ಗದಗ ಜಿಲ್ಲೆಯಲ್ಲಿ ಹರ್ತಿ, ಮುಂಡರಗಿ/ಇಟಗಿ ಮತ್ತು ಹೊಂಬಳದಲ್ಲಿ ಸಾಕಷ್ಟು ಜನರಿಗೆ ಸೋಂಕು ಹರಡಿಸಿದ ಸುಪರ್ ಸ್ಪ್ರೆಡರ್ಸ್ ಕಂಡು ಬಂದಿದ್ದರು. ಈಗ ಸೀತಾಲಹರಿಯ ಸುಪರ್ ಸ್ಪ್ರೆಡರ್ ಪ್ರಾಥಮಿಕ ಸಂಪರ್ಕದಲ್ಲೇ 11 ಜನರಿಗೆ ಸೋಂಕು ಅಂಟಿಸಿದ್ದಾರೆ.


ಗದಗ:
  ಸುಪರ್ ಸ್ಪ್ರೆಡರ್ ಕುರಿತು ಉತ್ತರಪ್ರಭ ವಾರದ ಹಿಂದೆ ವಿವರವಾಗಿ ಬರೆದಿತ್ತು. ಟ್ರೇಸಿಂಗ್ ಪ್ರಕ್ರಿಯೆಯಲ್ಲಿ (ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದ ಹುಡುಕಾಟ) ಲೋಪದೋಷ ಆಗುತ್ತಿರುವುದಕ್ಕೆ  ಈ ತರಹದ ಸುಪರ್ ಸ್ಪ್ರೆಡರ್ ತಮಗೇ ಅರಿವಿಲ್ಲದಂತೆ ಸೋಂಕನ್ನು ಹರಡಿಸುತ್ತ ಹೋಗುತ್ತಾರೆ.

ಈಗ ಗದಗ ತಾಲೂಕಿನ ಸೀತಾಲಹರಿ ಗ್ರಾಮದ ಪಿ-31130 ಎಂಬ ಕೋವಿಡ್ ರೋಗಿಯಿಂದ ಸದ್ಯಕ್ಕೆ ಅಧಿಕೃತವಾಗಿ 11 ಜನರಿಗೆ ಸೋಂಕು ತಗುಲಿದೆ. (ನಂತರ ಪಿ-31130 ಚಿಕಿತ್ಸೆ ಫಲಿಸದೇ ನಿಧನರಾದರು)

 ಕೊಪ್ಪಳ ಜಿಲ್ಲೆಯಲ್ಲಿ ಸಾರಿಗೆ ಇಲಾಖೆಯಲ್ಲಿ    ಡ್ರೈವರ್-ಕಂ-ಕಂಡಕ್ಟರ್ ಆಗಿದ್ದ ಅವರು, ಸದ್ಯಕ್ಕೆ ಡ್ಯೂಟಿಗೆ ಹಾಕದ ಕಾರಣ ಸೀತಾಲಹರಿಗೆ ಬಂದು ಕೃಷಿಯಲ್ಲಿ ನಿರತರಾಗಿದ್ದರು. ಅವರಿಗೆ ಎದೆ ನೋವು ಕಾಣಿಸಿಕೊಂಡಾಗ, ಕೆಲವರು ಬಾಯಿಯ ಮೂಲಕ ಉಸಿರು ತುಂಬಲು ಯತ್ನಿಸಿದರು ಎನ್ನಲಾಗಿದೆ. ನಂತರ ಆಸ್ಪತ್ರೆಗೆ ದಾಖಲಿಸಿದಾಗ ಅವರಿಗೆ ಕೋವಿಡ್ ಪಾಸಿಟಿವ್ ದೃಢವಾಗಿತ್ತು.

ಈ ಸುಪರ್ ಸ್ಪ್ರೆಡರ್ ಇನ್ನೆಷ್ಟು ಜನರ ಸಂಪರ್ಕಕ್ಕೆ ಬಂದಿದ್ದರೋ ಗೊತ್ತಿಲ್ಲ. ಈಗ ಪ್ರಾಥಮಿಕ ಸಂಪರ್ಕದಿಂದ ಸೋಂಕು ತಗುಲಿದ 11 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ 11 ಜನರ ಸಂಪರ್ಕಕ್ಕೆ ಬಂದ ದ್ವಿತೀಯ ಸಂಪರ್ಕಿತರು ಎಷ್ಟು ಜನರಿರಬಹುದು?

