ಬಹುಪಾಲು ರಾಜ್ಯ ಸರ್ಕಾರಗಳು ಕೆಲವು ಕಡೆ ಸಂಪೂರ್ಣ ಮತ್ತು ಕೆಲವು ಕಡೆ ಭಾಗಶ: ಲಾಕ್ ಡೌನ್ ಮೊರೆ ಹೋಗಿವೆ. ಈ ಸಂದರ್ಭದಲ್ಲಿ ಶಾಲೆ ಯಾವಾಗ ಶುರು ಮಾಡೋಣ ಎಂದು ಕೇಂದ್ರ ಸಂದೇಶ ಕಳಿಸಿದೆ!

ನವದೆಹಲಿ: ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಇಲಾಖೆಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ವಿಭಾಗವು ಎಲ್ಲ ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿ ಮತ್ತು  ಶಿಕ್ಷಣ ಇಲಾಖೆಯ ಕಾರ್ಯದರ್ಶಿಗಳಿಗೆ ತರಾತುರಿಯಲ್ಲಿ ಒಂದು ಪತ್ರ ಕಳಿಸಿ, 3 ದಿನದಲ್ಲಿ ವಿದ್ಯಾರ್ಥಿಗಳ ಪಾಲಕರ ಅಭಿಪ್ರಾಯ ಸಂಗ್ರಹಿಸಿ, ಶಾಲೆ ಯಾವಾಗ ಆರಂಭಿಸಬೇಕು ಎಂದು ಸಲಹೆ ಪಡೆಯಿರಿ ಎಂದು ತಿಳಿಸಿದೆ.

ಅಗಸ್ಟ್, ಸೆಪ್ಟೆಂಬರ್ ಅಥವಾ ಅಕ್ಟೋಬರ್ –ಯಾವ ತಿಂಗಳಲ್ಲಿ ಶಾಲೆ ಮರು ಆರಂಭವಾದರೆ ಒಳ್ಳೆಯದು ಎಂದು ಪಾಲಕರಿಂದ ತಿಳಿದುಕೊಂಡು, ಸರ್ಕಾರದ ಅಭಿಪ್ರಾಯ ರೂಪಿಸಿ ಕೂಡಲೇ ಕೇಂದ್ರಕ್ಕೆ ಕಳಿಸಿಕೊಡಿ ಎಂದು ತಿಳಿಸಿದೆ.

  ತರಾತುರಿಯೇಕೆ?

ಅಭಿಪ್ರಾಯ ಸಂಗ್ರಹಕ್ಕೆ ಕೇವಲ 3 ದಿನದ ಅವಕಾಶ ನೀಡಲಾಗಿದೆ. ಇವತ್ತು ಸಾಯಂಕಾಲಕ್ಕೆ ಅವಧಿ ಮುಗಿಯಲಿದೆ. ಲಾಕ್ ಡೌನ್ ಸಂದರ್ಭದಲ್ಲಿ ಇದೆಲ್ಲ ಸಾಧ್ಯವೇ ಎಂಬ ಕನಿಷ್ಠ ಜ್ಞಾನವೂ ಇಲ್ಲದೇ ಈ ಪತ್ರ ಕಳಿಸಲಾಗಿದೆ ಎಂದು ಹಲವಾರು ಶಿಕ್ಷಕರು ಆರೋಪಿಸಿದ್ದಾರೆ. ದೆಹಲಿಯ ಕೇಂದ್ರೀಯ ವಿದ್ಯಾಲಯದ ಮುಖ್ಯ ಶಿಕ್ಷಕಿಯೊಬ್ಬರು ನಮಗೆ ಆ ಪತ್ರವೇ ತಲುಪಿಲ್ಲ ಎಂದಿದ್ದಾರೆ. ಶುಕ್ರವಾರ ಸಂಜೆ ಈ ಸಂದೇಶ ಕಳಿಸಲಾಗಿದೆ ಎಂದು ಮಾನವ ಸಂಪನ್ಮೂಲ ಇಲಾಖೆ ತಿಳಿಸಿದೆ. ಫೋನ್, ಇ-ಮೇಲ್ ಮತ್ತು ಲಿಖಿತ ಪತ್ರ ಈ ಯಾವುದರಲ್ಲಿ ಸಾಧ್ಯವೋ ಅದರಲ್ಲಿ ವಿಷಯ ಮುಟ್ಟಿಸಿದ್ದೇವೆ ಎನ್ನುತ್ತಿದೆ.

