ಭುವನೇಶ್ವರ: ಕಪ್ಪು, ದಟ್ಟ ಕಂದು ಬಣ್ಣದ ಆಮೆಗಳನ್ನು ನೋಡಿದ್ದೇವೆ. ಆದರೆ ಒರಿಸ್ಸಾದಲ್ಲೊಂದು ಅಪರೂಪದ ಆಮೆ ಸಿಕ್ಕಿದೆ. ಅದರ ಬಣ್ಣ ಹಳದಿ. ಇಡೀ ದೇಹ, ಚಿಪ್ಪು ಎಲ್ಲವೂ ಸಂಪೂರ್ಣ ಹಳದಿ. ವಾರಗಳ ಹಿಂದೆ ಇದೇ ರಾಜ್ಯದಲ್ಲಿ ಮೃದುವಾದ ಚಿಪ್ಪು ಹೊಂದಿರುವ ಇನ್ನೊಂದು ಅಪರೂಪದ ಆಮೆಯೂ ಪತ್ತೆಯಾಗಿತ್ತು.

ಹಳದಿ ಮೈಬಣ್ಣ, ಗುಲಾಬಿ ಕಣ್ಣು
ಒರಿಸ್ಸಾ ರಾಜ್ಯದ ಬಾಲಾಸೋರ್ ಜಿಲ್ಲೆಯ ಸುಜನಾಪುರ ಗ್ರಾಮಸ್ಥರು ಭಾನುವಾರ ಇಂತಹ ಅಪರೂಪದ ಹಳದಿ ಆಮೆ ಕಂಡು ಚಕಿತರಾಗಿ, ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಸದ್ಯ ಅರಣ್ಯ ಇಲಾಖೆ ಇದನ್ನು ಸಂರಕ್ಷಿಸಿದೆ. ಇದು ತೀರಾ ವಿರಳ ಸಂಖ್ಯೆಯಲ್ಲಿರುವ ಆಮೆ ಪ್ರಭೇದ. ನಾನಂತೂ ಒಮ್ಮೆಯೂ ನೋಡಿರಲಿಲ್ಲ’ ಎಂದು ಅಲ್ಲಿನ ವನ್ಯಜೀವಿ ವಾರ್ಡನ್ ಭಾನುಮಿತ್ರ ಆಚಾರ್ಯ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಹಿರಿಯ ಐ.ಎಫ್.ಎಸ್ ಅಧಿಕಾರಿ ಸುಶಾಂತ್ ನಂದಾ ಟ್ವೀಟ್ ಮಾಡಿ, ‘ಇದು ತುಂಬ ಅಪರೂಪದ ಆಮೆ. ಕೆಲವು ತಿಂಗಳು ಹಿಂದೆ ಸಿಂಧ್ ಪ್ರಾಂತ್ಯದಲ್ಲಿ ಕಂಡುಬಂದಿತ್ತು. ಇವನ್ನು ‘ಅಲ್ಬಿನಿ’ ವರ್ಗದ ಆಮೆ ಎನ್ನುತ್ತಾರೆ. ಇದರ ಕಣ್ಣುಗಳು ಗುಲಾಬಿ ಬಣ್ಣ ಹೊಂದಿವೆ’ ಎಂದಿದ್ದಾರೆ.

tortise

ಮೃದು ಚಿಪ್ಪಿನ ಆಮೆ
ಕೆಲ ವಾರಗಳ ಹಿಂದೆ ಇದೇ ಒರಿಸ್ಸಾ ರಾಜ್ಯದ ಮಯೂರ್ ಬಾಂಜ್ ಜಿಲ್ಲೆಯ ಡ್ಯೂಲಿ ಡ್ಯಾಮಿನಲ್ಲಿ ಮೀನುಗಾರರಿಗೆ ಸಿಕ್ಕ ಆಮೆ ಕೂಡ ಅಪರೂಪದ ತಳಿಯೇ. ಆಮೆ ಎಂದರೇನೇ ಮೊದಲಿಗೆ ಹೊಳೆಯುವುದು ಅದರ ಗಡುಸಾದ ಚಿಪ್ಪು ಅಥವಾ ಮೈಕವಚ. ಆದರೆ, ‘ಟ್ರಿನಿಚಿಡೈ’ ಎಂಬ ಪ್ರಭೇದಕ್ಕೆ ಸೇರಿದ ಈ ಆಮೆಯ ಚಿಪ್ಪು ಮುಟ್ಟಿದರೆ ಅದು ಪುಳುಪುಳು ಎನ್ನುವಷ್ಟರ ಮಟ್ಟಿಗೆ ಮೆತ್ತಗಿದೆ. ಇದನ್ನು ಅರಣ್ಯಾಧಿಕಾರಿಗಳು ಮರಳಿ ಡ್ಯಾಮಿಗೇ ಬಿಟ್ಟಿದ್ದಾರೆ.
ಇದು ಏಷ್ಯಾ, ಆಫ್ರಿಕಾ ಮತ್ತು ಉತ್ತರ ಅಮೆರಿಕದಲ್ಲಷ್ಟೇ ಕಂಡುಬರುತ್ತದೆ ಮತ್ತು ಇದು ಕೂಡ ತುಂಬ ವಿರಳ ಸಂಖ್ಯೆಯಲ್ಲಿದೆ ಎಂದು ವನ್ಯಜೀವಿ ತಜ್ಞರು ಹೇಳುತ್ತಾರೆ.

