ಯುಎಇಯಿಂದ 30 ಕೆಜಿ ಚಿನ್ನ ಸಾಗಿಸಿದ ಆರೋಪ ಎದುರಿಸುತ್ತಿರುವ ಸ್ವಪ್ನ ಟೀಮ್ ಇದೇ ಮಾದರಿಯಲ್ಲಿ ಒಟ್ಟು 180 ಕೆಜಿ ಚಿನ್ನ ಸಾಗಿಸಿದೆ ಎನ್ನಲಾಗಿದೆ.

ತಿರುವನಂತಪುರ: ಯುಎಇಯಿಂದ ಕೇರಳಕ್ಕೆ 30 ಕೆಜಿ ಚಿನ್ನವನ್ನು ರಾಯಭಾರ ಕಚೇರಿಯ ಛಾಯೆಯಲ್ಲಿ ಸಾಗಿಸಿರುವ ಸ್ವಪ್ನ ಸುರೇಶ್ ಮತ್ತು ಸರಿತ್ ಅವರನ್ನು ತಿರುವನಂತಪುರದ ವಿವಿಧ ಸ್ಥಳಗಳಿಗೆ ಶನಿವಾರ ಕರೆದೊಯ್ದು ಸಾಕ್ಷ್ಯ ಸಂಗ್ರಹಿಸಿದ ಎನ್ಐಎ ಅಧಿಕಾರಿಗಳು ಭಾನುವಾರವೂ ಈ ಪ್ರಕ್ರಿಯೆಯನ್ನು ಮುಂದುವರೆಸಿದ್ದಾರೆ.

ಇನ್ನಿಬ್ಬರು ಆರೋಪಿಗಳಾದ ಸಂದೀಪ್ ನಾಯರ್ ಮತ್ತು ರಮೀಜ್ ಸಾಕಷ್ಟು ಮಾಹಿತಿ ನೀಡಿದ್ದು, 30 ಕೆಜಿ ಚಿನ್ನ ಸಾಗಿಸಿದ ಮಾದರಿಯಲ್ಲೇ 12-13 ಸಲ ಸಾಗಾಣಿಕೆ ನಡೆಸಿದ್ದು 180 ಕೆಜಿಗೂ ಅಧಿಕ ಚಿನ್ನ ಸಾಗಿಸಿದ್ದಾರೆ ಎಂದು ಎನ್ಐಎ ತನಿಖಾಧಿಕಾರಿ ಎನ್ಡಿಟಿವಿಗೆ ತಿಳಿಸಿದ್ದಾರೆ.

ತಿರುವನಂತಪುರದ ಯುಎಇ ರಾಯಭಾರ ಕಚೇರಿಯ ಅಧಿಕಾರಿ ಈಗ ವಾಪಾಸ್ ಹೋಗಿದ್ದು, ಅವರ ವಿಚಾರಣೆಯ ನಂತರ ಮಹತ್ವದ ಮಾಹಿತಿ ಸಿಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಅಧಿಕಾರಿಯ ಹೆಸರಿಗೇ ಚಿನ್ನದ ಬ್ಯಾಗ್ ಬರುತ್ತಿದ್ದವು ಎಂದೂ ಅವರು ತಿಳಿಸಿದ್ದಾರೆ.

ಈ ನಡುವೆ ಕೊನ್ಸುಲ್ ಜನರಲ್ ಕಚೇರಿಗೆ ಸಂಬಂಧಿಸಿದ ಕೇರಳ ಪೊಲೀಸ್ ಅಧಿಕಾರಿಯೊಬ್ಬರಿಗೆ ಜೀವ ಬೆದರಿಕೆ ಕರೆ ಬಂದಿದ್ದವು. ಈಗ ಅವರ ಮೊಣಕೈಗಳಿಗೆ ಗಾಯವಾಗಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರ ಹೇಳಿಕೆ ಪಡೆಯಲಾಗಿದೆ.

ಈ ಚಿನ್ನ ಅಕ್ರಮ ಸಾಗಾಟದ ಪ್ರಕರಣದಲ್ಲಿ ಕೇರಳ ಸಿಎಂ ಕಚೇರಿಯ ಅಧಿಕಾರಿಯನ್ನು ಈಗಾಗಲೇ ವಜಾ ಮಾಡಲಾಗಿದೆ.

Leave a Reply

Your email address will not be published. Required fields are marked *

You May Also Like

ನರೇಗಾ ಕೂಲಿಗಾಗಿ ಗ್ರಾಮ ಪಂಚಾಯತಿಗೆ ಬೀಗ ಜಡಿದು ಪ್ರತಿಭಟನೆ

ಉದ್ಯೋಗಕ್ಕೆ ಖಾತ್ರಿಯಾಗಬೇಕಿದ್ದ ಯೋಜನೆ ಉದ್ಯೋಗಕ್ಕೆ ಕತ್ತರಿಯಾದರೆ ಹೇಗೆ? ಎನ್ನುವ ಪ್ರಶ್ನೆ ಉದ್ಭವವಾಗಿದೆ.

ನಟ ಸುಶಾಂತ್ ಆತ್ಮಹತ್ಯೆ – 8 ಜನ ಸೆಲೆಬ್ರಿಟಿಗಳ ಮೇಲೆ ದೂರು ದಾಖಲು!

ಪಾಟ್ನಾ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಜನ ಸೆಲೆಬ್ರಿಟಿಗಳ…

ಅರಣ್ಯ ಇಲಾಖೆಯಿಂದ ಸಹಸ್ರಾರು ಸಸಿ ನೆಡುವ ಕಾರ್ಯ ಜೋರು…! ಸಸ್ಯ ಪ್ರೇಮದಲ್ಲಿದೆ ನಮ್ಮೆಲ್ಲರ ಹಿತ

ಉತ್ತರಪ್ರಭ ಸುದ್ದಿ ಆಲಮಟ್ಟಿ: ಮನುಷ್ಯನಿಗೆ ಉಸಿರು ಎಷ್ಟು ಮುಖ್ಯವೋ ಜೀವನ ಚೈತ್ರದ ನೆಮ್ಮದಿಗೆ ಸಸ್ಯ ಪ್ರೇಮ…

” ಶಿಕ್ಷಕ- ಮಕ್ಕಳಲ್ಲಿ ನವ ಚೇತನ ತುಂಬಿದ ವಿಷಯ ವೇದಿಕೆ ” ಚಿತ್ರಕಲೆ ಪಠ್ಯಗಳ ಜೀವಾಳ

ಉತ್ತರಪ್ರಭ ಸುದ್ದಿವಿಜಯಪುರ: ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಹಾಗು ವ್ಯಕ್ತಿತ್ವ ವಿಕಸನಕ್ಕೆ ಚಿತ್ರಕಲೆ ಸಹಕಾರಿಯಾಗಿದೆ ಅಲ್ಲದೇ ಪಠ್ಯಾಧಾರೀತ…