ಬೆಂಗಳೂರು : ಜನಪ್ರಿಯ ಟಿವಿ ಧಾರಾವಾಹಿ ಜೊತೆ ಜೊತೆಯಲಿ ನಿರ್ದೇಶಕ ಆರೂರು ಜಗದೀಶ್ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅವರನ್ನು ಕಳೆದ ಒಂದು ವಾರದಿಂದ ಜಗದೀಶ್ ಮಣಿಪಾಲದ ಕಸ್ತೂರಬಾ ಮೆಡಿಕಲ್ ಕಾಲೇಜಿಗೆ ದಾಖಲಿಸಲಾಗಿದೆ. ಪತಿ ಅನಾರೋಗ್ಯಕ್ಕೀಡಾದ ಬಗ್ಗೆ ಜಗದೀಶ್ ಪತ್ನಿ ಹಾಗೂ ಜೆಎಸ್ ಪ್ರೊಡಕ್ಷನ್ನ ಮಾಲೀಕರಾದ  ನಿರ್ಮಾಪಕಿ ಸ್ಮಿತಾ ಜಗದೀಶ್ ಸಾಮಾಜಿಕ ತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ನನ್ನ ಪತಿ ಮಣಿಪಾಲದ ಕಸ್ತೂರಬಾ ಮೆಡಿಕಲ್ ಕಾಲೇಜಿನಲ್ಲಿ ಕಳೆದ ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗಾಗಿ ಅವರ ಬದಲು ಅವರ ಪತ್ನಿಯಾದ ನಾನು ಪತಿಯ ಹುಟ್ಟುಹಬ್ಬಕ್ಕೆ ಶುಭ ಕೋರಿದ ಎಲ್ಲಾ ಅಭಿಮಾನಿಗಳಿಗೆ ಧನ್ಯವಾದ ಹೇಳುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಜನಪ್ರಿಯ ಧಾರಾವಾಹಿ ಜೊತೆ ಜೊತೆಯಲಿ ಲಾಕ್ ಡೌನ್ ಬಳಿಕ ಮತ್ತೆ ಪ್ರಾರಂಭವಾಗಿತ್ತು.  ಏಪ್ರಿಲ್ 25ರಿಂದ ಚಿತ್ರೀಕರಣ ಪ್ರಾರಂಭಿಸಿದ್ದ ತಂಡದೊಡನೆ ನಿರ್ದೇಶಕ ಜಗದೀಶ್ ಸಕ್ರೀಯವಾಗಿ ಕಾರ್ಯನಿರ್ವಹಿಸಿದ್ದರು. ಆದರೆ ಒಂದು ವಾರದ ಹಿಂದೆ ಅವರಿಗೆ ಅನಾರೋಗ್ಯ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಧ್ಯ ಮತ್ತೆ ಲಾಕ್ ಡೌನ್ ಇರುವ ಕಾರಣ ಚಿತ್ರೀಕರಣವೂ ಸ್ಥಗಿತವಾಗಿದೆ.

Leave a Reply

Your email address will not be published. Required fields are marked *

You May Also Like

ಸೂಪರ್ ಸ್ಟಾರ್ ಚಿತ್ರ ತಂಡದ ಗಿಫ್ಟ್ ಏನು ಗೊತ್ತಾ?

ಸೂಪರ್ ಸ್ಟಾರ್ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ಸುಧೀಂದ್ರ ಅಭಿನಯದ ಚಿತ್ರಕ್ಕೆ ನಟ ಯಶ್ ಸಾಥ್ ನೀಡಿದ್ದಾರೆ. ನಿರಂಜನ್ ಅಭಿನಯದ ಸೂಪರ್ ಸ್ಟಾರ್ ಚಿತ್ರದ ಟೀಸರ್ ಗೆ ರಾಕಿಂಗ್ ಸ್ಟಾರ್ ಧ್ವನಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. ಇತ್ತೀಚೆಗಷ್ಟೇ ಸೂಪರ್ ಸ್ಟಾರ್ ಚಿತ್ರದ ಶೀರ್ಷಿಕೆ ಬಿಡುಗಡೆಯಾಗಿತ್ತು. ಈ ಸಮಾರಂಭದಲ್ಲಿ ನಟ ಉಪೇಂದ್ರ ಹಾಗೂ ಪ್ರಿಯಾಂಕ್ ಉಪೇಂದ್ರ ಭಾಗಿಯಾಗಿದ್ದರು.

ವಿಜಯ್ ದೇವರಕೊಂಡ ಅಭಿನಯದ ಹೊಸ ಚಿತ್ರ ಯಾವಾಗ ರಿಲೀಸ್ ಗೊತ್ತಾ?

ಹೈದರಾಬಾದ್ : ಟಾಲಿವುಡ್‌ ಬಹುಬೇಡಿಕೆಯ ನಟ ವಿಜಯ್ ದೇವರಕೊಂಡ ಅವರ ಮುಂದಿನ ಸಿನಿಮಾ ಲೈಗರ್‌ ಸೆ. 9ಕ್ಕೆ ರಿಲೀಸ್ ಆಗಲಿದೆ ಎಂದು ತಿಳಿದು ಬಂದಿದೆ.

ಕಿರಿಕ್ ಬೆಡಗಿಗೆ ವಿಜಯ್ ಕಳುಹಿಸಿದ ಸಂದೇಶವೇನು?

ಬೆಂಗಳೂರು: ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಅವರಿಗೆ ವಿಜಯ್ ದೇವರಕೊಂಡ ಸಂದೇಶ ಕಳುಹಿಸಿದ್ದಾರೆ. ಹೈದರಾಬಾದ್ಗೆ ಬಾ…

ನಟಿ ಗೆಹನಾ ಅರೆಸ್ಟ್! ವಿಷಯ ಕೇಳಿದರೆ ಶಾಕ್ ಆಗುತ್ತೆ!!

ಮುಂಬಯಿ : ಸೆಕ್ಸ್ ವಿಡಿಯೋ ಅಪ್ಲೋಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು, ನಟಿ ಗೆಹನಾ ವಸಿಷ್ಠ ಅವರನ್ನು ಬಂಧಿಸಿದ್ದಾರೆ.