Leave a Reply

Your email address will not be published. Required fields are marked *

You May Also Like

ಮುಳಗುಂದ ಪಟ್ಟಣ ಪಂಚಾಯ್ತಿ ಸಾಮಾನ್ಯ ಸಭೆ

ಸ್ಥಳೀಯ ಪಟ್ಟಣ ಪಂಚಾಯ್ತಿ ಸಭಾ ಭವನದಲ್ಲಿ ಮಂಗಳವಾರ ನಡೆದ ಪಂಚಾಯ್ತಿ ಆಡಳಿತ ಮಂಡಳಿ ಸಾಮಾನ್ಯ ಸಭೆಯಲ್ಲಿ 2021-22 ನೇ ಸಾಲಿನ ಬಜೆಟ್ ಮಂಡಿಸಿದರು.

ಮಹದಾಯಿ ವಿಚಾರ: 4 ವಾರಗಳಲ್ಲಿ ಸಮಿತಿ ರಚಿಸಿ ವರದಿ ನೀಡಲು ಸುಪ್ರೀಂ ಆದೇಶ!

ಮಹದಾಯಿ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ, ಮಲಪ್ರಭಾ ನದಿಗೆ ನೀರು ತಿರುಗಿಸುತ್ತಿದೆ ಎಂದು ಗೋವಾ ರಾಜ್ಯ ನ್ಯಾಯಾಂಗ ನಿಂದನೆ ದೂರು ಸಲ್ಲಿಸಿತ್ತು. ಈ ವಿಚಾರವಾಗಿ ಸುಪ್ರೀಂ ಕೋರ್ಟ್ ಗೋವಾ ಮನವಿ ಪರಿಶೀಲಿಸಿ ಇದಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ಪರಿಶೀಲನೆ ನಡೆಸಲು ನಾಲ್ಕು ವಾರಗಳಲ್ಲಿ ತಜ್ಞರನ್ನೊಳಗೊಂಡ ಮೇಲುಸ್ತುವಾರಿ ಸಮಿತಿ ರಚಿಸಿ ವರದಿ ನೀಡಲು ಸುಪ್ರೀಂ ಕೋರ್ಟ್ ಆದೇಶಿಸಿದೆ.

ಗದಗ ಜಿಲ್ಲೆಯಲ್ಲಿ ಆಸ್ಪತ್ರೆಗಳ ಯಾವ ಸೌಲಭ್ಯವಿರಬೇಕು? : ಸೋಂಕಿತರು ಹಾಗು ಕುಟುಂಬಸ್ಥರಿಗೆ ನೀಡಬೇಕಾದ ಮಾಹಿತಿ ಇಲ್ಲಿದೆ…

ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ಬರುವ ಕೋವಿಡ್ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ಹಾಗೂ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅವರು ಸೂಚಿಸಿದರು.

ಅಂಬೇಡ್ಕರ್ ವಿಚಾರಧಾರೆಗಳು ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕ :ಮಾರುತಿ ಕಟ್ಟೀಮನಿ

ಕನ್ನಡ ಮತ್ತು ಸಂಸ್ಕತಿ ಇಲಾಖೆ, ಕೆ.ಎಲ್.ಇ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಸಾಹಿತ್ಯ ಸಂಘ ಹಾಗೂ ಗ್ರಂಥಾಲಯ ಮತ್ತು ಮಾಹಿತಿ ವಿಭಾಗಗಳ ಸಂಯುಕ್ತಾಶ್ರಯದಲ್ಲಿ ಸಂವಿಧಾನ ಶಿಲ್ಪಿ ಭಾರತರತ್ನಡಾ.ಬಿ.ಆರ್.ಅಂಬೇಡ್ಕರ್‌ ಓದು ಕಾರ್ಯಕ್ರಮದ ಅಂಗವಾಗಿ ರಸಪ್ರಶ್ನೆ ಹಾಗು ಪ್ರಬಂಧ ಸ್ಪರ್ಧೆಆಯೋಜಿಸಲಾಗಿತ್ತು.