ಯಾವುದೇ ಬ್ಯಾಂಕ್ ತನ್ನ ಜಾಗವನ್ನು ಇತರೆ ಉದ್ದೇಶಗಳಿಗಾಗಿ ಲೀಸ್ ಅಥವಾ ಬಾಡಿಗೆಗೆ ಕೊಡುವಂತಿಲ್ಲ.

ಮುಂಬೈ: ಖಾಸಗಿ ಬ್ಯಾಂಕಿನ ಮುಖ್ಯಸ್ಥರೊಬ್ಬರು ತಮ್ಮ ಪತ್ನಿಯ ಎನ್.ಜಿ.ಒ.ಗೆ ತಮ್ಮ ಬ್ಯಾಂಕಿನ ಪಕ್ಕದ ಜಾಗವನ್ನು ಬಳಸಿಕೊಳ್ಳಲು ನೀಡಿದ್ದ ವಿಷಯ ಈಗ ಬೆಳಕಿಗೆ ಬಂದಿದೆ. ತಿಂಗಳಿಗೆ ನಾಮಕಾವಸ್ಥೆ ಒಂದೇ ಒಂದು ರೂಪಾಯಿ ಬಾಡಿಗೆಯಷ್ಟೇ ಎಂದು ಎನ್.ಡಿ.ಟಿ.ವಿ ವರದಿ ಮಾಡಿದೆ.

ಯೆಸ್ ಬ್ಯಾಂಕ್ ಸೇರಿದಂತೆ ಕೆಲವು ಬ್ಯಾಂಕ್ ಗಳು ದಿವಾಳಿ ಹೊಂದಿದ್ದರ ಹಿಂದೆ ಬ್ಯಾಂಕ್ ಅಧ್ಯಕ್ಷರು ಮತ್ತು ಆಡಳಿತ ಮಂಡಳಿ ಸದಸ್ಯರ ಸ್ವಾರ್ಥವಿತ್ತು ಎನ್ನುವುದನ್ನು ನೋಡಿದ್ದೇವೆ.

ಈಗ ಐಡಿಎಫ್ಸಿ ಬ್ಯಾಂಕ್ ಅಧ್ಯಕ್ಷ ರಾಜೀವ್ ಲಾಲ್ ದಕ್ಷಿಣ ಮುಂಬೈನ ಬ್ಯಾಂಕಿನ ಕೇಂದ್ರ ಕಚೇರಿಯ ಪಕ್ಕದ ಬೆಲೆಬಾಳುವ ಜಾಗವನ್ನು 2015-19ರ ಅವಧಿಗೆ ಅವರ ಪತ್ನಿಯ ಎನ್.ಜಿ.ಒ ಏಷ್ಯಾ ಸೊಸೈಟಿ ಇಂಡಿಯಾ ಸೆಂಟರ್ (ಎ.ಎಸ್ಐ.ಸಿ)ಗೆ ಕೇವಲ ಒಂದು ರೂ. ಮಾಸಿಕ ಬಾಡಿಗೆಗೆ ನೀಡಿದ್ದರು.

ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆಯ ಸೆಕ್ಷನ್ 6 ಮತ್ತು 9ರ ಪ್ರಕಾರ ಇದು ಅಪರಾಧ. 2015-18ರ ಅವಧಿಯಲ್ಲಿ ಲಾಲ್ ಬ್ಯಾಂಕಿನ ಎಂಡಿಯಾಗಿದ್ದರು. 2016-17 ಮತ್ತು 2017-18ರ ವಾರ್ಷಿಕ ವರದಿಯಲ್ಲಿ ಈ ವಿಷಯವನ್ನು ಅವರು ಮರೆಮಾಚಿದ್ದರು. 2018ರಲ್ಲಿ ಅವರು ಬ್ಯಾಂಕಿನ ಚೇರ್ಮನ್ ಆದ ಬಳಿಕ ಐಡಿಎಫ್ಸಿ ಫಸ್ಟ್ ಬ್ಯಾಂಕ್ ಎಂದು ಹೆಸರು ಬದಲಾಯಿಸಲಾಗಿದೆ.

