ಸದ್ಯ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಮಹಾಮಾರಿ ತಡೆಗಟ್ಟಲು ಆತ್ಮವಿಶ್ವಾಸದ ಜೊತೆಗೆ ರೋಗನಿರೋಧಕ ಶಕ್ತಿ ಹೆಚ್ಚಾಗಿ ಬೇಕಾಗುತ್ತದೆ. ಇದಕ್ಕಾಗಿ ಸಾರ್ವಜನಿಕರು ಜಾಗೃತಿ ವಹಿಸುವ ಅಗತ್ಯತೆ ತುಂಬಾ ಇದೆ.

ಮಕ್ಕಳು, ವೃದ್ಧರು ಸೇರಿದಂತೆ ಎಲ್ಲ ವಯಸ್ಸಿನವರು ಇಮ್ಯೂನಿಟಿ ಪವರ್ ಹೆಚ್ಚಿಸುವ ಆಹಾರದತ್ತ ಹೆಚ್ಚಿನ ಗಮನ ಹರಿಸುವ ಅಗತ್ಯತೆ ಈ ಸಂದರ್ಭದಲ್ಲಿ ತುಂಬಾ ಇದೆ. ಇದಕ್ಕೆ ರಾಮಬಾಣ ಎಂಬಂತೆ ವರ್ತಿಸುವ ಹೆಸರುಕಾಳನ್ನು ಜನರು ಹೆಚ್ಚಾಗಿ ಬಳಸುವ ಅವಶ್ಯಕತೆ ಇದೆ.

ಹೆಸರು ಕಾಳನ್ನು ಬೇಯಿಸಿ ತಿನ್ನುವುದಕ್ಕಿಂತಲೂ ಮೊಳಕೆ ಮಾಡಿ ತಿಂದರೆ ಆರೋಗ್ಯ ವೃದ್ಧಿಯಾಗುತ್ತದೆ. ಹೆಸರುಕಾಳಿನಲ್ಲಿ ವಿಟಮಿನ್ ಸಿ, ಪ್ರೋಟೀನ್, ಕಬ್ಬಿಣದ ಅಂಶ, ಫೈಬರ್ ಪೋಷಕಾಂಶ ಇರುತ್ತದೆ. ಹೀಗಾಗಿ ಮೊಳಕೆ ಕಾಳನ್ನು ಸೇವಿಸಿದರೆ ರಕ್ತದೊತ್ತಡ ಕೂಡ ಕಡಿಮೆ ಮಾಡುತ್ತದೆ. ಒಂದು ವೇಳೆ ಹೆಸರುಕಾಳನ್ನು ಬೇಯಿಸಿ ಸೇವಿದರೆ ಅದರ ಪೋಷಕಾಂಶ ದೇಹಕ್ಕೆ ಸಿಗುವುದಿಲ್ಲ. ಹೀಗಾಗಿ ಅದನ್ನು ಮೊಳಕೆ ಬರಿಸಿ ಸೇವಿಸಬೇಕು ಎಂದು ವೈದ್ಯರು ಹೇಳುತ್ತಾರೆ.

ಹೆಸರು ಕಾಳನ್ನು ಚೆನ್ನಾಗಿ ತೊಳೆಯಬೇಕು. ಒಂದು ಬೌಲ್ಗೆ ನೀರು ಹಾಕಿ ಹೆಸರುಕಾಳನ್ನು ಸುಮಾರು 8 ರಿಂದ 12 ಗಂಟೆಗಳವರೆಗೂ ನೆನೆಸಿ ಇಡಬೇಕು. 12 ಗಂಟೆಯ ನಂತರ ಕಾಳನ್ನು ಸೋಸಿಕೊಂಡು ಒಂದು ಬಟ್ಟೆ ತೆಗೆದುಕೊಂಡು ನೆನೆಸಿದ ಕಾಳು ಹಾಕಿ ಮೊಳಕೆಯೊಡೆಯಲು ಬಿಡಬೇಕು. ನಂತರ ಅದನ್ನು ಹಸಿಯಾಗಿಯೇ ಸೇವಿಸಬೇಕು.

ಮೊಳಕೆ ಬಂದ ಹೆಸರು ಕಾಳನ್ನು ಸೇವಿಸುವುದರಿಂದ ಜೀರ್ಣಶಕ್ತಿ ಉತ್ತಮವಾಗುತ್ತದೆ. ಇದರಲ್ಲಿರುವ ಪೌಷ್ಟಿಕಾಂಶ ಜೀರ್ಣಕ್ರಿಯೆಯನ್ನು ಸರಾಗ ಮಾಡುತ್ತದೆ. ಅಲ್ಲದೆ ಫೈಬರ್ ಅಂಶವು ದೇಹದಲ್ಲಿ ಆಹಾರದ ಸಂಚಾರ ಸರಿಯಾಗಿ ಆಗುವಂತೆ ನೋಡಿಕೊಂಡು ಮಲಬದ್ಧತೆ ತೊಂದರೆಯನ್ನು ನಿವಾರಿಸುತ್ತದೆ.

