪಾ ರಾಜ್ ಮಾತನಾಡಿ, ಎಲ್ & ಟಿ ಕಂಪನಿಗೆ ನಿರ್ಮಾಣ ಕಾರ್ಯದ ಗುತ್ತಿಗೆ ನೀಡಲಾಗಿದೆ ಎಂದರು.

ಅಗಸ್ಟ್ 5ಕ್ಕೆ ಜಮ್ಮು-ಕಾಶ್ಮೀರದಲ್ಲಿ 370ನೆ ವಿಧಿ ರದ್ದು ಮಾಡಿ, ಆ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶವಾಗಿ ವಿಭಜಿಸಿ ಒಂದು ವರ್ಷ ತುಂಬಲಿದೆ. ರಾಮ ಮಂದಿರ ನಿರ್ಮಾಣ ಮತ್ತು 370ನೆ ವಿಧಿ ರದ್ದು ಬಿಜೆಪಿಯ ಎರಡು ಪ್ರಮುಖ ಅಜೆಂಡಾ ಆಗಿದ್ದವು. ಕಳೆದ ವರ್ಷ ಆಗಸ್ಟ್ ನಲ್ಲಿ 370ನೆ ವಿಧಿ ರದ್ದಾಗಿತು. ನವೆಂಬರಿನಲ್ಲಿ ಸುಪ್ರೀಂಕೋರ್ಟ್ ವಿವಾದಿತ ಜಾಗದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಅನುಮತಿ ನೀಡಿತು.

Leave a Reply

Your email address will not be published. Required fields are marked *

You May Also Like

150ಕ್ಕೂ ಹೆಚ್ಚು ದೇಶಗಳಿಗೆ ಕೋವಿಡ್ ನೆರವು ನೀಡಿದ್ದೇವೆ: ಪ್ರಧಾನಿ ಮೋದಿ

ವಿಶ್ವದ ಜನಸಂಖ್ಯೆಯಲ್ಲಿ ಆರನೆ ಒಂದರಷ್ಟನ್ನು ಭಾರತ ಹೊಂದಿದೆ. ನಮ್ಮ ಜವಾಬ್ದಾರಿಯ ಅರಿವು ನಮಗಿದೆ ಎಂದು ಪದ್ರಧಾನಿ…

ಬುಧವಾರ ಭಾರತಕ್ಕೆ ಬರಲಿವೆ ರಫೇಲ್ ಯುದ್ಧ ವಿಮಾನ: ಸದ್ಯ ಫ್ರಾನ್ಸ್ ಬಿಟ್ಟಿವೆ ಫೈಟರ್ ಜೆಟ್ಸ್

ಸೋಮವಾರ ಫ್ರಾನ್ಸ್ ನಿಂದ ಹೊರಟಿರುವ ಮೊದಲ ಬ್ಯಾಚಿನ ರಫೇಲ್ ಯುದ್ಧ ಫ್ರಾನ್ಸ್ ಬಿಟ್ಟಿರುವ 5 ರಫೇಲ್ ಯುದ್ಧ ವಿಮಾನಗಳು 7 ಸಾವಿರ ಕಿಮೀ ದೂರ ಕ್ರಮಿಸಿ ಬುಧವಾರ ಭಾರತವನ್ನು ತಲುಪಲಿವೆ. ಯುಎಇನಲ್ಲಿರುವ ಫ್ರಾನ್ಸ್ ಏರ್ ಬೇಸ್ ನಲ್ಲಿ ಇಳಿದು ನಂತರ ಭಾರತ ತಲುಪಲಿವೆ. ಎವಿಯೇಷನ್ ಕಂಪನಿ ಡಸಾಲ್ಟ್ ನಿರ್ಮಿಸಿರುವ ಈ ಅತ್ಯಾಧುನಿಕ ಫೈಟರ್ ಜೆಟ್ಸ್ ದಕ್ಷಿಣ ಫ್ರಾನ್ಸಿನ ಬ್ರೊಡಾಕ್ಸ್ ನಗರದಿಂದ ಪ್ರಯಾಣ ಬೆಳೆಸಿವೆ. 2016ರಲ್ಲಿ ಭಾರತವು ಫ್ರಾನ್ಸ್ ಕಂಪನಿ ಡಸಾಲ್ಟ್ ಕಂಪನಿಯಿಂದ ಇಂತಹ 36 ವಿಮಾನಗಳನ್ನು ಖರೀದಿಸಲು 59 ಸಾವಿರ ಕೋಟಿ ರೂ.ಗಳ ಒಪ್ಪಂದ ಮಾಡಿಕೊಂಡಿತ್ತು. ಅದರ ಮೊದಲ ಭಾಗವಾಗಿ ಈಗ 5 ವಿಮಾನಗಳು ದೇಶದ ಸೇನೆಯ ಭಾಗವಾಗಲಿವೆ.

ಪಶ್ಚಿಮ ಬಂಗಾಳದಲ್ಲಿ ಜುಲೈ 31ರ ವರೆಗೆ ಲಾಕ್ ಡೌನ್!

ಕೋಲ್ಕತ್ತಾ : ದೇಶದಲ್ಲಿ ಕೊರೊನಾ ಮಹಾಮಾರಿಯ ಅಬ್ಬರ ಹೆಚ್ಚಾಗುತ್ತಿದೆ. ಇದರಿಂದಾಗಿ ಪಶ್ಚಿಮ ಬಂಗಾಳ ಸರ್ಕಾರ ಜುಲೈ…

ಆಂಧ್ರಪ್ರದೇಶ: ಎಸ್.ಎಸ್.ಎಲ್ಸಿ ಪರೀಕ್ಷೆ ರದ್ದುಗೊಳಿಸಿ ಆದೇಶ

ಆಂಧ್ರಪ್ರದೇಶ : ಮಹಾಮಾರಿಯ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶ ಸರ್ಕಾರ, ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.