ಕೋವಿಡ್ ಲಸಿಕೆ ತಯಾರಿಸುತ್ತಿರುವ ಎಲ್ಲ ಪ್ರಯೋಗಗಳು ಈಗ ಯಶಸ್ವಿ ಹಾದಿಯಲ್ಲಿವೆ. ಸುರಕ್ಷತೆ ಮತ್ತು ರೋಗ ನಿರೋಧಕತೆ ಸೃಷ್ಟಿಸುವ ದೃಷ್ಟಿಯಲ್ಲಿ ಈ ಪ್ರಯೋಗಗಳು ಫಲ ನೀಡುತ್ತಿವೆ.


ಜಿನಿವಾ/ಜುರಿಚ್: ಸಂಶೋಧಕರು ಕೋವಿಡ್ ಲಸಿಕೆ ಕಂಡು ಹಿಡಿಯುವ ಯತ್ನದಲ್ಲಿ ಯಶಸ್ವಿಯಾಗುತ್ತಿದ್ದಾರೆ. ಬಹುತೇಕ ಸಂಶೋಧನೆಗಳು ಈಗ ಅಂತಿಮ ಹಂತದಲ್ಲಿವೆ, ಆದರೆ, 2021ರ ಆರಂಭದ ನಂತರವಷ್ಟೇ ಲಸಿಕೆ ಜನಬಳಕೆಗೆ ಲಭ್ಯವಾಗಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲೂಎಚ್ಒ) ತುರ್ತು ಕಾರ್ಯಕ್ರಮ ವಿಭಾಗದ ಮುಖ್ಯಸ್ಥ ಮೈಕ್ ರಾನ್ ತಿಳಿಸಿದ್ದಾರೆ.


ಸೋಷಿಯಲ್ ಮೀಡಿಯಾದ ಪಬ್ಲಿಕ್ ಇವೆಂಟ್ ಉದ್ದೇಶಿಸಿ ಅವರು ಬುಧವಾರ ಮಾತನಾಡಿದರು.
ಲಸಿಕೆಯನ್ನು ಸರಿಯಾದ ಕ್ರಮದಲ್ಲಿ ವಿತರಿಸಲು ಡಬ್ಲೂಎಚ್ಒ ಉದ್ದೇಶಿಸಿದೆ. ಆದರೆ ಸದ್ಯ ಸೋಂಕು ಹರಡದಂತೆ ತಡೆಯುವುದು ನಮ್ಮ ಮೊದಲ ಆದ್ಯತೆಯಾಗಿದೆ ಎಂದು ಅವರು ಹೇಳಿದ್ದಾರೆ.
ನಾವೀಗ ಉತ್ತಮ ಬೆಳವಣಿಗೆ ಕಾಣುತ್ತಿದ್ದೇವೆ. ಬಹುಪಾಲು ಲಸಿಕೆ ಸಂಶೋಧನೆಗಳು 3ನೆ ಹಂತದಲ್ಲಿದ್ದು, ಸುರಕ್ಷತೆ ಮತ್ತು ರೋಗ ನಿರೋಧಕ ಶಕ್ತಿ ಉತ್ಪಾದಿಸುವಲ್ಲಿ ಯಶಸ್ಸು ಕಾಣುತ್ತಿವೆ ಎಂದು ಅವರು ತಿಳಿಸಿದ್ದಾರೆ.
ವಾಸ್ತವದಲ್ಲಿ 2021ರ ಮೊದಲ ಭಾಗದಲ್ಲಿ ಲಸಿಕೆ ಸಾರ್ವಜನಿಕವಾಗಿ ಲಭ್ಯವಾಗಬಹುದು. ಈ ವಿಷಯದಲ್ಲಿ ನಾವು ಮುಕ್ತವಾಗಿ ಮಾತನಾಡಬೇಕು. ಲಸಿಕೆ ಕೇವಲ ಶ್ರೀಮಂತರಿಗೂ ಅಲ್ಲ, ಕೇವಲ ಬಡವರಿಗೂ ಅಲ್ಲ. ಅದು ಎಲ್ಲ ಸಾರ್ವಜನಿಕರಿಗಾಗಿ ತಯಾರಾಗುತ್ತಿದೆ. ಲಸಿಕೆ ಅಭಿವೃದ್ಧಿಯ ಎಲ್ಲ ಸಂಶೋಧನೆಗಳಿಗೆ ಡಬ್ಲೂಎಚ್ಒ ಒತ್ತಾಸೆಯಾಗಿ ನಿಂತಿದೆ ಎಂದು ರಾನ್ ಹೇಳಿದ್ದಾರೆ.


