ಪ್ರಧಾನಿ ಮೋದಿ, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮತ್ತು ಬಿಹಾರ್ ಸಿಎಂ ನಿತೀಶ್ ಕುಮಾರ ಭಾಗಿಯಾಗುವ ನಿರೀಕ್ಷೆ.

 ಅಯೋಧ್ಯಾ: ರಾಮ ಮಂದಿರ ನಿರ್ಮಾಣಕ್ಕೆ ಗುದ್ದಲಿ ಪೂಜೆಗೆ ಅಗಸ್ಟ್ 5 ರ ಮುಹೂರ್ತ ಪಕ್ಕಾ ಆಗಿದ್ದು, ವೇದಿಕೆ ಸಿದ್ಧಗೊಳ್ಳುತ್ತಿದೆ.

ಗುದ್ದಲಿ ಬಿದ್ದ ನಂತರ 40 ಕೆಜಿಯ ಬೆಳ್ಳಿ ಇಟ್ಟಿಗೆಯನ್ನು ಅಡಿಗಲ್ಲನ್ನಾಗಿ ನೆಡಲಾಗುವುದು ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ತಿಳಿಸಿದೆ.

ಅಡಿಗಲ್ಲಿಗೂ ಮೊದಲು 3 ದಿನ ವೇದ ಮಂತ್ರಪಠಣ ನಡೆಯಲಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ. 50ಕ್ಕೂ ಹೆಚ್ಚು ಅತಿಥಿಗಳು ಪಾಲ್ಗೊಳ್ಳಲಿದ್ದು, ಭಕ್ತರು ಅಡಿಗಲ್ಲು ಸಮಾರಂಭ ವೀಕ್ಷಿಸಲು ಅನುವಾಗುವಂತೆ ಅಯೋಧ್ಯೆಯ ವಿವಿಧ ಕಡೆ ಬೃಹತ್ ಟಿವಿ ಪರದೆಗಳನ್ನು ಅಳವಡಿಸಲಾಗಿದೆ ಎಂದು ಟ್ರಸ್ಟ್ ಹೇಳಿದೆ.

ರಾಮ ಜನ್ಮಭೂಮಿ ಆಂದೋಲನದಲ್ಲಿ ಭಾಗಿಯಾಗಿದ್ದ ಬಿಜೆಪಿಯ ಬಹುಪಾಲು ನಾಯಕರನ್ನು ಆಮಂತ್ರಿಸಲಾಗಿದ್ದು, ಲಾಲ್ ಕೃಷ್ಣ ಅದ್ವಾನಿ, ಮುರಳಿ ಮನೋಹರ ಜೋಶಿ, ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್, ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್, ಉಮಾಭಾರತಿ, ಬಜರಂಗ ದಳ ಸಂಸ್ಥಾಪಕ ವಿನಯ್ ಕಟಿಯಾರ್ ಮುಂತಾದವರು ಭಾಗವಹಿಸಲಿದ್ದಾರೆ.

2019ರ ನವೆಂಬರಿನಲ್ಲಿ ವಿವಾದಿತ ಸ್ಥಳದಲ್ಲಿ ರಾಮ ಮಂದಿರ ಕಟ್ಟಲು ಸುಪ್ರೀಂ ಕೋರ್ಟ್ ಅವಕಾಶ ನೀಡಿದ್ದು, ನಿರ್ಮಾಣದ ಉಸ್ತುವಾರಿಯನ್ನು  ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟಿಗೆ ನೀಡಿದೆ.

ಈ ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ಮಂದಿರ ಕಟ್ಟಿದರೆ ಕೋರೊನಾ ಹೋಗಲಿದೆ ಎಂದು ಕೆಲವರು ಭಾವಿಸಿದ್ದಾರೆ ಎಂದು ಎನ್ಸಿಪಿ ನಾಯಕ ಶರದ್ ಪವಾರ್ ಸಹಿತ ಕೆಲವರು ಟೀಕೆ ಮಾಡಿದ್ದರು.

Leave a Reply

Your email address will not be published. Required fields are marked *

You May Also Like

ಯಲಗೂರ ಶಕ್ತಿಮಾನಗೆ ಭಕ್ತರ ಭಕ್ತಿಮಾನ ಸಮರ್ಪಣೆ- ಕಾತಿ೯ಕೋತ್ಸವ ಸಂಭ್ರಮ ಏಳೂರು ಒಡೆಯನ ಸನ್ನಿಧಿಯಲ್ಲಿ ಭಕ್ತಿ ಪರಾಕಾಷ್ಠೆ – ಮಿಂದೆದ್ದ ಜನಸಾಗರ

ಸಚಿತ್ರ ವರದಿ: ಗುಲಾಬಚಂದ ಆರ್. ಜಾಧವಆಲಮಟ್ಟಿ : ಕೃಷ್ಣೆಯ ತೀರದ ಪ್ರಾಕೃತಿಕ ಪರಿಮಳದ ಹಸಿನೆಲದ ಸುವಾಸನೆಯಲ್ಲಿ…

ಕೋವಿಡ್ ಲಸಿಕೆ 2021ರಲ್ಲಿ ಲಭ್ಯ ದಿಢೀರ್ ನಿರೀಕ್ಷೆ ಬೇಡ: ಡಬ್ಲೂಎಚ್ಒ ತಜ್ಞ

ಕೋವಿಡ್ ಲಸಿಕೆ ತಯಾರಿಸುತ್ತಿರುವ ಎಲ್ಲ ಪ್ರಯೋಗಗಳು ಈಗ ಯಶಸ್ವಿ ಹಾದಿಯಲ್ಲಿವೆ. ಸುರಕ್ಷತೆ ಮತ್ತು ರೋಗ ನಿರೋಧಕತೆ ಸೃಷ್ಟಿಸುವ ದೃಷ್ಟಿಯಲ್ಲಿ ಈ ಪ್ರಯೋಗಗಳು ಫಲ ನೀಡುತ್ತಿವೆ.

ಟಿಕ್ ಟಾಕ್ ಸೇರಿ 59 App ಬ್ಯಾನ್ ಮಾಡಿದ ಕೇಂದ್ರ ಸರ್ಕಾರ

ದೆಹಲಿ: ದೇಶದ ಸಮಗ್ರತೆ, ಏಕತೆ ಹಾಗೂ ದೇಶದ ರಕ್ಷಣೆಯ ಹಿತದೃಷ್ಟಿಯಿಂದ ರಾಜ್ಯಗಳ ಭದ್ರತೆಯ ಜೊತೆಗೆ ಸಾರ್ವಜನಿಕರ…

ದಕ್ಷಿಣ ಆಫ್ರಿಕಾ ಕ್ರಿಕೇಟ್ ಆಟಗಾರನಿಗೆ ಕೊರೋನಾ ಪಾಸಿಟಿವ್..!

ದಕ್ಷಿಣ ಆಫ್ರಿಕಾದ ಕ್ರಿಕೆಟ್ ಆಟಗಾರನಲ್ಲಿ ಕೊರೊನಾ ಪಾಸಿಟಿವ್ ಕಂಡು ಬಂದಿದೆ. ಈ ಮೂಲಕ ಕೊರೊನಾ ಪಾಸಿಟಿವ್ ಬಂದ ಮೂರನೇ ಕ್ರಿಕೆಟ್ ಆಟಗಾರ ಸೋಲೋ ಆಗಿದ್ದಾರೆ.