ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಕುರಿತಂತೆ ವಿಚಾರಣೆ ನಡೆಸುತ್ತಿರುವ ವಿಶೇಷ ಕೋರ್ಟ್ ಜುಲೈ 24ರಂದು ಲಾಲ್ ಕೃಷ್ಣ ಅದ್ವಾನಿ ಅವರ ಹೇಳಿಕೆ ಪಡೆಯಲಿದೆ.

ಲಕ್ನೋ: ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಎಸ್.ಕೆ. ಯಾದವ್ ಈ ಕುರಿತಾಗಿ ಹೇಳಿಕೆ ನೀಡಲು ಬಿಜೆಪಿ ಹಿರಿಯ ನಾಯಕರಾದ ಅದ್ವಾನಿ ಮತ್ತು ಮುರಳಿ ಮನೋಹರ ಜೋಶಿಯವರಿಗೆ ದಿನಾಂಕ ನಿಗದಿ ಮಾಡಿದ್ದಾರೆ.

ಜುಲೈ 23ರಂದು ಜೋಶಿ ಮತ್ತು 24ರಂದು ಅದ್ವಾನಿ ವಿಡಿಯೋ ಕಾನ್ಫರೆನ್ಸ್ ಮೂಲಕ ಹೇಳಿಕೆ ದಾಖಲಿಸಲಿದ್ದಾರೆ. ಜುಲೈ 22ರಂದು ಶಿವಸೇನಾದ ಮಾಜಿ ಸಂಸದ ಸತೀಶ್ ಪ್ರಧಾನ್ ಹೇಳಿಕೆ ದಾಖಲು ಮಾಡಲಿದ್ದಾರೆ.

ಡಿಸೆಂಬರ್ 6, 1992ರಂದು ಬಾಬ್ರಿ ಮಸೀದಿ ಧ್ವಂಸಗೊಂಡ ಪ್ರಕರಣದಲ್ಲಿ ಈ ಮೂವರು ವಿಚಾರಣೆ ಎದುರಿಸುತ್ತಿದ್ದು, ಕ್ರಿಮಿನಲ್ ಸಂಚಿನ ಆರೋಪ ಎದುರಿಸುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಇನ್ಮೆಲೆ ಹೋಮ್ ಡಿಲೇವರಿ ಮೂಲಕ ಮದ್ಯ ಸಿಗುತ್ತಾ?

ಮದ್ಯ ಮಾರಾಟದ ಸ್ಥಳಗಳಲ್ಲಿ ಜನ ಸಂದಣಿ ಹೆಚ್ಚಾಗುತ್ತಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಆಗುತ್ತಿಲ್ಲ. ಈ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಹೋಮ್ ಡೆಲಿವರಿ ಕೈಗೊಳ್ಳಲು ಸಲಹೆ ನೀಡಿದೆ.

ನೋಕಿಯಾ ತಯಾರಿಕಾ ಘಟಕದ ಸಿಬ್ಬಂದಿಗೆ ಕೊರೊನಾ ಕಾಟ – ಕಂಪನಿ ಬಂದ್!

ಚೆನ್ನೈ: ತಮಿಳುನಾಡಿನಲ್ಲಿನ ನೋಕಿಯಾ ಫೋನ್ ತಯಾರಿಕಾ ಘಟಕದ 49 ಜನ ಸಿಬ್ಬಂದಿಗೆ ಕೊರೊನಾ ಅಂಟಿಕೊಂಡಿದೆ. ಹೀಗಾಗಿ…

ಯುದ್ಧಕ್ಕೆ ನೀವು ತಯಾರಿದ್ದರೆ ನಾವೂ ಸಿದ್ಧ!!

ನವದೆಹಲಿ : ಯುದ್ಧಕ್ಕೆ ಸಿದ್ಧವಾಗಿ ನಿಂತಿರುವ ಚೀನಾಕ್ಕೆ ಭಾರತ ತಕ್ಕ ಉತ್ತರ ನೀಡಿದೆ. ಯುದ್ಧಕ್ಕೆ ನೀವು ತಯಾರಿ ನಡೆಸಿದ್ದರೆ, ನಾವೂ ಸಿದ್ಧ ಎಂಬ ಮಾತನ್ನು ಭಾರತ ಹೇಳಿದೆ.

ಹತ್ರಾಸ್ ಸಂತ್ರಸ್ತೆ ಕುಟುಂಬ ಭೇಟಿಗೆ ರಾಹುಲ್ ಸಜ್ಜು

ಉತ್ತರಪ್ರದೇಶದ ಹತ್ರಾಸ್ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಯ ಕುಟುಂಬಸ್ತರ ಭೇಟಿಗೆ ಇಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ತೆರಳಲಿದ್ದಾರೆ. ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ವಿರುದ್ಧ ದೇಶಾದ್ಯಂತ ವಿಪಕ್ಷಗಳು, ದಲಿತಪರ ಸಂಘಟನೆಗಳು ಮತ್ತು ವಿವಿಧ ಸಂಘಟನೆಗಳು ಮತ್ತು ಜಾಲತಾಣಗಳಲ್ಲಿ ಕೂಡ ಜನರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ.