ಯುಎಇಯಿಂದ 30 ಕೆಜಿ ಚಿನ್ನ ಸಾಗಿಸಿದ ಆರೋಪ ಎದುರಿಸುತ್ತಿರುವ ಸ್ವಪ್ನ ಟೀಮ್ ಇದೇ ಮಾದರಿಯಲ್ಲಿ ಒಟ್ಟು 180 ಕೆಜಿ ಚಿನ್ನ ಸಾಗಿಸಿದೆ ಎನ್ನಲಾಗಿದೆ.

ತಿರುವನಂತಪುರ: ಯುಎಇಯಿಂದ ಕೇರಳಕ್ಕೆ 30 ಕೆಜಿ ಚಿನ್ನವನ್ನು ರಾಯಭಾರ ಕಚೇರಿಯ ಛಾಯೆಯಲ್ಲಿ ಸಾಗಿಸಿರುವ ಸ್ವಪ್ನ ಸುರೇಶ್ ಮತ್ತು ಸರಿತ್ ಅವರನ್ನು ತಿರುವನಂತಪುರದ ವಿವಿಧ ಸ್ಥಳಗಳಿಗೆ ಶನಿವಾರ ಕರೆದೊಯ್ದು ಸಾಕ್ಷ್ಯ ಸಂಗ್ರಹಿಸಿದ ಎನ್ಐಎ ಅಧಿಕಾರಿಗಳು ಭಾನುವಾರವೂ ಈ ಪ್ರಕ್ರಿಯೆಯನ್ನು ಮುಂದುವರೆಸಿದ್ದಾರೆ.

ಇನ್ನಿಬ್ಬರು ಆರೋಪಿಗಳಾದ ಸಂದೀಪ್ ನಾಯರ್ ಮತ್ತು ರಮೀಜ್ ಸಾಕಷ್ಟು ಮಾಹಿತಿ ನೀಡಿದ್ದು, 30 ಕೆಜಿ ಚಿನ್ನ ಸಾಗಿಸಿದ ಮಾದರಿಯಲ್ಲೇ 12-13 ಸಲ ಸಾಗಾಣಿಕೆ ನಡೆಸಿದ್ದು 180 ಕೆಜಿಗೂ ಅಧಿಕ ಚಿನ್ನ ಸಾಗಿಸಿದ್ದಾರೆ ಎಂದು ಎನ್ಐಎ ತನಿಖಾಧಿಕಾರಿ ಎನ್ಡಿಟಿವಿಗೆ ತಿಳಿಸಿದ್ದಾರೆ.

ತಿರುವನಂತಪುರದ ಯುಎಇ ರಾಯಭಾರ ಕಚೇರಿಯ ಅಧಿಕಾರಿ ಈಗ ವಾಪಾಸ್ ಹೋಗಿದ್ದು, ಅವರ ವಿಚಾರಣೆಯ ನಂತರ ಮಹತ್ವದ ಮಾಹಿತಿ ಸಿಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಅಧಿಕಾರಿಯ ಹೆಸರಿಗೇ ಚಿನ್ನದ ಬ್ಯಾಗ್ ಬರುತ್ತಿದ್ದವು ಎಂದೂ ಅವರು ತಿಳಿಸಿದ್ದಾರೆ.

ಈ ನಡುವೆ ಕೊನ್ಸುಲ್ ಜನರಲ್ ಕಚೇರಿಗೆ ಸಂಬಂಧಿಸಿದ ಕೇರಳ ಪೊಲೀಸ್ ಅಧಿಕಾರಿಯೊಬ್ಬರಿಗೆ ಜೀವ ಬೆದರಿಕೆ ಕರೆ ಬಂದಿದ್ದವು. ಈಗ ಅವರ ಮೊಣಕೈಗಳಿಗೆ ಗಾಯವಾಗಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರ ಹೇಳಿಕೆ ಪಡೆಯಲಾಗಿದೆ.

ಈ ಚಿನ್ನ ಅಕ್ರಮ ಸಾಗಾಟದ ಪ್ರಕರಣದಲ್ಲಿ ಕೇರಳ ಸಿಎಂ ಕಚೇರಿಯ ಅಧಿಕಾರಿಯನ್ನು ಈಗಾಗಲೇ ವಜಾ ಮಾಡಲಾಗಿದೆ.

Leave a Reply

Your email address will not be published. Required fields are marked *

You May Also Like

ನಕಲಿ ಜಾತಿ ಪ್ರಮಾಣ ಪತ್ರ ಆರೋಪ: ಪಟ್ಟಣ ಪಂಚಾಯ್ತಿ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲು ಜಿಲ್ಲಾಧಿಕಾರಿಗಳಿಗೆ ಮನವಿ

ಸ್ಥಳೀಯ ಪಟ್ಟಣ ಪಂಚಾಯತಿಗೆ 2018 ರ ಚುನಾವಣೆಯಲ್ಲಿ ಎಸ್‌.ಸಿ ಮೀಸಲಿದ್ದ 11ನೇ ವಾರ್ಡನಿಂದ ಆಯ್ಕೆಯಾಗಿರುವ ಬಸವಂತಪ್ಪ ಶಿ. ಹಾರೋಗೇರಿ ಅವರ ಜಾತಿ ಪ್ರಮಾಣ ಪತ್ರ ನಕಲಿ ಇದ್ದು ತನಿಖೆ ನಡೆಸಿ ಪಪಂ ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಪ್ರತಿಸ್ಪರ್ದಿ ಮರಿಯಪ್ಪ ನೀ. ನಡಗೇರಿ ಆಗ್ರಹಿಸಿದರು.

ಗಡಿಯಲ್ಲಿ ಉದ್ವಿಗ್ನ – ಸನ್ನದ್ಧವಾಗಿ ಗಡಿ ಕಾಯುತ್ತಿರುವ ಮೂರು ಪಡೆಗಳು!

ನವದೆಹಲಿ: ಲಡಾಖ್ ನ ಗಡಿಯಲ್ಲಿ ಚೀನಾ – ಭಾರತದ ಸಂಬಂಧ ಉದ್ವಿಗ್ನ ಪರಿಸ್ಥಿತಿಗೆ ಬಂದು ನಿಂತಿದೆ.…

ನರೆಗಲ್ ಗಾರ್ಡನ್ ಕಥೆ: 10 ಲಕ್ಷ ಖರ್ಚು ಮಾಡಿ 9 ವರ್ಷವಾದ್ರು, ಉಪಯೋಗಕ್ಕೆ ಬಾರದ ಉದ್ಯಾನವನ..!

ಗದಗ: ದೇವಾಲಯದ ಪಕ್ಕದಲ್ಲಿರುವ ಉದ್ಯಾನವನ ದೇವರು ವರ ಕೊಟ್ರು ಪೂಜಾರಿ ವರ ಕೊಡಲಿಲ್ಲ ಎನ್ನುವಂತಿದೆ. ಸರ್ಕಾರ…

ಮುಂಡರಗಿ ಪುರಸಭೆ ಮುಖ್ಯಾಧಿಕಾರಿ ನಿಮ್ಮ ಓಣಿಯಲ್ಲೂ ಕಸ ಹಾಕಿರಬಹುದು ನೋಡಿ…!

ಮುಂಡರಗಿ: ಯಾವುದಕ್ಕೂ ಒಂಚೂರು ನೀವು ನಿಮ್ಮ ಮನೆಯಿಂದ ಹೊರಗೆ ಬಂದು ನೋಡಿ ಬೀಡಿ. ಯಾಕಂದ್ರೆ ನಿಮ್ಮ…