ಜೊತೆಗೆ ಇದರಲ್ಲಿರುವ ವಿಟಮಿನ್ ಸಿ ದೇಹಕ್ಕೆ ಇನ್ಫೆಕ್ಷನ್ ಆಗುವುದನ್ನು ತಡೆಯುತ್ತದೆ. ಇದರ ಜೊತೆ ವಿಟಮಿನ್ ಎ ಅಂಶ ಕೂಡ ಹೆಚ್ಚಾಗಿ ಇರೋದ್ರಿಂದ ದೇಹಕ್ಕೆ ಹೆಚ್ಚಿನ ಆಂಟಿ ಆಕ್ಸಿಡೆಂಟ್ಸ್ ಸಿಗುವ ರೀತಿ ನಿಗಾವಹಿಸಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದು ವೈದ್ಯರು ಹೇಳುತ್ತಾರೆ. ಹೀಗಾಗಿ ಈ ಸಂದರ್ಭದಲ್ಲಿ ಜನರು ಮೊಳಕೆಯೊಡೆದ ಕಾಳನ್ನು ಸೇವಿಸುವುದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.

Leave a Reply

Your email address will not be published. Required fields are marked *

You May Also Like

ಕೊರೊನಾ ಸಮಯದಲ್ಲಿ ನಿಮ್ಮ ತಲೆನೋವಿನ ಸಮಸ್ಯೆಯನ್ನು ಹಗುರವಾಗಿ ಪರಿಗಣಿಸಬೇಡಿ! (ಉತ್ತರ ಪ್ರಭ ವಿಶೇಷ)

ಬೆಂಗಳೂರು : ಜಗತ್ತಿನಾದ್ಯಂತ ಕೊರೊನಾ ಹಾವಳಿ ಹೆಚ್ಚಾಗುತ್ತಿದೆ. ಇದರಿಂದಾಗಿ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. ಇದು ತೊಡ್ಡ ಆತಂಕಕ್ಕೆ ಕಾರಣವಾಗುತ್ತಿದೆ. ಅಷ್ಟೇ ಅಲ್ಲದೇ, ದಿನದಿಂದ ದಿನಕ್ಕೆ ಸೋಂಕಿನ ಲಕ್ಷಣಗಳು ಕೂಡ ಬದಲಾಗುತ್ತಿವೆ.

ಬಾಲೆಹೊಸೂರಿನಲ್ಲಿ ಬಾಳೇ ಬಲು ಕಷ್ಟ: ಸೀಲ್ ಡೌನ್ ಏರಿಯಾವೊಂದರ ಅಳಲು

ಗದಗ: ಇದು ಒಂದು ಸೀಲ್ ಡೌನ್ ಕಥೆಯಲ್ಲ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸೂರಿನಲ್ಲಿ ಪಾಸಿಟಿವ್…

ಕೊರೋನಾ ಜಾಗೃತಿ: ಹಣ್ಣು, ತರಕಾರಿ ತೊಳೆಯುವಾಗ ಎಚ್ಚರ!

ಕೊರೋನಾ ಬಿಕ್ಕಟ್ಟಿನ ಈ ಸಂದರ್ಭದಲ್ಲಿ ವೈರಸ್ ನಿರ್ಮೂಲನೆಗೆ ಶುಚಿತ್ವ ಕಾಪಾಡಿಕೊಳ್ಳುವುದು ಅಗತ್ಯ. ದಿನಕ್ಕೆ ಐದಾರು ಸಲ…

ಬೆಳಗಾವಿಯ ಈ ಮನೆಯೇ ಒಂದು ‘ಕ್ಯಾಮೆರಾ!’ :ಫೋಟೊಗ್ರಫಿ ಪ್ರೀತಿ: ಮಕ್ಕಳ ಹೆಸರು ನಿಕಾನ್, ಕ್ಯಾನಾನ್, ಎಪ್ಸಾನ್

ಬೆಳಗಾವಿಯ ಈ ಮನೆ ರವಿ ಹೊಂಗಲ್ ಅವರ ಫೋಟೊಗ್ರಫಿ ಪ್ರೀತಿಗೆ ಸಾಕ್ಷಿಯಾಗಿದೆ. ಈ ಮನೆ ಫೋಟೊ ಈಗ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ಕ್ಯಾಮೆರಾ ಬಗೆಗಿನ ತಮ್ಮ ಒಲವನ್ನು ಈ ರೀತಿ ಸೃಜನಾತ್ಮಕ