ಕೋವಿಡ್ ಲಸಿಕೆ ತಯಾರಿಸುತ್ತಿರುವ ಎಲ್ಲ ಪ್ರಯೋಗಗಳು ಈಗ ಯಶಸ್ವಿ ಹಾದಿಯಲ್ಲಿವೆ. ಸುರಕ್ಷತೆ ಮತ್ತು ರೋಗ ನಿರೋಧಕತೆ ಸೃಷ್ಟಿಸುವ ದೃಷ್ಟಿಯಲ್ಲಿ ಈ ಪ್ರಯೋಗಗಳು ಫಲ ನೀಡುತ್ತಿವೆ.


ಜಿನಿವಾ/ಜುರಿಚ್: ಸಂಶೋಧಕರು ಕೋವಿಡ್ ಲಸಿಕೆ ಕಂಡು ಹಿಡಿಯುವ ಯತ್ನದಲ್ಲಿ ಯಶಸ್ವಿಯಾಗುತ್ತಿದ್ದಾರೆ. ಬಹುತೇಕ ಸಂಶೋಧನೆಗಳು ಈಗ ಅಂತಿಮ ಹಂತದಲ್ಲಿವೆ, ಆದರೆ, 2021ರ ಆರಂಭದ ನಂತರವಷ್ಟೇ ಲಸಿಕೆ ಜನಬಳಕೆಗೆ ಲಭ್ಯವಾಗಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲೂಎಚ್ಒ) ತುರ್ತು ಕಾರ್ಯಕ್ರಮ ವಿಭಾಗದ ಮುಖ್ಯಸ್ಥ ಮೈಕ್ ರಾನ್ ತಿಳಿಸಿದ್ದಾರೆ.


ಸೋಷಿಯಲ್ ಮೀಡಿಯಾದ ಪಬ್ಲಿಕ್ ಇವೆಂಟ್ ಉದ್ದೇಶಿಸಿ ಅವರು ಬುಧವಾರ ಮಾತನಾಡಿದರು.
ಲಸಿಕೆಯನ್ನು ಸರಿಯಾದ ಕ್ರಮದಲ್ಲಿ ವಿತರಿಸಲು ಡಬ್ಲೂಎಚ್ಒ ಉದ್ದೇಶಿಸಿದೆ. ಆದರೆ ಸದ್ಯ ಸೋಂಕು ಹರಡದಂತೆ ತಡೆಯುವುದು ನಮ್ಮ ಮೊದಲ ಆದ್ಯತೆಯಾಗಿದೆ ಎಂದು ಅವರು ಹೇಳಿದ್ದಾರೆ.
ನಾವೀಗ ಉತ್ತಮ ಬೆಳವಣಿಗೆ ಕಾಣುತ್ತಿದ್ದೇವೆ. ಬಹುಪಾಲು ಲಸಿಕೆ ಸಂಶೋಧನೆಗಳು 3ನೆ ಹಂತದಲ್ಲಿದ್ದು, ಸುರಕ್ಷತೆ ಮತ್ತು ರೋಗ ನಿರೋಧಕ ಶಕ್ತಿ ಉತ್ಪಾದಿಸುವಲ್ಲಿ ಯಶಸ್ಸು ಕಾಣುತ್ತಿವೆ ಎಂದು ಅವರು ತಿಳಿಸಿದ್ದಾರೆ.
ವಾಸ್ತವದಲ್ಲಿ 2021ರ ಮೊದಲ ಭಾಗದಲ್ಲಿ ಲಸಿಕೆ ಸಾರ್ವಜನಿಕವಾಗಿ ಲಭ್ಯವಾಗಬಹುದು. ಈ ವಿಷಯದಲ್ಲಿ ನಾವು ಮುಕ್ತವಾಗಿ ಮಾತನಾಡಬೇಕು. ಲಸಿಕೆ ಕೇವಲ ಶ್ರೀಮಂತರಿಗೂ ಅಲ್ಲ, ಕೇವಲ ಬಡವರಿಗೂ ಅಲ್ಲ. ಅದು ಎಲ್ಲ ಸಾರ್ವಜನಿಕರಿಗಾಗಿ ತಯಾರಾಗುತ್ತಿದೆ. ಲಸಿಕೆ ಅಭಿವೃದ್ಧಿಯ ಎಲ್ಲ ಸಂಶೋಧನೆಗಳಿಗೆ ಡಬ್ಲೂಎಚ್ಒ ಒತ್ತಾಸೆಯಾಗಿ ನಿಂತಿದೆ ಎಂದು ರಾನ್ ಹೇಳಿದ್ದಾರೆ.