ದೇಶದಲ್ಲಿ ಸೋಂಕಿನ ಪ್ರಮಾಣ ಹೆಚ್ಚುತ್ತಿದೆ ಮತ್ತು ಲಾಕ್ ಡೌನ್ ಮರಳಿ ಜಾರಿಗೆ ಬರುತ್ತಿದೆ. ಇಂತಹ ಸಮಯದಲ್ಲಿ 3 ದಿನದಲ್ಲಿ ಎಲ್ಲವನ್ನೂ ಅವಸರದಲ್ಲಿ ನಿರ್ಣಯಿಸುವ ತುರ್ತಾದರೂ ಏನಿದೆ ಎಂದು ಕೆಲವು ಪೋಷಕರೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸೆಪ್ಟೆಂಬರ್ ಹೊತ್ತಿಗೆ ಸೋಂಕಿನ ಪ್ರಮಾಣ ತೀವ್ರವಾಗಬಹುದು ಎಂದು ಹಲವಾರು ಸಂಸ್ಥೆಗಳು ಅಂದಾಜಿಸಿವೆ. ಇಂತಹ  ಸಂದರ್ಭದಲ್ಲಿ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ತರಾತುರಿಯಲ್ಲಿ ಅಪ್ರಾಯೋಗಿಕ ಕಸರತ್ತಿಗೆ ಮುಂದಾಗಿದೆ.

Leave a Reply

Your email address will not be published. Required fields are marked *

You May Also Like

ಮಾಜಿ ಕ್ರಿಕೆಟ್ ಕ್ಯಾಪ್ಟನ್ ಮೇಲೊಂದು ಜೀವನ ಚಿತ್ರ.

ನವದೆಹಲಿ: ನಮ್ಮೆಲ್ಲರ ನೆಚ್ಚಿನ ಭಾರತದ ಮಾಜಿ ಕ್ಯಾಪ್ಟನ್ ಹಾಗೂ ದಾದಾ ಎಂದಲೆ ಹೆಸರಾದಂತ ಈಗಿನ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಯವರು ಬಾಲಿವುಡ್ ನಲ್ಲಿ ತಮ್ಮ ಜೀವನ ಚರಿತ್ರೆ ಮೇಲೊಂದು ಚಿತ್ರದ ಚಿತ್ರೀಕರಣಕ್ಕೆ ಒಪ್ಪಿಕೊಂಡಿದ್ದಾರೆ.

ಅತಿಥಿ ಉಪನ್ಯಾಸಕರು: ಅವೈಜ್ಞಾನಿಕ ಹೊಸ ಆದೇಶ ರದ್ದು ಪಡಿಸಲು ಆಗ್ರಹ

ಉತ್ತರಪ್ರಭ ಸುದ್ದಿ ನರೇಗಲ್:‌ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ…

ಜೈಲಿನ ಸಿಬ್ಬಂದಿಗೂ ಅಂಟಿಕೊಂಡ ಕೊರೊನಾ!

ನವದೆಹಲಿ: ಇಲ್ಲಿಯ ರೋಹಿಣಿ ಜೈಲಿನ ಕೈದಿಯಲ್ಲಿ ಮತ್ತೆ ಕೊರೊನಾ ಸೋಂಕು ಕಂಡು ಬಂದಿದೆ. ಒಬ್ಬ ವ್ಯಕ್ತಿಯಲ್ಲಿ…

ವಿಜಯಪುರದಲ್ಲಿ ಚಿತ್ರಕಲೆ, ಸಂಗೀತ, ವೃತ್ತಿ ವಿಶೇಷ ಶಿಕ್ಷಕರ ಜಿಲ್ಲಾ ಮಟ್ಟದ ಕಾಯಾ೯ಗಾರ

ಬೋಧನಾ ಕೌಶಲ್ಯ ಪ್ರೇರಣಾತ್ಮಕವಾಗಿರಲಿ ಡಿಡಿಪಿಐ ಎನ್.ವಿ.ಹೊಸೂರ ಅಭಿಮತವರದಿ : ಗುಲಾಬಚಂದ ಜಾಧವವಿಜಯಪುರ: ಕಾಲಚಕ್ರಗಳು ಬದಲಾದಂತೆ ಸಮಾಜದಲ್ಲಿ…