ಗದಗ : ಜಿಲ್ಲೆಯ ಮರಳು ಗಣಿಗಾರಿಕೆ ಕುರಿತಂತೆ ಸಲ್ಲಿಸಲಾಗಿದ್ದ ದಾವೆಯೊಂದರ ವಿಚಾರಣೆ ನಡೆಸಿದ ಹೈಕೋರ್ಟ್ ಅಕ್ಟೋಬರ್ 15 ರವರೆಗೆ ಮರಳು ಗಣಿಗಾರಿಕೆ ನಿಷೇಧ ಮಾಡಿದೆ.
ಬೆಂಗಳೂರು: ಸುಸ್ಥಿರ ಮರಳು ಗಣಿಗಾರಿಕೆ-2016ರ ಮಾರ್ಗಸೂಚಿಯನ್ನು ಉಲ್ಲೇಖಿಸಿರುವ ಹೈಕೋರ್ಟ್ ಜಿಲ್ಲೆಯಲ್ಲಿ ಅಕ್ಟೋಬರ್ 15 ರವರೆಗೆ ನದಿಪಾತ್ರದಿಂದ ಮರಳು ಗಣಿಗಾರಿಕೆ ನಡೆಸಲು ಅನುಮತಿ ನೀಡಬಾರದು ಎಂದು ಜಿಲ್ಲಾ ಭೂ ವಿಜ್ಞಾನ ಮತ್ತು ಗಣಿ ಇಲಾಖೆಗೆ ಜುಲೈ 22ರಂದು ಆದೇಶ ಹೊರಡಿಸಿದೆ.

ಶಿರಹಟ್ಟಿ ತಾಲೂಕಿನ ನಾಗಮಡವು ಗ್ರಾಮದ ಸರ್ವೆ ಸಂಖ್ಯೆ 13, 15, 18, 19, 20, 21ರಲ್ಲಿನ ನಾಲಾಕ್ಷೇತ್ರದಲ್ಲಿ 17-01-2019 ರಿಂದ 5 ವರ್ಷದವರೆಗೆ ಮರಳು ಗಣಿಗಾರಿಕೆಗೆ ಅನುಮತಿ ನೀಡಲಾಗಿದ್ದು, ಮುಂಗಾರು ಸಂದರ್ಭದಲ್ಲಿ ಇದನ್ನು ನಿಷೇಧಿಸಬೇಕು ಎಂದು ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಲಾಗಿತ್ತು.

ರೈತಪರ ಹೋರಾಟಗಾರ ವಿಠಲ್ ಗಣಾಚಾರಿ ರಿಟ್ ಅರ್ಜಿ ಸಲ್ಲಿಸಿದ್ದರು.

High courtt order

ಈ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್, ಸಸುಸ್ಥಿರ ಮರಳು ಗಣಿಗಾರಿಕೆ-2016ರ ಮಾರ್ಗಸೂಚಿಯ ಅನ್ವಯ, ಮುಂಗಾರು ಮಳೆಗಾಲದ ಅವಧಿಯಾದ ಜೂನ್ 5 ರಿಂದ ಅಕ್ಟೋಬರ್ 15ರವರೆಗೆ ನದಿಪಾತ್ರದಲ್ಲಿ ಮರಳು ಗಣಿಗಾರಿಕೆಯನ್ನು ಸ್ಥಗಿತಗೊಳಿಸಬೇಕು ಎಂದು ಆದೇಶ ನೀಡಿದೆ.

ರೈತರ ರೊಟ್ಟಿ ಬುತ್ತಿ ಬೋರ್ ಸ್ಥಳದಲ್ಲಿ, ಒಣಗಿರುವ ಹಳ್ಳ ಮತ್ತು ನಾಲೆಗಳಲ್ಲಿ ಮರಳು ತೆಗೆಯಬಹುದು ಎಂದು ಆದೇಶದಲ್ಲಿ ಸೂಚಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಮಹಿಳಾ ಮಣಿಗಳ ಅಧಿಪತ್ಯಪ್ರಾರಂಭ: ಬಿಜೆಪಿಗೆ ರಾಮನಿಂದ ಪಟ್ಟಾಭಿಷೇಕ,ಕಾನೂನು ಹೋರಾಟ -ಎಚ್ ಕೆ ಪಾಟೀಲ

ಉತ್ತರಪ್ರಭ ಸುದ್ದಿಗದಗ: ಕಾಂಗ್ರೆಸ್‌ನ ಹಿಡಿತದಲ್ಲಿದ್ದ ನಗರಸಭೆ ಗದ್ದುಗೆ ದಶಕಗಳ ಬಳಿಕ ಬಿಜೆಪಿ ಪಾಲು, ಬಿಜೆಪಿಯಲ್ಲಿ ಸಂಭ್ರಮ…

ಮತ ಎಣಿಕೆ ಕೇಂದ್ರದಲ್ಲಿ ಅಭ್ಯರ್ಥಿ ಅಸ್ವಸ್ಥ

ಗ್ರಾಮ ಪಂಚಾಯತ್ ಚುನಾವಣೆಯ‌ ಮತ ಎಣಿಕೆ ಹಿನ್ನೆಲೆ ಇಂದು ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ್ದ ಅಭ್ಯರ್ಥಿ ಅಸ್ವಸ್ಥಗೊಮಡ ಘಟನೆ ಹಾವೇರಿಯಲ್ಲಿ ನಡೆದಿದೆ.

ಪರಿಹಾರ ಸಿಗಬಹುದೇ ಜಿಲ್ಲಾಡಳಿತದ ಗ್ರಾಮ ವಾಸ್ತವ್ಯದಿಂದ.!

ಸಮಸ್ಯೆಗಳ ಸಾಗರವನ್ನೆ ಹೊತ್ತುಕೊಂಡು ನಿಂತ ರಣತೂರು ಗ್ರಾಮಕ್ಕೆ ಜಿಲ್ಲಾಡಳಿತದ ಗ್ರಾಮ ವಾಸ್ತವ್ಯದಿಂದ ಸಮಸ್ಯೆಗಳ ನಿವಾರಣೆಯಾಗಬಹುದೇ ಎಂಬ ತವಕ ಗ್ರಾಮಸ್ಥರಲ್ಲಿ ಮನೆ ಮಾಡಿದೆ.

ರೆಮ್ ಡೆಸಿವರ್ ಈಗ 800 ಮೆಟ್ರಿಕ್ ಟನ್ ಹೆಚ್ಚಿಸಿದ ಕೇಂದ್ರ ಸರ್ಕಾರ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮನವಿ ಸ್ಪಂದಿಸಿದ ಪ್ರಾಧನಿ ನರೇಂದ್ರ ಮೋದಿ ಅವರು ಒಂದೇ ದಿನದಲ್ಲಿ ರಾಜ್ಯಕ್ಕೆ ರೆಮ್ ಡೆಸವಿರ್ ಹಂಚಿಕೆಯನ್ನು 800 ಮೆಟ್ರಿಕ್ ಟನ್ ಗಳಿಗೆ ಹೆಚ್ಚಿಸಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ .ಕೆ ತಮ್ಮ ಅಧಿಕೃತ ಟ್ವೀಟರ್ ನಲ್ಲಿ ಪೋಷ್ಟ ಮಾಡಿದ್ದಾರೆ.