ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಕುರಿತಂತೆ ವಿಚಾರಣೆ ನಡೆಸುತ್ತಿರುವ ವಿಶೇಷ ಕೋರ್ಟ್ ಜುಲೈ 24ರಂದು ಲಾಲ್ ಕೃಷ್ಣ ಅದ್ವಾನಿ ಅವರ ಹೇಳಿಕೆ ಪಡೆಯಲಿದೆ.

ಲಕ್ನೋ: ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಎಸ್.ಕೆ. ಯಾದವ್ ಈ ಕುರಿತಾಗಿ ಹೇಳಿಕೆ ನೀಡಲು ಬಿಜೆಪಿ ಹಿರಿಯ ನಾಯಕರಾದ ಅದ್ವಾನಿ ಮತ್ತು ಮುರಳಿ ಮನೋಹರ ಜೋಶಿಯವರಿಗೆ ದಿನಾಂಕ ನಿಗದಿ ಮಾಡಿದ್ದಾರೆ.

ಜುಲೈ 23ರಂದು ಜೋಶಿ ಮತ್ತು 24ರಂದು ಅದ್ವಾನಿ ವಿಡಿಯೋ ಕಾನ್ಫರೆನ್ಸ್ ಮೂಲಕ ಹೇಳಿಕೆ ದಾಖಲಿಸಲಿದ್ದಾರೆ. ಜುಲೈ 22ರಂದು ಶಿವಸೇನಾದ ಮಾಜಿ ಸಂಸದ ಸತೀಶ್ ಪ್ರಧಾನ್ ಹೇಳಿಕೆ ದಾಖಲು ಮಾಡಲಿದ್ದಾರೆ.

ಡಿಸೆಂಬರ್ 6, 1992ರಂದು ಬಾಬ್ರಿ ಮಸೀದಿ ಧ್ವಂಸಗೊಂಡ ಪ್ರಕರಣದಲ್ಲಿ ಈ ಮೂವರು ವಿಚಾರಣೆ ಎದುರಿಸುತ್ತಿದ್ದು, ಕ್ರಿಮಿನಲ್ ಸಂಚಿನ ಆರೋಪ ಎದುರಿಸುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಆನ್ ಲೈನ್ ತರಗತಿ ಹಾಜರಿಗೆ ವೈಫಲ್ಯ: ಆತ್ಮಹತ್ಯೆ ದಾರಿ ಹಿಡಿದ ವಿದ್ಯಾರ್ಥಿನಿ

9ನೇ ತರಗತಿ ವಿದ್ಯಾರ್ಥಿನಿ ಮಲಪ್ಪುರಂ ಜಿಲ್ಲೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಕುರಿತು ಪ್ರತಿಕ್ರಿಯಿಸಿರುವ ಕುಟುಂಬಸ್ಥರು, ಆನ್ ಲೈನ್ ತರಗತಿಗೆ ಹಾಜರಾಗಲು ಸಾಧ್ಯವಾಗದೇ ಇರುವ ಕಾರಣಕ್ಕೆ ತೀವ್ರವಾಗಿ ತಳಮಳಕ್ಕೀಡಾಗಿ ಇಂತಹ ಕೃತ್ಯಕ್ಕೆ ಶರಣಾಗಿದ್ದಾಳೆ ಎಂದಿದ್ದಾರೆ. ಇವರು ಪರಿಶಿಷ್ಟ ಜಾತಿಗೆ ಸೇರಿದ್ದಾರೆ ಎಂದು ವರದಿಯಾಗಿದೆ.

ಹಲವು ವರ್ಷಗಳಲ್ಲಿ 139 ಜನರಿಂದ ಅತ್ಯಾಚಾರಕ್ಕೊಳಗಾದ ಮಹಿಳೆ

ಮಹಿಳೆಯೊಬ್ಬರಿಗೆ ಕೆಲವು ವರ್ಷಗಳಲ್ಲಿ 139 ಜನರು ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ನಡೆದಿದ್ದು, 25 ವರ್ಷದ ಮಹಿಳೆ ಈ ಕುರಿತು ದೂರು ದಾಖಲಿಸಿದ್ದಾರೆ. ಈ ಸಂತ್ರಸ್ಥ ಮಹಿಳೆಗೆ 2010ರಲ್ಲಿ ವಿವಾಹವಾಗಿತ್ತು. ಆದರೆ, ಈ ಮಹಿಳೆ ಒಂದೇ ವರ್ಷದಲ್ಲಿ ಪತಿಯಿಂದ ವಿಚ್ಛೇದನ ಪಡೆದಿದ್ದರು. ಹೀಗಾಗಿ ಮಾಜಿ ಪತಿಯ ಕೆಲವು ಕುಟುಂಬ ಸದಸ್ಯರು ನನ್ನ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

ದೀಪಾವಳಿಗೆ ಸಾರಿಗೆ ಸಂಸ್ಥೆಯಿಂದ ಹೆಚ್ಚುವರಿ ಬಸ್!

ಬೆಂಗಳೂರ : ದೀಪಾವಳಿಯ ಅಂಗವಾಗಿ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಸಾರಿಗೆ ಸಂಸ್ಥೆ 1 ಸಾವಿರ ಹೆಚ್ಚುವರಿ ಬಸ್ ಗಳನ್ನು ಓಡಿಸಲು ಮುಂದಾಗಿದೆ.

ಭಾರತೀಯ ಯೋಧರ ದಾಳಿಗೆ , ಹಿಜ್ಬುಲ್ ಮುಜಾಹಿದ್ದೀನ್ ಅತ್ಯುಗ್ರ ರಿಯಾಜ್ ನಾಯ್ಕೂ ಹತ

ಭಾರತದ ಶತ್ರು, ಹಿಜ್ಬುಲ್ ಮುಜಾಹಿದ್ದೀನ್ ಅತ್ಯುಗ್ರ ರಿಯಾಜ್ ನಾಯ್ಕೂನನ್ನು ಭದ್ರತಾ ಪಡೆ ಯೋಧರು ಮುಗಿಸಿದ್ದಾರೆ.