ನವದೆಹಲಿ : ಭಾರತ ಕ್ರಿಕೆಟ್ ತಂಡದ ಆಟಗಾರ ಹರ್ಭಜನ್ ಸಿಂಗ್, ರಾಜ್ಯದ ಹೆಮ್ಮೆಯ ತಾಯಿಯನ್ನು ನೆನೆದು ಟ್ವೀಟ್ ಮಾಡಿದ್ದಾರೆ.
ಸಾಲುಮರದ ತಿಮ್ಮಕ್ಕ ಅವರನ್ನು ಭಜ್ಜಿ ನೆನೆದು ಟ್ವೀಟ್ ಮಾಡಿದ್ದಾರೆ. ಭಜ್ಜಿ ಕೊರೊನಾ ಲಾಕ್ಡೌ್ನ್ನಿಂತದ ಕ್ರಿಕೆಟ್ನಿಂ್ದ ಕೊಂಚ ಬಿಡುವು ಮಾಡಿಕೊಂಡಿದ್ದಾರೆ. ಹೀಗಾಗಿ ಅವರು ಸದಾ ಸಾಮಾಜಿಕ ಜಾಲತಾಣದಲ್ಲಿ ಸಕ್ರೀಯರಾಗಿದ್ದಾರೆ. ಈ ನಿಟ್ಟಿನಲ್ಲಿ ತಮ್ಮ ಖಾತೆಯಿಂದ ಹಲವು ವಿಚಾರಗಳನ್ನು ಹಂಚಿಕೊಳ್ಳುತ್ತಿದ್ದಾರೆ.
ರಾಜ್ಯದ ವೃಕ್ಷಮಾತೆ ಪದ್ಮಶ್ರೀ ಪ್ರಶಸ್ತಿ ವಿಜೇತೆ ಸಾಲುಮರದ ತಿಮ್ಮಕ್ಕ ಅವರಿಗೆ ಧನ್ಯವಾದ ಎಂದು ಹೇಳಿ ಟ್ವೀಟ್ ಮಾಡಿದ್ದಾರೆ. ಸಾಲುಮರದ ತಿಮ್ಮಕ್ಕ ಅವರ ಸಾಧನೆಯನ್ನು ನೆನಪಿಸಿಕೊಂಡು ಟ್ವೀಟ್ ಮಾಡಿರುವ ಹರ್ಭಜನ್, ಇವರು 73 ಸಾವಿರಕ್ಕೂ ಅಧಿಕ ಮರಗಳನ್ನು ನೆಟ್ಟು ಬೆಳೆಸಿದ್ದಾರೆ. ಆದರೆ ನಮ್ಮಲ್ಲಿ ಕೆಲವರಿಗೆ ಮಾತ್ರ ಇವರ ಬಗ್ಗೆ ಗೊತ್ತು. ಸಾಲುಮರದ ತಿಮ್ಮಕ್ಕನ ರೀತಿಯಲ್ಲಿ ನಾವು ಕೂಡ ಕಮ್ಮಿ ಎಂದು ಬರೆದುಕೊಂಡಿದ್ದಾರೆ.