ಬೆಂಗಳೂರು : ಜನಪ್ರಿಯ ಟಿವಿ ಧಾರಾವಾಹಿ ಜೊತೆ ಜೊತೆಯಲಿ ನಿರ್ದೇಶಕ ಆರೂರು ಜಗದೀಶ್ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅವರನ್ನು ಕಳೆದ ಒಂದು ವಾರದಿಂದ ಜಗದೀಶ್ ಮಣಿಪಾಲದ ಕಸ್ತೂರಬಾ ಮೆಡಿಕಲ್ ಕಾಲೇಜಿಗೆ ದಾಖಲಿಸಲಾಗಿದೆ. ಪತಿ ಅನಾರೋಗ್ಯಕ್ಕೀಡಾದ ಬಗ್ಗೆ ಜಗದೀಶ್ ಪತ್ನಿ ಹಾಗೂ ಜೆಎಸ್ ಪ್ರೊಡಕ್ಷನ್ನ ಮಾಲೀಕರಾದ  ನಿರ್ಮಾಪಕಿ ಸ್ಮಿತಾ ಜಗದೀಶ್ ಸಾಮಾಜಿಕ ತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ನನ್ನ ಪತಿ ಮಣಿಪಾಲದ ಕಸ್ತೂರಬಾ ಮೆಡಿಕಲ್ ಕಾಲೇಜಿನಲ್ಲಿ ಕಳೆದ ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗಾಗಿ ಅವರ ಬದಲು ಅವರ ಪತ್ನಿಯಾದ ನಾನು ಪತಿಯ ಹುಟ್ಟುಹಬ್ಬಕ್ಕೆ ಶುಭ ಕೋರಿದ ಎಲ್ಲಾ ಅಭಿಮಾನಿಗಳಿಗೆ ಧನ್ಯವಾದ ಹೇಳುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಜನಪ್ರಿಯ ಧಾರಾವಾಹಿ ಜೊತೆ ಜೊತೆಯಲಿ ಲಾಕ್ ಡೌನ್ ಬಳಿಕ ಮತ್ತೆ ಪ್ರಾರಂಭವಾಗಿತ್ತು.  ಏಪ್ರಿಲ್ 25ರಿಂದ ಚಿತ್ರೀಕರಣ ಪ್ರಾರಂಭಿಸಿದ್ದ ತಂಡದೊಡನೆ ನಿರ್ದೇಶಕ ಜಗದೀಶ್ ಸಕ್ರೀಯವಾಗಿ ಕಾರ್ಯನಿರ್ವಹಿಸಿದ್ದರು. ಆದರೆ ಒಂದು ವಾರದ ಹಿಂದೆ ಅವರಿಗೆ ಅನಾರೋಗ್ಯ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಧ್ಯ ಮತ್ತೆ ಲಾಕ್ ಡೌನ್ ಇರುವ ಕಾರಣ ಚಿತ್ರೀಕರಣವೂ ಸ್ಥಗಿತವಾಗಿದೆ.

Leave a Reply

Your email address will not be published. Required fields are marked *

You May Also Like

ಡ್ರಗ್ಗಿಣಿಯರಿಗೆ ಇಂದು ಸಿಗಲಿಲ್ಲ ಬೇಲ್! ಕಾರಣವೇನು ಗೊತ್ತಾ?

ಬೆಂಗಳೂರು : ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟಿ ರಾಗಿಣಿ ಹಾಗೂ ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಜಾಗೊಂಡಿದೆ.

ಪೊಲೀಸರಿಗೆ ಸಿಕ್ಕ ನಟ ಸುಶಾಂತ್ ಸಿಂಗ್ ಒಪ್ಪಂದಗಳ ಪ್ರತಿಗಳು!

ನವದೆಹಲಿ: ನಟ ಸುಶಾಂತ್ ಸಿಂಗ್ ಜೊತೆ ಒಪ್ಪಂದ ಮಾಡಿಕೊಂಡಿರುವ ಪ್ರತಿಗಳನ್ನು ಯಶ್ ರಾಜ್ ಫಿಲ್ಮ್ಸ್ (ವೈಆರ್…

ಪುನೀತ್‌ಗೆ ‘ಕರ್ನಾಟಕ ರತ್ನ’- ಶೀಘ್ರದಲ್ಲಿಯೇ ದಿನಾಂಕ ನಿಗದಿ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ನಟ ದಿವಂಗತ ಪುನೀತ್ ರಾಜ್‌ಕುಮಾರ್‌ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಕೊಡುವ ಸಂಬಂಧ ಆದಷ್ಟು…

ಸಿನಿಪ್ರಿಯರಿಗೆ ಸಿಹಿ ಸುದ್ದಿ; ಯೂಟ್ಯೂಬ್‌ನಲ್ಲಿ 10 ದಿನಗಳ ಜಾಗತಿಕ ಸಿನಿ ಉತ್ಸವ

ಯೂಟ್ಯೂಬ್ 10 ದಿನಗಳ ಕಾಲ ಸಿನಿ ಉತ್ಸವ ಆಯೋಜಿಸುವ ಮೂಲಕ ಸಿನಿ ಪ್ರೀಯರಿಗೆ ಸಿಹಿ ಸುದ್ದಿ ನೀಡಿರುವ ಜೊತೆಗೆ ಉತ್ಸವದ ಜಾಹಿರಾತಿನಿಂದ ಬಂದ ಲಾಭವನ್ನು ವಿಶ್ವ ಆರೋಗ್ಯ ಸಂಸ್ಥೆಯ ಕೋವಿಡ್‌ 19 ಸಾಲಿಡಾರಿಟಿ ರೆಸ್ಪಾನ್ಸ್‌ ಫಂಡ್‌ಗೆ ನೀಡುವುದಾಗಿ ಯೂಟ್ಯೂಬ್‌ ತಿಳಿಸಿದೆ.