ಖಾಸಗಿ ಲ್ಯಾಬ್ ಒಂದು ದೇಶಾದ್ಯಂತ ವಿವಿಧ ಭಾಗಗಳಲ್ಲಿ ನಡೆಸಿದ ಪ್ರತಿಕಾಯ ಪರೀಕ್ಷೆ (ಆಂಟಿಬಾಡಿ ಟೆಸ್ಟ್)ಗಳ ಫಲಿತಾಂಶ ಬಿಡುಗಡೆ ಮಾಡಿದ್ದು, ದೇಶದ 18 ಕೋಟಿ ಜನರಲ್ಲಿ ಕೋವಿಡ್ ನಿರೋಧಕ ಶಕ್ತಿಯಿದೆ ಎಂದು ತಿಳಿಸಿದೆ.


ನವದೆಹಲಿ: ಖಾಸಗಿ ಲ್ಯಾಬ್ ಥೈರೋಕೇರ್ ಟೆಕ್ನಾಲಜೀಸ್ ನಡೆಸಿದ ಆಂಟಿಬಾಡಿ ಟೆಸ್ಟ್ ಗಳ ಫಲಿತಾಂಶಗಳನ್ನು ಉಲ್ಲೇಖಿಸಿ ವರದಿ ಮಾಡಿರುವ ‘ದಿ ಕ್ವಿಂಟ್’ ಪೋರ್ಟಲ್, ದೇಶದ ಶೇ. 15 ಅಂದರೆ 18 ಕೋಟಿ ಜನರಲ್ಲಿ ಕೋವಿಡ್ ಎದುರಿಸುವ ರೋಗ ನಿರೋಧಕ ಶಕ್ತಿ ಇದೆ ಎಂದು ಮಂಗಳವಾರ ತಿಳಿಸಿದೆ.
ಥೈರೋಕೇರ್ 600 ಪಿನ್ ಕೋಡ್ ಪ್ರದೇಶದಲ್ಲಿ 6 ಸಾವಿರಕ್ಕೂ ಹೆಚ್ಚು ಆಂಟಿಬಾಡಿ ಟೆಸ್ಟ್ ನಡೆಸಿ, ಫಲಿತಾಂಶಗಳ ಆಧಾರದಲ್ಲಿ ಈ ಫಲಿತಾಂಶ ಪ್ರಕಟಿಸಿದೆ.


ಈ ಕುರಿತು ಮಾತನಾಡಿರುವ ಥೈರೋಕೇರ್ ಕಂಪನಿಯ ಅಧ್ಯಕ್ಷ ಡಾ. ಎ. ವೇಲುಮುನಿ, ‘ನಮ್ಮದು ಅತ್ಯಂತ ವ್ಯವಸ್ಥಿತ, ಸುಸಂಬದ್ಧ ಆಂಟಿಬಾಡಿ ಸಮೀಕ್ಷೆಯಾಗಿದೆ. ಹಾಗೆ ನೋಡಿದರೆ ಐಸಿಎಂಆರ್ ನಡೆಸಿದ 2ನೆ ಸಮೀಕ್ಷೆಯ ಫಲಿತಾಂಶಗಳಿಗೆ ನಮ್ಮ ಹಲವಷ್ಟು ಅಂಶಗಳು ತಾಳೆಯಾಗುತ್ತಿವೆ’ ಎಂದು ತಿಳಿಸಿದ್ದಾರೆ.
ಈ ಕುರಿತಾಗಿ, ಸರ್ಕಾರಿ ಸಂಶೋಧನೆ ಸಂಸ್ಥೆಗಳು ಏನು ಹೇಳುತ್ತವೆ ಎಂಬುದನ್ನು ಕಾದು ನೋಡಬೇಕಿದೆ.

Leave a Reply

Your email address will not be published. Required fields are marked *

You May Also Like

ಟೀಕಾಕಾರರಿಗೆ ಉತ್ತರ ಸಿಕ್ಕಿದೆ ಎಂದು ಭಾವಿಸುತ್ತೇನೆ: ಕೆ.ಸುಧಾಕರ್

ನಮ್ಮ ಬಗ್ಗೆ ವ್ಯಂಗ್ಯದ ಮಾತುಗಳನ್ನು ಆಡಿದ್ದವರಿಗೆ ಕ್ರಿಯಾಶೀಲ ಕಾರ್ಯ ಚಟುವಟಿಕೆಗಳ ಮೂಲಕ ಪ್ರತ್ಯುತ್ತರ ನೀಡಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಹೇಳಿದ್ದಾರೆ. ಎಂಟು ತಿಂಗಳ ರಾಜಕೀಯ ಗ್ರಹಣದ ಬಳಿಕ ಸಚಿವರಾದ ನಮ್ಮನ್ನು ಪ್ರತಿಪಕ್ಷದ ಕೆಲವರು ಲೇವಡಿ ಮಾಡಿದ್ದರು. ಇವರು ಏನು ಮಾಡುತ್ತಾರೋ ನಾವು ನೋಡುತ್ತೇವೆ ಎಂದು ಟೀಕೆಗಳ ಸುರಿಮಳೆ ಗೈದಿದ್ದರು. ಈಗ ಅವರಿಗೆಲ್ಲ ಉತ್ತರ ಸಿಕ್ಕಿರಬೇಕು ಎಂದು ಭಾವಿಸಿದ್ದೇನೆ ಎಂದರು.

ಆಮ್ಲಜನಕ ಟ್ಯಾಂಕ್ ಸೋರಿಕೆ : 11 ಸಾವು

ಮಹರಾಷ್ಟçದ ನಾಸಿಕ್‌ನಲ್ಲಿ ಜಾಕಿರ್ ಹುಸೇನ್ ಆಸ್ಪತ್ರೆಯಲ್ಲಿ ಆಮ್ಲಜನಕ ಟ್ಯಾಂಕ್ ಸೋರಿಕೆಯಿಂದ 11 ಜನ ಸಾವನ್ನಪ್ಪಿದ್ದಾರೆ.

ಭಾರತಕ್ಕೆ ಮರಳಿದವರು ರೂಪಾಂತರಿ ವೈರಸ್ ಹೊತ್ತು ತಂದರು

ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿರುವ ದಕ್ಷಿಣ ಆಫ್ರಿಕಾದ ರೂಪಾಂತರಿ ಕೊರೋನಾ ವೈರಸ್ ಭಾರತದಲ್ಲೂ ವಕ್ಕರಿಸಿದೆ. ದಕ್ಷಿಣ ಆಫ್ರಿಕಾದ ವೈರಸ್ ದೇಶದಲ್ಲಿ ನಾಲ್ಕು ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಮೊಬೈಲ್ ಬಳಕೆ ಬೇಡ ಅಂದಿದ್ದಕ್ಕೆ ಏನ್ ಮಗು ಹೀಗಾ ಮಾಡೋದು!

ಚೆನ್ನೈ : ಮೊಬೈಲ್ ಬಳಸುವ ಬಗ್ಗೆ ಬುದ್ಧಿವಾದ ಹೇಳಿದ್ದಕ್ಕೆ 16 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.