ಯುಎಇಯಿಂದ 30 ಕೆಜಿ ಚಿನ್ನ ಸಾಗಿಸಿದ ಆರೋಪ ಎದುರಿಸುತ್ತಿರುವ ಸ್ವಪ್ನ ಟೀಮ್ ಇದೇ ಮಾದರಿಯಲ್ಲಿ ಒಟ್ಟು 180 ಕೆಜಿ ಚಿನ್ನ ಸಾಗಿಸಿದೆ ಎನ್ನಲಾಗಿದೆ.

ತಿರುವನಂತಪುರ: ಯುಎಇಯಿಂದ ಕೇರಳಕ್ಕೆ 30 ಕೆಜಿ ಚಿನ್ನವನ್ನು ರಾಯಭಾರ ಕಚೇರಿಯ ಛಾಯೆಯಲ್ಲಿ ಸಾಗಿಸಿರುವ ಸ್ವಪ್ನ ಸುರೇಶ್ ಮತ್ತು ಸರಿತ್ ಅವರನ್ನು ತಿರುವನಂತಪುರದ ವಿವಿಧ ಸ್ಥಳಗಳಿಗೆ ಶನಿವಾರ ಕರೆದೊಯ್ದು ಸಾಕ್ಷ್ಯ ಸಂಗ್ರಹಿಸಿದ ಎನ್ಐಎ ಅಧಿಕಾರಿಗಳು ಭಾನುವಾರವೂ ಈ ಪ್ರಕ್ರಿಯೆಯನ್ನು ಮುಂದುವರೆಸಿದ್ದಾರೆ.

ಇನ್ನಿಬ್ಬರು ಆರೋಪಿಗಳಾದ ಸಂದೀಪ್ ನಾಯರ್ ಮತ್ತು ರಮೀಜ್ ಸಾಕಷ್ಟು ಮಾಹಿತಿ ನೀಡಿದ್ದು, 30 ಕೆಜಿ ಚಿನ್ನ ಸಾಗಿಸಿದ ಮಾದರಿಯಲ್ಲೇ 12-13 ಸಲ ಸಾಗಾಣಿಕೆ ನಡೆಸಿದ್ದು 180 ಕೆಜಿಗೂ ಅಧಿಕ ಚಿನ್ನ ಸಾಗಿಸಿದ್ದಾರೆ ಎಂದು ಎನ್ಐಎ ತನಿಖಾಧಿಕಾರಿ ಎನ್ಡಿಟಿವಿಗೆ ತಿಳಿಸಿದ್ದಾರೆ.

ತಿರುವನಂತಪುರದ ಯುಎಇ ರಾಯಭಾರ ಕಚೇರಿಯ ಅಧಿಕಾರಿ ಈಗ ವಾಪಾಸ್ ಹೋಗಿದ್ದು, ಅವರ ವಿಚಾರಣೆಯ ನಂತರ ಮಹತ್ವದ ಮಾಹಿತಿ ಸಿಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಅಧಿಕಾರಿಯ ಹೆಸರಿಗೇ ಚಿನ್ನದ ಬ್ಯಾಗ್ ಬರುತ್ತಿದ್ದವು ಎಂದೂ ಅವರು ತಿಳಿಸಿದ್ದಾರೆ.

ಈ ನಡುವೆ ಕೊನ್ಸುಲ್ ಜನರಲ್ ಕಚೇರಿಗೆ ಸಂಬಂಧಿಸಿದ ಕೇರಳ ಪೊಲೀಸ್ ಅಧಿಕಾರಿಯೊಬ್ಬರಿಗೆ ಜೀವ ಬೆದರಿಕೆ ಕರೆ ಬಂದಿದ್ದವು. ಈಗ ಅವರ ಮೊಣಕೈಗಳಿಗೆ ಗಾಯವಾಗಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರ ಹೇಳಿಕೆ ಪಡೆಯಲಾಗಿದೆ.

ಈ ಚಿನ್ನ ಅಕ್ರಮ ಸಾಗಾಟದ ಪ್ರಕರಣದಲ್ಲಿ ಕೇರಳ ಸಿಎಂ ಕಚೇರಿಯ ಅಧಿಕಾರಿಯನ್ನು ಈಗಾಗಲೇ ವಜಾ ಮಾಡಲಾಗಿದೆ.

Leave a Reply

Your email address will not be published. Required fields are marked *

You May Also Like

ಪರಿಶಿಷ್ಟರ ಪಟ್ಟಿಗೆ ಸೇರಿದ ಪರಿವಾರ, ತಳವಾರ ಸಿದ್ದಿ ಸಮುದಾಯ: ಸರ್ಕಾರದಿಂದ ಗೆಜೆಟ್ ಆದೇಶ

ಬೆಂಗಳೂರು: ಪರಿವಾರ, ತಳವಾರ ಸಿದ್ದಿ ಸಮುದಾಯಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ರಾಜ್ಯ ಸರ್ಕಾರ ಗೆಜೆಟ್ ಆದೇಶ…

ವಿವಾದಕ್ಕೆ ಗುರಿಯಾದ ಪೊಗರು ಚಿತ್ರ

ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಧ್ರುವ ಸರ್ಜಾ ಅಭಿನಯದ ಪೊಗರು ಚಿತ್ರ ವಿವಾದವೊಂದಕ್ಕೆ ಗುರಿಯಾಗಿದೆ.

78 ವರ್ಷದ ಅಜ್ಜ ಮದುವೆಯಾಗಿದ್ದು 17 ವರ್ಷದ ಹುಡುಗಿಯನ್ನು!! ಮುಂದೆ ನಡೆದಿದ್ದೇನು?

ಜಕಾರ್ತಾ : 78 ವರ್ಷದ ಅಜ್ಜ 17ರ ಹುಡುಗಿಯನ್ನು ವಿವಾಹವಾಗುವ ಮೂಲಕ ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದಾರೆ. ಆದರೆ ವಿವಾಹವಾದ ಕೇವಲ 22 ದಿನಗಳಲ್ಲಿ ವಿಚ್ಛೇದನ ಪಡೆದಿದ್ದಾರೆ. ಅದೂ ಸಹ 78 ವರ್ಷದ ಅಜ್ಜನೇ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರುವುದು ವಿಶೇಷ.