ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಕುರಿತಂತೆ ವಿಚಾರಣೆ ನಡೆಸುತ್ತಿರುವ ವಿಶೇಷ ಕೋರ್ಟ್ ಜುಲೈ 24ರಂದು ಲಾಲ್ ಕೃಷ್ಣ ಅದ್ವಾನಿ ಅವರ ಹೇಳಿಕೆ ಪಡೆಯಲಿದೆ.

ಲಕ್ನೋ: ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಎಸ್.ಕೆ. ಯಾದವ್ ಈ ಕುರಿತಾಗಿ ಹೇಳಿಕೆ ನೀಡಲು ಬಿಜೆಪಿ ಹಿರಿಯ ನಾಯಕರಾದ ಅದ್ವಾನಿ ಮತ್ತು ಮುರಳಿ ಮನೋಹರ ಜೋಶಿಯವರಿಗೆ ದಿನಾಂಕ ನಿಗದಿ ಮಾಡಿದ್ದಾರೆ.

ಜುಲೈ 23ರಂದು ಜೋಶಿ ಮತ್ತು 24ರಂದು ಅದ್ವಾನಿ ವಿಡಿಯೋ ಕಾನ್ಫರೆನ್ಸ್ ಮೂಲಕ ಹೇಳಿಕೆ ದಾಖಲಿಸಲಿದ್ದಾರೆ. ಜುಲೈ 22ರಂದು ಶಿವಸೇನಾದ ಮಾಜಿ ಸಂಸದ ಸತೀಶ್ ಪ್ರಧಾನ್ ಹೇಳಿಕೆ ದಾಖಲು ಮಾಡಲಿದ್ದಾರೆ.

ಡಿಸೆಂಬರ್ 6, 1992ರಂದು ಬಾಬ್ರಿ ಮಸೀದಿ ಧ್ವಂಸಗೊಂಡ ಪ್ರಕರಣದಲ್ಲಿ ಈ ಮೂವರು ವಿಚಾರಣೆ ಎದುರಿಸುತ್ತಿದ್ದು, ಕ್ರಿಮಿನಲ್ ಸಂಚಿನ ಆರೋಪ ಎದುರಿಸುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಮೋದಿ ಸರ್ಕಾರಕ್ಕೆ 2ನೇ ವರ್ಷದ ಸಂಭ್ರಮ: ಶುಭ ಕೋರಿದ ಯಡಿಯೂರಪ್ಪ

ಬೆಂಗಳೂರು: ತ್ರಿವಳಿ ತಲಾಖ್, 370ವಿಧಿ ರದ್ದು, ಪೌರತ್ವ ತಿದ್ದುಪಡಿ, ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣಕ್ಕೆ ವೇದಿಕೆ, ಸುಧಾರಣಾ…

ಬ್ರಿಟನ್‌ ವಿಮಾನಗಳಿಗೆ ಜನವರಿ 7ರ ವರೆಗೂ ನಿರ್ಬಂಧ..!

ಮತ್ತೆ ಬ್ರಿಟನ್‌ ವಿಮಾನಗಳಿಗೆ ಜನವರಿ 7ರ ವರೆಗೆ ಭಾರತ ನಿರ್ಬಂಧ ಹೇರಿದೆ. ಬ್ರಿಟನ್‌ ನಲ್ಲಿ ಹೊಸ ರೂಪಾಂತರಿ ವೈರಸ್‌ ಪತ್ತೆ ಹಿನ್ನೆಲೆ, ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಕೋವಿಡ್ ನಿಂದ ಮೃತ ಪಟ್ಟ ಪತ್ರಕರ್ತರ ಕುಟುಂಬಕ್ಕೆ 10 ಲಕ್ಷ ಪರಿಹಾರ

ಲಖನೌ: ಕೋವಿಡ್-19 ವೇಳೆ ಕರ್ತವ್ಯ ನಿಷ್ಠೆ ಮೆರೆದು ಪ್ರಾಣ ಕಳೆದುಕೊಂಡ ಪತ್ರಕರ್ತರ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರವನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ.

ಹೈದ್ರಾಬಾದ್ ನಲ್ಲಿ ವರುಣನ ರೌದ್ರನರ್ತನನಕ್ಕೆ ಬಲಿಯಾದವರು ಎಷ್ಟು ಜನ? ಹಾನಿಯಾದ ಆಸ್ತಿ ಮೊತ್ತ ಎಷ್ಟು?

ಹೈದ್ರಾಬಾದ್ : ಹೈದ್ರಾಬಾದ್ ನಲ್ಲಿ ಮತ್ತೆ ಮಳೆರಾಯ ತನ್ನ ರೌದ್ರನರ್ತನ ಪ್ರಾರಂಭಿಸಿದ್ದು, ಮತ್ತೆ ಇಬ್ಬರನ್ನು ಬಲಿ ಪಡೆದಿದ್ದಾನೆ. ಈ ಮೂಲಕ ಮಹಾಮಳೆಗೆ 50 ಜನ ಬಲಿಯಾದಂತಾಗಿದೆ.