ಬ್ಯಾಂಕುಗಳ ಮ್ಯಾನೇಜರುಗಳು, ಎಂಡಿಗಳು ಮತ್ತು ಚೇರ್ಮನ್ಗಳು ಆರ್.ಬಿ.ಐ ನಿಯಮಾವಳಿ ಉಲ್ಲಂಘಿಸಿ ಸ್ವಾರ್ಥ ಮೆರೆಯುವ ಕಾರಣದಿಂದ ಬಹುಪಾಲು ಖಾಸಗಿ ಬ್ಯಾಂಕುಗಳು ತಮ್ಮ ಸಾಮಾನ್ಯ ಗ್ರಾಹಕರನ್ನು ವಂಚಿಸುತ್ತಿವೆ. ಲಾಲ್ ಪ್ರಕರಣ ಒಂದು ತಾಜಾ ಉದಾಹರಣೆ ಅಷ್ಟೇ. ಆರ್.ಬಿ.ಐ. ಏನು ಕ್ರಮ ಕೈಗೊಳ್ಳುತ್ತದೆ ನೋಡಬೇಕು.

Leave a Reply

Your email address will not be published. Required fields are marked *

You May Also Like

ಮತದಾನ ಬಹಿಸ್ಕಾರ ಮಾಡಿದರೆ ಸಂವಿಧಾನಕ್ಕೆ ಅವಮಾನ ಮಾಡಿದಂತೆ : ಕಳಕಪ್ಪ ಬಂಡಿ

ಉತ್ತರ ಪ್ರಭ ಸುದ್ದಿರೋಣ : ತಾಲೂಕಿನ ಜಿಗಳೂರ ಗ್ರಾಮದಲ್ಲಿ ಸುಮಾರು 20 ಲಕ್ಷ ವೆಚ್ಚದ ಅಂಬೇಡ್ಕರ್…

ಇನ್ಮುಂದೆ ಕನ್ನಡದಲ್ಲೂ ಇಂಜನೀಯರಿಂಗ್ ಕಲಿಬಹುದಂತೆ!

ಅದೆಷ್ಟೋ ವಿದ್ಯಾರ್ಥಿಗಳಿಗೆ ನಾನು ಡಾಕ್ಟರ್ ಆಗಬೇಕು. ಇಂಜನೀಯರ್ ಆಗಬೇಕು ಎನ್ನುವ ಕನಸಿರುತ್ತೆ. ಆದರೆ ಅದರಲ್ಲಿನ ಇಂಗ್ಲೀಷ ಜ್ಞಾನದ ಕೊರತೆಯಿಂದ ಜನೀಯರಿಂಗ್ ಕಲಿಯಲು ಹಿಂದೇಟು ಹಾಕುವವರೇ ಬಹಳಷ್ಟು ಜನರಿದ್ದರು. ಅದರಲ್ಲೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಈ ಸಮಸ್ಯೆ ಹೆಚ್ಚು ಕಂಡು ಬರುತ್ತಿತ್ತು. ಆದರೆ ಇದೀಗ ಇದೊಕ್ಕೊಂದು ಪರಿಹಾರ ಸಿಕ್ಕಿದೆ. ಮಾತೃಭಾಷೆಯಲ್ಲಿಯೂ ಇಂಜನೀಯರಿಂಗ್ ಮಾಡಲು ಅವಕಾಶ ಕಲ್ಪಿಸಲು ಸರ್ಕಾರ ಮುಂದಾಗಿದೆ.

ಕಲಾವಿದರಿಗೆ ಆರ್ಥಿಕ ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನ

ಗದಗ: ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕರೋನಾ ವೈರಸ್‌ನ ಎರಡನೇ ಅಲೆಯ ತೀವ್ರತೆಯನ್ನು ನಿಯಂತ್ರಿಸಲು ರಾಜ್ಯದ ಎಲ್ಲ ರೀತಿಯ ಚಟುವಟಿಕೆಗಳನ್ನು ನಿರ್ಭಂದಿಸಿ ಲಾಕಡೌನ್ ಘೋಷಿಸಲಾಗಿದ್ದು ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರು ಮತ್ತು ಕಲಾತಂಡಗಳ ಪ್ರತಿ ಫಲಾನುಭವಿಗಳಿಗೆ ತಲಾ 3,000 ರೂ.ಗಳಂತೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಲಾಗಿದೆ.

ಗದಗ ಸಮಾಜ ಕಲ್ಯಾಣ ಇಲಾಖೆಯ ವಿವಿಧ ವಸತಿ ನಿಲಯಗಳಲ್ಲಿ ಸಂತ ಶ್ರೀ ಸೇವಾಲಾಲ್ ಮಹಾರಾಜರ 283 ನೇ ಜಯಂತಿಯ ಆಚರಣೆ

ಗದಗ:PPG SC/ST ವಸತಿ ನಿಲಯ ಗದಗದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಜಯಂತಿ ಆಚರಿಸಲಾಯಿತು.ಈ ಸಂದರ್ಭದಲ್ಲಿ…