  ಪ್ರಾಥಮಿಕ ಸಂಪರ್ಕಿತ ಸೋಂಕಿತರು

gdg-351, gdg-352, gdg-353, gdg-354, gdg-356, gdg-361, gdg-362, gdg-363, gdg-364,  gdg-365, gdg-366  ಈಗ  ಪಿ-31130 ಪ್ರಾಥಮಿಕ ಸಂಪರ್ಕದಿಂದ ಸೋಂಕಿತರಾಗಿದ್ದಾರೆ. ಇನ್ನು ದ್ವಿತೀಯ ಸಂಪರ್ಕದ ಕೇಸುಗಳೂ ವರದಿಯಾಗುತ್ತಿವೆ. ಈ ವಿಷಯದಲ್ಲಿ ಜಿಲ್ಲಾಡಳಿತ ಟ್ರೇಸಿಂಗ್ ಚುರುಕುಗೊಳಿಸಬೇಕಿದೆ.

Leave a Reply

Your email address will not be published. Required fields are marked *

You May Also Like

ಗದಗ ಎಸ್ಪಿ ಯತೀಶ ಎನ್ ವರ್ಗಾವಣೆ

ಉತ್ತರಪ್ರಭ ಸುದ್ದಿ ಗದಗ: ಗದಗ ಜಿಲ್ಲೆಗೆ ನೂತನ ಎಸ್ಪಿ ಯಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿವಪ್ರಕಾಶ್ ದೇವರಾಜು ಅವರನ್ನು ನೂತನ ಪೋಲಿಸ್ ವರಿಷ್ಠಾಧಿಕಾರಿಗಳಾಗಿ ಆಗಮಿಸಲಿದ್ದು .ಎನ್ ಯತೀಶರವರನ್ನು ಮಂಡ್ಯ ಜಿಲ್ಲೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ .ಎನ್ ಯತೀಶರವರು ಕೊವಿಡ್ ಸಮಯದಲ್ಲಿ ಮಾಡಿದ ಕಾರ್ಯ ಗದುಗಿನ ಜನತೆ ಮರೆಯಲಾರರು.

ನಾಳೆ ಗದಗ ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉತ್ತರಪ್ರಭ ಸುದ್ದಿಗದಗ: ಜಿಲ್ಲೆಯಲ್ಲಿ ಶುಕ್ರವಾರ ನಿರಂತರವಾಗಿ ಮಳೆಯಾಗುತ್ತಿದ್ದು, ಶನಿವಾರ ಸಹ ಮಳೆ ಮುಂದುವರಿಯುವದಾಗಿ ಹವಾಮಾನ ಇಲಾಖೆ…

ದೇಶದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಆತಂಕ ಮೂಡಿಸುತ್ತಿದೆ

ನವದೆಹಲಿ : ದೇಶದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಆತಂಕ ಮೂಡಿಸುತ್ತಿದೆ. ಒಂದೇ ದಿನ ದೇಶದಲ್ಲಿ…

ಹೀಗೆ ಮುಂದುವರೆದರೆ ಸೋಂಕಿತರ ಸಂಖ್ಯೆ ಆಗಷ್ಟ್ ನಲ್ಲಿ ಎಷ್ಟಾಗಲಿದೆ ಗೊತ್ತಾ?

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದು ಹೀಗೆ ಮುಂದುವರೆದರೆ ಆಗಸ್ಟ್ 15ರ ವೇಳೆಗೆ ಸೋಂಕಿತರ ಸಂಖ್ಯೆ 25 ಸಾವಿರಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಕೋವಿಡ್-19 ವಾರ್ ರೂಂ ಮುಖ್ಯಸ್ಥ ಮುನೀಶ್ ಮೌದ್ಗಿಲ್ ಅಂದಾಜಿಸಿದ್ದಾರೆ.