ಗದಗ : ಜಿಲ್ಲೆಯ ಮರಳು ಗಣಿಗಾರಿಕೆ ಕುರಿತಂತೆ ಸಲ್ಲಿಸಲಾಗಿದ್ದ ದಾವೆಯೊಂದರ ವಿಚಾರಣೆ ನಡೆಸಿದ ಹೈಕೋರ್ಟ್ ಅಕ್ಟೋಬರ್ 15 ರವರೆಗೆ ಮರಳು ಗಣಿಗಾರಿಕೆ ನಿಷೇಧ ಮಾಡಿದೆ.
ಬೆಂಗಳೂರು: ಸುಸ್ಥಿರ ಮರಳು ಗಣಿಗಾರಿಕೆ-2016ರ ಮಾರ್ಗಸೂಚಿಯನ್ನು ಉಲ್ಲೇಖಿಸಿರುವ ಹೈಕೋರ್ಟ್ ಜಿಲ್ಲೆಯಲ್ಲಿ ಅಕ್ಟೋಬರ್ 15 ರವರೆಗೆ ನದಿಪಾತ್ರದಿಂದ ಮರಳು ಗಣಿಗಾರಿಕೆ ನಡೆಸಲು ಅನುಮತಿ ನೀಡಬಾರದು ಎಂದು ಜಿಲ್ಲಾ ಭೂ ವಿಜ್ಞಾನ ಮತ್ತು ಗಣಿ ಇಲಾಖೆಗೆ ಜುಲೈ 22ರಂದು ಆದೇಶ ಹೊರಡಿಸಿದೆ.

ಶಿರಹಟ್ಟಿ ತಾಲೂಕಿನ ನಾಗಮಡವು ಗ್ರಾಮದ ಸರ್ವೆ ಸಂಖ್ಯೆ 13, 15, 18, 19, 20, 21ರಲ್ಲಿನ ನಾಲಾಕ್ಷೇತ್ರದಲ್ಲಿ 17-01-2019 ರಿಂದ 5 ವರ್ಷದವರೆಗೆ ಮರಳು ಗಣಿಗಾರಿಕೆಗೆ ಅನುಮತಿ ನೀಡಲಾಗಿದ್ದು, ಮುಂಗಾರು ಸಂದರ್ಭದಲ್ಲಿ ಇದನ್ನು ನಿಷೇಧಿಸಬೇಕು ಎಂದು ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಲಾಗಿತ್ತು.

ರೈತಪರ ಹೋರಾಟಗಾರ ವಿಠಲ್ ಗಣಾಚಾರಿ ರಿಟ್ ಅರ್ಜಿ ಸಲ್ಲಿಸಿದ್ದರು.

High courtt order

ಈ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್, ಸಸುಸ್ಥಿರ ಮರಳು ಗಣಿಗಾರಿಕೆ-2016ರ ಮಾರ್ಗಸೂಚಿಯ ಅನ್ವಯ, ಮುಂಗಾರು ಮಳೆಗಾಲದ ಅವಧಿಯಾದ ಜೂನ್ 5 ರಿಂದ ಅಕ್ಟೋಬರ್ 15ರವರೆಗೆ ನದಿಪಾತ್ರದಲ್ಲಿ ಮರಳು ಗಣಿಗಾರಿಕೆಯನ್ನು ಸ್ಥಗಿತಗೊಳಿಸಬೇಕು ಎಂದು ಆದೇಶ ನೀಡಿದೆ.

ರೈತರ ರೊಟ್ಟಿ ಬುತ್ತಿ ಬೋರ್ ಸ್ಥಳದಲ್ಲಿ, ಒಣಗಿರುವ ಹಳ್ಳ ಮತ್ತು ನಾಲೆಗಳಲ್ಲಿ ಮರಳು ತೆಗೆಯಬಹುದು ಎಂದು ಆದೇಶದಲ್ಲಿ ಸೂಚಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 918 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 918 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 11923…

ನನ್ನ ಬಳಿ ಸಿಡಿ ಇವೆ ಅಂತ ನಾನು ಹೇಳಿಲ್ಲ: ರಾಜಶೇಖರ ಮುಲಾಲಿ

ರಮೇಶ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣ ಷಡ್ಯಂತ್ರ ಅಂತಾ ಹೇಳಿದ್ದಾರೆ ಎಂದ ಅವರು, ನಾನು ಎಲ್ಲಿಯೂ ಸಹ ನನ್ನ ಬಳಿ ಸಿಡಿ ಇವೆ ಅಂತಾ ಹೇಳಿಲ್ಲ, ಯಾರ ಬಳಿಯಾದರೂ ನನ್ನ ಹೇಳಿಕೆಯ ದಾಖಲೆ ಇದ್ದರೆ ತೋರಿಸಿ ಎಂದು ಸಾಮಾಜಿಕ ಹೋರಾಟಗಾರ ರಾಜಶೇಖರ ಮುಲಾಲಿ ಹೇಳಿದರು.

ಅಸಂಘಟಿತ ಕಾರ್ಮಿಕರಿಗೆ ತಿಂಗಳಿಗೆ ರೂ 10,000 ಪರಿಹಾರಕ್ಕೆ ಒತ್ತಾಯ

ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ಹಿನ್ನೆಲೆ ಅಸಂಘಟಿತ ಕಾರ್ಮಿಕರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ಅವರಿಗೆ ತಿಂಗಳಿಗೆ…

ತೋಂಟದಾರ್ಯ ಇಂಜನೀಯರಿಂಗ್ ಕಾಲೇಜಿನಲ್ಲಿ ರಾಷ್ಟ್ರಮಟ್ಟದ ಟಿಸಿಇ ಹ್ಯಾಕಥಾನ್

ಗದಗ: ಇಂದು ಪ್ರತಿಯೊಬ್ಬರ ಜೀವನದಲ್ಲಿ ತಾಂತ್ರಿಕತೆ ಪಾತ್ರ ಮಹತ್ವದ್ದಾಗಿದೆ. ಪ್ರತಿ ರಂಗದಲ್ಲಿ ತಾಂತ್ರಿಕತೆ ಅವಶ್ಯವಾಗಿದ್ದು ತಾಂತ್ರಿಕತೆ…