ಡಬ್ಲೂಎಚ್ಒ ಎಲ್ಲ ಕೋವಿಡ್ ಲಸಿಕೆ ಸಂಶೋಧನೆಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದು ಅದು ನೀಡುವ ಹೇಳಿಕೆಗೆ ಗಣನೀಯ ಮೌಲ್ಯ ಮತ್ತು ತೂಕವಿದೆ.

Leave a Reply

Your email address will not be published. Required fields are marked *

You May Also Like

ಕೊರೊನಾ ಎರಡನೇ ಅಲೆ: ಅಧಿಕಾರಿಗಳ ಸಭೆ ಬಳಿಕೆ ಸಿಎಂ ಹೇಳಿದ್ದೇನು?

ಕೊರೊನಾ ಎರಡನೇ ಅಲೆ ಹಿನ್ನೆಲೆ ಇಂದು ಸಿಎಂ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಸ್ಥಿತಿ ಅವಲೋಕಿಸಿದರು.

ನಿಡಗುಂದಿ ವಲಯ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟ
ಸದೃಢ ಮನಸ್ಸು ವಿಕಸನಕ್ಕೆ ಕ್ರೀಡೆಗಳು ಸಹಕಾರಿ- ಬಿ.ಟಿ.ಗೌಡರ

ಉತ್ತರಪ್ರಭ ಸುದ್ದಿ ನಿಡಗುಂದಿ: ಕ್ರೀಡೆಗಳಿಂದ ಸದೃಢ ದೇಹ,ಮನಸ್ಸು ಹೊಂದಬಹುದು. ಅವು ಶಾರೀರಿಕ ವಿಕಸನಕ್ಕೆ ಪ್ರೇರಕವಾಗಿವೆ ಎಂದು…

ಕೊರೊನಾ ಮಾರ್ಗಸೂಚಿ ಪಾಲಿಸಲು ಕೇಂದ್ರದಿಂದ ರಾಜ್ಯಗಳಿಗೆ ತಾಕೀತು!

ದೇಶದಲ್ಲಿ ಕೊರೊನಾ ಸೋಂಕು ರೋಗ ನಿಯಂತ್ರಿಸಲು ಎಲ್ಲ ಮಾರ್ಗಸೂಚಿಗಳನ್ನು ಅತ್ಯಂತ ಕಟ್ಟು ನಿಟ್ಟಾಗಿ ಪಾಲಿಸಬೇಕೆಂದು ಕೇಂದ್ರ ಸರ್ಕಾರ, ರಾಜ್ಯಗಳಿಗೆ ಮತ್ತೆ ಸೂಚಿಸಿದೆ.

ಆಸ್ಪತ್ರೆಯ ಮುಂದೆಯೇ ಮಹಿಳೆಯ ತಲೆಯಮೇಲೆ ಹರಿದ ಟ್ರಾಕ್ಟರ್

ಸ್ಕೂಟಿ ಮೇಲೆ ಹೋಗುತ್ತಿದ್ದ ಮಹಿಳೆಯೊಬ್ಬರು ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಪರಿಣಾಮ, ಹಿಂಬಾಗದಲ್ಲಿದ್ದ ಟ್ರಾಕ್ಟರ್ ಮಹಿಳೆಯ ತಲೆಯ ಮೇಲೆ ಹರಿದು ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯ ಬಿ ಆರ್ ಪಾಟೀಲ್ ಆಸ್ಪತ್ರೆಯ ಮುಂಬಾಗದಲ್ಲಿ ನಡೆದಿದೆ.