ನವದೆಹಲಿ:ಕೇಂದ್ರ ಆರೋಗ್ಯ ಸೇವೆಗಳ ಡೈರೆಕ್ಟರ್ ಜನರಲ್ ಹೊರಡಿಸಿದ ಸುತ್ತೋಲೆ ಈಗ ಜನರನ್ನು ಗೊಂದಲಕ್ಕೆ ತಳ್ಳಿದೆ.
ಸದ್ಯ ಬಳಕೆಯಲ್ಲಿರುವ ಕವಾಟ ಅಥವಾ ರಂಧ್ರಗಳಿರುವ ಎನ್-95 ಮಾಸ್ಕ್ ಸೋಂಕು ತಡೆಯಲಾರವು. ಜನರು ಇತರ ಸಾಧಾರಣ ಮಾಸ್ಕ್ ಅಥವಾ ಮನೆಯಲ್ಲಿಯೇ ತಯಾರಿಸಿದ ಮಾಸ್ಕ್ ಬಳಸಬೇಕು ಎಂದು ಅವರು ತಿಳಿಸಿದ್ದಾರೆ.
ಬಳಕೆಯಲ್ಲಿರುವ ಎನ್-95 ಮಾಸ್ಕ್ ಗಳನ್ನು ಸೋಂಕು ತಡೆಯಲು ರೂಪಿಸಿರುವ ಅಳತೆಯ ಮಾನದಂಡದಂತೆ ತಯಾರು ಮಾಡಿಲ್ಲ. ಹೀಗಾಗಿ ಅವನ್ನು ಬಳಸುವುದರಿಂದ ಸೋಂಕು ತಡೆಯಲು ಸಾಧ್ಯವಿಲ್ಲ ಎಂದು ಸುತ್ತೋಲೆ ತಿಳಿಸಿದೆ.
ಮನೆಯಲ್ಲಿಯೇ ಮಾಡಿದ ಅಥವಾ ಹೊರಗಡೆ ಕೊಂಡ ಇತರ ಕಾಟನ್ ಮಾಸ್ಕ್ ಗಳನ್ನು ದಿನವೂ ಉಪ್ಪು ಬೆರೆಸಿದ ಬಿಸಿ ನೀರಿನಲ್ಲಿ ತೊಳೆಯಬೆಕು ಎಂದು ಸಲಹೆ ನೀಡಲಾಗಿದೆ.
ವೈದ್ಯಕೀಯ ಸಿಬ್ಬಂದಿ ಧರಿಸುವ ಎನ್-95 ಮಾಸ್ಕ್ ಕೂಡ ಸುರಕ್ಷಿತವೇ ಎಂಬ ಕುರಿತು ಏನನ್ನೂ ಹೇಳಿಲ್ಲ.

ಭಾರತದಲ್ಲಿ ಮೊದಲ ಪಾಸಿಟಿವ್ ಪ್ರಕರಣ ಜನವರಿ 30 ರಂದು ದಾಖಲಾಗಿತು. ಅದಾದ ಆರೂವರೆ ತಿಂಗಳ ನಂತರವೂ ಎನ್-95 ಮಾಸ್ಕ್ ಕುರಿತ ಗೊಂದಲ ಬಗೆಹರಿಸಲು ಸರ್ಕಾರ ಒದ್ದಾಡುತ್ತಿದೆಯೇ ಎಂದು ಜನ ಕೇಳುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಲವ್ ಜಿಹಾದ್ ಪ್ರಕರಣ ಕ್ರಮಕ್ಕೆ ಒತ್ತಾಯಿಸಿ ಲಕ್ಷ್ಮೇಶ್ವರದಲ್ಲಿ ಮನವಿ

ಪಟ್ಟಣದಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿದ್ದು, ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ.

ಹಾಲು ಉತ್ಪಾದನೆಯಲ್ಲಿ ಭಾರತ ವಿಶ್ವಕ್ಕೆ ಪ್ರಥಮ

ರೈತರು ಕೃಷಿ ಜೊತೆಗೆ ಹೈನುಗಾರಿಕೆಗೆ ಹೆಚ್ಚು ಒತ್ತು ನೀಡುತ್ತಿದ್ದು, ಹಾಲು ಉತ್ಪಾದನೆಯಲ್ಲಿ ಭಾರತ ವಿಶ್ವದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ.

ಗದಗ – ಬೇಟಗೆರಿ ನಗರಸಭೆಯಲ್ಲಿ ಯಾರಿಗೆ ಎಷ್ಟು ಮತದಾನದ ಪಟ್ಟಿ ಪ್ರಕಟ

ಉತ್ತರಪ್ರಭ ಗದಗ: ಇಂದು ಗದಗ-ಬೇಟಗೆರಿ ಮತ ಏಣಿಕೆಯಲ್ಲಿ ಮುಗಿದಿದ್ದು, ಯಾವ ಅಭ್ಯರ್ಥಿಗೆ ಎಷ್ಟು ಮತ ಎಂದು…

ಪಂಚಮಸಾಲಿ ಸಮಾಜಕ್ಕೆ 2ಎ ಮಿಸಲಾತಿ ಅವಶ್ಯವಿದೆ: ಮೋಹನ ಮಾಳಿಶೆಟ್ಟಿ

ಪಂಚಮಸಾಲಿ 2ಎ ಮಿಸಲಾತಿಗೆ ಸೇರಿಸಬೇಕು ಎಂದು ಒತ್ತಾಯಿಸಿ ಫೆ.21 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಬೃಹತ್ ಸಮಾವೇಶದಲ್ಲಿ ಜಿಲ್ಲೆಯ ಸಮಾಜದ ಜನರು ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾಧ್ಯಕ್ಷ ಮೋಹನ ಮಾಳಿಶೆಟ್ಟಿ ಹೇಳಿದರು.