ನವದೆಹಲಿ:ಕೇಂದ್ರ ಆರೋಗ್ಯ ಸೇವೆಗಳ ಡೈರೆಕ್ಟರ್ ಜನರಲ್ ಹೊರಡಿಸಿದ ಸುತ್ತೋಲೆ ಈಗ ಜನರನ್ನು ಗೊಂದಲಕ್ಕೆ ತಳ್ಳಿದೆ.
ಸದ್ಯ ಬಳಕೆಯಲ್ಲಿರುವ ಕವಾಟ ಅಥವಾ ರಂಧ್ರಗಳಿರುವ ಎನ್-95 ಮಾಸ್ಕ್ ಸೋಂಕು ತಡೆಯಲಾರವು. ಜನರು ಇತರ ಸಾಧಾರಣ ಮಾಸ್ಕ್ ಅಥವಾ ಮನೆಯಲ್ಲಿಯೇ ತಯಾರಿಸಿದ ಮಾಸ್ಕ್ ಬಳಸಬೇಕು ಎಂದು ಅವರು ತಿಳಿಸಿದ್ದಾರೆ.
ಬಳಕೆಯಲ್ಲಿರುವ ಎನ್-95 ಮಾಸ್ಕ್ ಗಳನ್ನು ಸೋಂಕು ತಡೆಯಲು ರೂಪಿಸಿರುವ ಅಳತೆಯ ಮಾನದಂಡದಂತೆ ತಯಾರು ಮಾಡಿಲ್ಲ. ಹೀಗಾಗಿ ಅವನ್ನು ಬಳಸುವುದರಿಂದ ಸೋಂಕು ತಡೆಯಲು ಸಾಧ್ಯವಿಲ್ಲ ಎಂದು ಸುತ್ತೋಲೆ ತಿಳಿಸಿದೆ.
ಮನೆಯಲ್ಲಿಯೇ ಮಾಡಿದ ಅಥವಾ ಹೊರಗಡೆ ಕೊಂಡ ಇತರ ಕಾಟನ್ ಮಾಸ್ಕ್ ಗಳನ್ನು ದಿನವೂ ಉಪ್ಪು ಬೆರೆಸಿದ ಬಿಸಿ ನೀರಿನಲ್ಲಿ ತೊಳೆಯಬೆಕು ಎಂದು ಸಲಹೆ ನೀಡಲಾಗಿದೆ.
ವೈದ್ಯಕೀಯ ಸಿಬ್ಬಂದಿ ಧರಿಸುವ ಎನ್-95 ಮಾಸ್ಕ್ ಕೂಡ ಸುರಕ್ಷಿತವೇ ಎಂಬ ಕುರಿತು ಏನನ್ನೂ ಹೇಳಿಲ್ಲ.

ಭಾರತದಲ್ಲಿ ಮೊದಲ ಪಾಸಿಟಿವ್ ಪ್ರಕರಣ ಜನವರಿ 30 ರಂದು ದಾಖಲಾಗಿತು. ಅದಾದ ಆರೂವರೆ ತಿಂಗಳ ನಂತರವೂ ಎನ್-95 ಮಾಸ್ಕ್ ಕುರಿತ ಗೊಂದಲ ಬಗೆಹರಿಸಲು ಸರ್ಕಾರ ಒದ್ದಾಡುತ್ತಿದೆಯೇ ಎಂದು ಜನ ಕೇಳುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಚಿಕ್ಕಪ್ಪ, ಮಗ ಸೇರಿ ಗಾಂಜಾ ಸೇವಿಸಿದರು…ಮತ್ತಿನಲ್ಲಿ ಜಗಳವಾಡಿದರು…ಮುಂದೇನಾಯ್ತು?

ಕೋಲಾರ : ಗಾಂಜಾ ಅಮಲಿನಲ್ಲಿ ತಮ್ಮ ಚಿಕ್ಕಪ್ಪನನ್ನೇ ಬಾಲಕ ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಮಾಲೂರು ತಾಲೂಕಿನ ಬೆನ್ನಘಟ್ಟ ಗ್ರಾಮದಲ್ಲಿ ಘಟನೆ ನಡೆದಿದೆ.

ಗದಗ ಜಿಲ್ಲೆಯಲ್ಲಿಂದು 73 ಕೊರೊನಾ ಪಾಸಿಟಿವ್!

ಈ ಮೂಲಕ ಒಟ್ಟು ಈವರೆಗೆ 1140 ಸೋಂಕಿತರು ಪತ್ತೆಯಾದಂತಾಗಿದೆ. ಇಂದು 56 ಜನ ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು 438 ಜನ ಈವರೆಗೆ ಬಿಡುಗಡೆ ಹೊಂದಿದ್ದಾರೆ.

ಅಂತರ ನಿಗಮ ವರ್ಗಾವಣೆಗೆ ಸಮ್ಮತಿ: ಮಾರ್ಗಸೂಚಿ ಪ್ರಕಟಿಸಿದ ಸಾರಿಗೆ ಇಲಾಖೆ

ಸಾರಿಗೆ ಇಲಾಖೆಯ ಅಧೀನದಲ್ಲಿರುವ ನಾಲ್ಕು ಸಾರಿಗೆ ನಿಗಮಗಳಲ್ಲಿನ ಮೇಲ್ವಿಚಾರಕರನ್ನು ಬಿಟ್ಟು ಮೂರು ಮತ್ತು ನಾಲ್ಕನೇ ಶ್ರೇಣಿಯ ಕಾಯಂ ನೌಕರರ ಅಂತರ ನಿಗಮ ವರ್ಗಾವಣೆಗೆ ಅವಕಾಶ ಕಲ್ಪಿಸಿ ಮಂಗಳವಾರ ಆದೇಶ ಹೊರಡಿಸಿದೆ.

ಲಾಕ್ ಡೌನ್ ಮಾನದಂಡ ಸಡಿಲಿಕೆಯಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗಿದೆಯಾ?

ಲಾಕ್‌ಡೌನ್ ಮಾನದಂಡಗಳನ್ನು ಸಡಿಲಿಸಿದ ನಂತರ ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆಯಲ್ಲಿ ಏರಿಕೆಯಾಗಿದೆಯೇ ಎಂಬುವುದನ್ನು ಖಚಿತಪಡಿಸಿಕೊಳ್ಳಲು, ಆರೋಗ್ಯ ಇಲಾಖೆ ಎಲ್ಲ ನಾಗರಿಕರ ಪರೀಕ್ಷೆಯನ್ನು ನಡೆಸಲು ನಿರ್ಧರಿಸಿದೆ.