ಹೈದರಾಬಾದ್: ಲಾಕ್ ಡೌನ್ ಹಿನ್ನೆಲೆಯಲ್ಲಿ ಹಲವು ದಿನಗಳ ನಂತರ ಸರ್ಕಾರ ಶೂಟಿಂಗ್ ಗೆ ಅವಕಾಶ ನೀಡಿದೆ. ಇದರಿಂದಾಗಿ ಕಲಾವಿದರಲ್ಲಿ ಹುರುಪು ಮನೆ ಮಾಡಿದೆ. ಈ ಕುರಿತು ನಟ ಕಿಚ್ಚ ಸುದೀಪ್ ಸಹ ಸುಧೀರ್ಘ ಸಮಯದ ಬಳಿಕ ಶೂಟಿಂಗ್ ಮರಳಿದ ಅನುಭವವನ್ನು ಹಂಚಿಕೊಂಡಿದ್ದಾರೆ.

ಅಲ್ಲದೇ, ಶೂಟಿಂಗ್‍ ಆರಂಭವಾಗಿರುವ ಕುರಿತು ಚಿತ್ರೀಕರಣದ ಚಿಕ್ಕ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಇಂದು ಮೇಕಪ್ ಹಾಕಿಕೊಂಡಾಗ ಅದ್ಭುತ ಅನುಭವವಾಯಿತು. ಸಿನಿಮಾ ಎಂಬ ಉತ್ಸಾಹ. ಹೀಗಾಗಿ ನಾನು ಇಲ್ಲಿದ್ದೇನೆ. ಮತ್ತೆ ವಿಕ್ರಾಂತ್ ರೋಣ ಘರ್ಜಿಸಲಿದ್ದಾನೆ ಎಂದು ಬರೆದುಕೊಂಡಿದ್ದಾರೆ.

ಕಿಚ್ಚ ಸುದೀಪ್ ಟ್ವೀಟ್ಗೆಿ ಅಭಿಮಾನಿಗಳು ಕಮೆಂಟ್ ಮಾಡುವ ಮೂಲಕ ಶುಭ ಕೋರುತ್ತಿದ್ದಾರೆ. ಹಲವು ದಿನಗಳ ಬಳಿಕ ಅಣ್ಣ ಶೂಟಿಂಗ್ಗೆ್ ಮರಳಿದ್ದಾರೆ. ವಾವ್ ಫೆಂಟಾಸ್ಟಿಕ್, ಯು ಲುಕ್ ಸ್ಟನ್ನಿಂಗ್ ಅಣ್ಣ ಎಂದು ಹೇಳಿದ್ದಾರೆ. ಫ್ಯಾಂಟಮ್ ಚಿತ್ರ ಕಿಚ್ಚ ಸುದೀಪ್ ಹಾಗೂ ರಂಗಿತರಂಗ ಸಾರಥಿ ಅನೂಪ್ ಭಂಡಾರಿ ಕಾಂಬಿನೇಷನ್ನಿಲ್ಲಿ ತಯಾರಾಗುತ್ತಿದೆ. ಸಿನಿಮಾ ಟೈಟಲ್ ಹಾಗೂ ಕಿಚ್ಚನ ವಿಕ್ರಾಂತ್ ರೋಣ ಪಾತ್ರದ ಕುರಿತು ಈಗಾಗಲೇ ಅಭಿಮಾನಿಗಳಲ್ಲಿ ಕುತೂಹಲ ಮೂಡಿದೆ. ಪೋಸ್ಟರ್ ನಲ್ಲಿ ಕಿಚ್ಚನ ಅರ್ಧ ಫೇಸ್ ನೋಡಿ, ಮೊನಚು ಮೀಸೆ ಮೋಡಿಗೆ ಅಭಿಮಾನಿಗಳು ಫುಲ್ ಫೀದಾ ಆಗಿದ್ದಾರೆ.

Leave a Reply

Your email address will not be published. Required fields are marked *

You May Also Like

ರೋಣ ಸಾಹಿತ್ಯ ಭವನದಲ್ಲಿ ಶ್ರೀ ವಾಲ್ಮೀಕಿ ಜಾತ್ರೆಯ ಪೂರ್ವಭಾವಿ ಸಭೆ

ರೋಣ: ಸಾಹಿತ್ಯ ಭವನದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ…

ಎಸ್ಎಸ್ಎಲ್ಸಿ ಪರೀಕ್ಷೆ ಬಗ್ಗೆ ಸಭೆಯಲ್ಲಿ ತೀರ್ಮಾನ: ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್

ಬೆಂಗಳೂರು: ಎಸ್ಎಸ್ಎಲ್ಸಿ ಪರಿಕ್ಷೆಯ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಸೋಮವಾರ ಸಭೆ ಸೇರುತ್ತಿದ್ದೇವೆ ಎಂದು ಪ್ರಾಥಮಿಕ ಮತ್ತು…

ಲಾರಿ ಬೈಕ್ ಅಪಘಾತ ವ್ಯಕ್ತಿ ಸಾವು ಅಪಘಾತಕ್ಕೆ ಪೋಲಿಸ್ ಪೆದೆ ಕಾರಣ, ಗ್ರಾಮಸ್ಥರ ಆರೋಪ

ಮುಳಗುಂದ : ಲಕ್ಷ್ಮೇಶ್ವರ ಕಡೆಯಿಂದ ಮುಳಗುಂದಕ್ಕೆ ಬರುತ್ತಿದ್ದ ಮರಳು ತುಂಬಿದ್ದ ಲಾರಿ ಹಿಂದಕ್ಕೆ ಚಲಿಸಿದ ಪರಿಣಾಮ…

ಮಗುವಿಗಾಗಿ ಆಹಾರ ಅರಸಿದ ತಾಯಿ..! ಇದು ಮಂಗಗಳ ಮಂಕಿಬಾತ್!

ದೇಶದೊಳಗ ಲಾಕ್ ಡೌನ್ ಶುರುವಾಗಿ 42 ದಿನದ ಹೊತ್ತಾಯಿತು. ಇಂಥಾದ್ರಾಗ, ಬಾಯಿದ್ದ ಮನುಷಾರಾ ಅನ್ನಕ್ಕಾಗಿ ಬಾಯಿ ಬಿಡುವಂಗಾಗೈತಿ. ಪಾಪ ಆ ತಾಯಿ ಹೃದಯ ತನ್ನ ಮಗಿವಿನ ಅನ್ನಕ್ಕಾಗಿ ಎಷ್ಟು ಪರದಾಡ್ತು ಅಂತಿರಿ. ಈ ದೃಷ್ಯ ಎಂಥವರ ಕರಳು ಹಿಂಡುತ್ತೆ..!