ಬೆಂಗಳೂರು : ಜನಪ್ರಿಯ ಟಿವಿ ಧಾರಾವಾಹಿ ಜೊತೆ ಜೊತೆಯಲಿ ನಿರ್ದೇಶಕ ಆರೂರು ಜಗದೀಶ್ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅವರನ್ನು ಕಳೆದ ಒಂದು ವಾರದಿಂದ ಜಗದೀಶ್ ಮಣಿಪಾಲದ ಕಸ್ತೂರಬಾ ಮೆಡಿಕಲ್ ಕಾಲೇಜಿಗೆ ದಾಖಲಿಸಲಾಗಿದೆ. ಪತಿ ಅನಾರೋಗ್ಯಕ್ಕೀಡಾದ ಬಗ್ಗೆ ಜಗದೀಶ್ ಪತ್ನಿ ಹಾಗೂ ಜೆಎಸ್ ಪ್ರೊಡಕ್ಷನ್ನ ಮಾಲೀಕರಾದ  ನಿರ್ಮಾಪಕಿ ಸ್ಮಿತಾ ಜಗದೀಶ್ ಸಾಮಾಜಿಕ ತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ನನ್ನ ಪತಿ ಮಣಿಪಾಲದ ಕಸ್ತೂರಬಾ ಮೆಡಿಕಲ್ ಕಾಲೇಜಿನಲ್ಲಿ ಕಳೆದ ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗಾಗಿ ಅವರ ಬದಲು ಅವರ ಪತ್ನಿಯಾದ ನಾನು ಪತಿಯ ಹುಟ್ಟುಹಬ್ಬಕ್ಕೆ ಶುಭ ಕೋರಿದ ಎಲ್ಲಾ ಅಭಿಮಾನಿಗಳಿಗೆ ಧನ್ಯವಾದ ಹೇಳುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಜನಪ್ರಿಯ ಧಾರಾವಾಹಿ ಜೊತೆ ಜೊತೆಯಲಿ ಲಾಕ್ ಡೌನ್ ಬಳಿಕ ಮತ್ತೆ ಪ್ರಾರಂಭವಾಗಿತ್ತು.  ಏಪ್ರಿಲ್ 25ರಿಂದ ಚಿತ್ರೀಕರಣ ಪ್ರಾರಂಭಿಸಿದ್ದ ತಂಡದೊಡನೆ ನಿರ್ದೇಶಕ ಜಗದೀಶ್ ಸಕ್ರೀಯವಾಗಿ ಕಾರ್ಯನಿರ್ವಹಿಸಿದ್ದರು. ಆದರೆ ಒಂದು ವಾರದ ಹಿಂದೆ ಅವರಿಗೆ ಅನಾರೋಗ್ಯ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಧ್ಯ ಮತ್ತೆ ಲಾಕ್ ಡೌನ್ ಇರುವ ಕಾರಣ ಚಿತ್ರೀಕರಣವೂ ಸ್ಥಗಿತವಾಗಿದೆ.

Leave a Reply

Your email address will not be published. Required fields are marked *

You May Also Like

ನಟ ಸುಶಾಂತ್ ಪ್ರಕರಣದ ತನಿಖೆ ಕೊನೆಗೊಳಿಸಲು ನಿರ್ಧರಿಸಿದ ಸಿಬಿಐ!

ಮುಂಬಯಿ : ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಪ್ರಕರಣದ ತನಿಖೆಗೆ ಅಂತ್ಯ ಹಾಡಲು ಸಿಬಿಐ ನಿರ್ಧರಿಸಿದೆ.

ಸಾಯುವ ಸಮಯವನ್ನು ನಟ ಸುಶಾಂತ್ ಮೊದಲೇ ನಿರ್ಧರಿಸಿದ್ದರೆ?

ಬೆಂಗಳೂರು: ನಟ ಸುಶಾಂತ್ ಸಿಂಗ್ ರಜಪೂತ್ ಅವರ ಆತ್ಮಹತ್ಯೆಯ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದು, ಹಲವರ…

ನಟ ಸಲ್ಮಾನ್ ಖಾನ್ ಈ ರೀತಿ ಮಾಡಿದ್ದು ಸತ್ಯವೇ? ಸರಿಯೇ?

ಮುಂಬಯಿ : ಕೊರೊನಾದ ಅಬ್ಬರದ ನಡುವೆ ಬಾಲಿವುಡ್ ನ ಒಂದೊಂದೆ ಮುಖಗಳು ಅನಾವರಣಕ್ಕೆ ಬರುತ್ತಿವೆ. ಯುವ ನಟ ಸುಶಾಂತ್‌ ಸಿಂಗ್‌ ರಜಪೂತ್‌ ನಿಧನದ ನಂತರ ಅನೇಕ ಸತ್ಯಗಳು ಹೊರ ಬರುತ್ತಿವೆ. ಪಕ್ಷಪಾತ, ಗುಂಪುಗಾರಿಕೆ, ಕೀಳು ರಾಜಕೀಯದ ಕುರಿತು ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ.

ಉಸಿರಾಟ ತೊಂದರೆಯಿಂದ ನಟ ಚಿರಂಜೀವಿ ಸರ್ಜಾ ಸಾವು..!

ನಟ ಚಿರಂಜೀವಿ ಸರ್ಜಾ ಉಸಿರಾಟದ ತೊಂದರೆ ಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದರು.