ಯುಎಇಯಿಂದ 30 ಕೆಜಿ ಚಿನ್ನ ಸಾಗಿಸಿದ ಆರೋಪ ಎದುರಿಸುತ್ತಿರುವ ಸ್ವಪ್ನ ಟೀಮ್ ಇದೇ ಮಾದರಿಯಲ್ಲಿ ಒಟ್ಟು 180 ಕೆಜಿ ಚಿನ್ನ ಸಾಗಿಸಿದೆ ಎನ್ನಲಾಗಿದೆ.

ತಿರುವನಂತಪುರ: ಯುಎಇಯಿಂದ ಕೇರಳಕ್ಕೆ 30 ಕೆಜಿ ಚಿನ್ನವನ್ನು ರಾಯಭಾರ ಕಚೇರಿಯ ಛಾಯೆಯಲ್ಲಿ ಸಾಗಿಸಿರುವ ಸ್ವಪ್ನ ಸುರೇಶ್ ಮತ್ತು ಸರಿತ್ ಅವರನ್ನು ತಿರುವನಂತಪುರದ ವಿವಿಧ ಸ್ಥಳಗಳಿಗೆ ಶನಿವಾರ ಕರೆದೊಯ್ದು ಸಾಕ್ಷ್ಯ ಸಂಗ್ರಹಿಸಿದ ಎನ್ಐಎ ಅಧಿಕಾರಿಗಳು ಭಾನುವಾರವೂ ಈ ಪ್ರಕ್ರಿಯೆಯನ್ನು ಮುಂದುವರೆಸಿದ್ದಾರೆ.

ಇನ್ನಿಬ್ಬರು ಆರೋಪಿಗಳಾದ ಸಂದೀಪ್ ನಾಯರ್ ಮತ್ತು ರಮೀಜ್ ಸಾಕಷ್ಟು ಮಾಹಿತಿ ನೀಡಿದ್ದು, 30 ಕೆಜಿ ಚಿನ್ನ ಸಾಗಿಸಿದ ಮಾದರಿಯಲ್ಲೇ 12-13 ಸಲ ಸಾಗಾಣಿಕೆ ನಡೆಸಿದ್ದು 180 ಕೆಜಿಗೂ ಅಧಿಕ ಚಿನ್ನ ಸಾಗಿಸಿದ್ದಾರೆ ಎಂದು ಎನ್ಐಎ ತನಿಖಾಧಿಕಾರಿ ಎನ್ಡಿಟಿವಿಗೆ ತಿಳಿಸಿದ್ದಾರೆ.

ತಿರುವನಂತಪುರದ ಯುಎಇ ರಾಯಭಾರ ಕಚೇರಿಯ ಅಧಿಕಾರಿ ಈಗ ವಾಪಾಸ್ ಹೋಗಿದ್ದು, ಅವರ ವಿಚಾರಣೆಯ ನಂತರ ಮಹತ್ವದ ಮಾಹಿತಿ ಸಿಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಅಧಿಕಾರಿಯ ಹೆಸರಿಗೇ ಚಿನ್ನದ ಬ್ಯಾಗ್ ಬರುತ್ತಿದ್ದವು ಎಂದೂ ಅವರು ತಿಳಿಸಿದ್ದಾರೆ.

ಈ ನಡುವೆ ಕೊನ್ಸುಲ್ ಜನರಲ್ ಕಚೇರಿಗೆ ಸಂಬಂಧಿಸಿದ ಕೇರಳ ಪೊಲೀಸ್ ಅಧಿಕಾರಿಯೊಬ್ಬರಿಗೆ ಜೀವ ಬೆದರಿಕೆ ಕರೆ ಬಂದಿದ್ದವು. ಈಗ ಅವರ ಮೊಣಕೈಗಳಿಗೆ ಗಾಯವಾಗಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರ ಹೇಳಿಕೆ ಪಡೆಯಲಾಗಿದೆ.

ಈ ಚಿನ್ನ ಅಕ್ರಮ ಸಾಗಾಟದ ಪ್ರಕರಣದಲ್ಲಿ ಕೇರಳ ಸಿಎಂ ಕಚೇರಿಯ ಅಧಿಕಾರಿಯನ್ನು ಈಗಾಗಲೇ ವಜಾ ಮಾಡಲಾಗಿದೆ.

Leave a Reply

Your email address will not be published. Required fields are marked *

You May Also Like

ಸರ್ಕಾರದ ಸಪ್ತಪದಿ ಯೋಜನೆಯಡಿ ಮದುವೆ ಆಗ್ಬೇಕಾ..? ಇಲ್ಲಿದೆ ಪೂರ್ಣ ಮಾಹಿತಿ

2019-20 ನೇ ಸಾಲಿನಿಂದ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯಲ್ಲಿ ಬರುವ ಅಧಿಸೂಚಿತ ದೇವಾಲಯಗಳಲ್ಲಿ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮಗಳನ್ನು ನಡೆಸಲು ಸೂತ್ತೋಲೆಗಳನ್ನು ಹೊರಡಿಸಲಾಗಿದೆ.

ರಾಜ್ಯದಲ್ಲಿಂದು 176 ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 176 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 7000…

ಗದಗನಲ್ಲಿ ‌ಮತ್ತೊಂದು ಕೊರೊನಾ ಪಾಸಿಟಿವ್..!

ಜಿಲ್ಲೆಯ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಬೆಂಗಳೂರಿನಲ್ಲಿ ಪತ್ತೆಯಾಗಿದೆ. P-4079 ರೋಗಿ ಗದಗನ ನಗರದ ನಿವಾಸಿಯಾಗಿದ್ದು ಇತ್ತಿಚೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದು ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಗದಗನಲ್ಲಿ ಮತ್ತೆ ಮೂವರಿಗೆ ಕೊರೋನಾ ಸೋಂಕು ದೃಢ

ಗದಗ: ಈಗಾಗಲೇ ಗದಗ ಜಿಲ್ಲೆಯಲ್ಲಿ ಕೊರೋನಾ ಸೋಂಕು ದೃಢಪಟ್ಟ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದರು. ಇದರಿಂದ…