ಡಬ್ಲೂಎಚ್ಒ ಎಲ್ಲ ಕೋವಿಡ್ ಲಸಿಕೆ ಸಂಶೋಧನೆಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದು ಅದು ನೀಡುವ ಹೇಳಿಕೆಗೆ ಗಣನೀಯ ಮೌಲ್ಯ ಮತ್ತು ತೂಕವಿದೆ.

Leave a Reply

Your email address will not be published. Required fields are marked *

You May Also Like

ಮಾಟ, ಮಂತ್ರದ ಹೆಸರಿನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಮದುವೆಯಾದ ಪಾಪಿ!

ಚಿತ್ರದುರ್ಗ : ಅಪ್ರಾಪ್ತ ಬಾಲಕಿಯನ್ನು ವಿವಸ್ತ್ರಗೊಳಿಸಿ, ಬೆದರಿಸಿ, ವಿವಾಹವಾದ ಕುರಿತು ಕೂಡ ಚೆಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶನಿವಾರವೂ ಶಿಕ್ಷಣ ಇಲಾಖೆಗೆ ರಜೆ

ಎರಡು ಮತ್ತು ನಾಲ್ಕನೇ ಶನಿವಾರ ಮಾತ್ರ ಶಿಕ್ಷಣ ಇಲಾಖೆ ನೌಕರರಿಗೆ ರಜೆ ಘೋಶಿಸಲಾಗಿತ್ತು. ಆದರೆ ಇದೀಗ ಸಾರ್ವಜನಿಕ ಶಿಕ್ಷಣ ಇಲಾಖೆ ತಿಂಗಳ ಎಲ್ಲ ಶನಿವಾರವೂ ರಜೆ ಘೋಷಣೆ ಮಾಡಿದೆ.

ಗದಗನಲ್ಲಿ ಗೂಳಿ ಕಾಳಗ: ವಾಹನ ಸವಾರರ ಪರದಾಟ!

ನಗರದಲ್ಲಿ ಬಿಡಾಡಿ ದನಗಳ ಕಾಟ ಹೆಚ್ಚಾಗಿದೆ. ರಸ್ತೆಯ ಮಧ್ಯೆಯೇ ಪ್ರತಿ ದಿನ ಬಿಡಾಡಿ ದಿನಗಳ ಕಾದಾಟ ಸಾಮಾನ್ಯವಾಗಿ ಬಿಟ್ಟಿದೆ. ಇದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಪರದಾಡುವಂತಾಗಿದೆ.

ದೇಶವೇ ಕೋವಿಡ್ ನಿಂದ ಬಳಲುತ್ತಿರುವಾಗ ಪ್ರಧಾನಿ ಮೋದಿ ಬೇಜವಾಬ್ದಾರಿ ಹೇಳಿಕೆ ನಿಡುವುದು ಎಷ್ಟರ ಮಟ್ಟಿಗೆ ಸರಿ

ಕೊರೋನಾ ವಿಪತ್ತಿನಿಂದ ಭಾರತ ರಕ್ಷಿಸಿ ಬಿಟ್ಟಿತು ಎಂಬ ಹೇಳಿಕೆಗಳನ್ನು ಪ್ರಧಾನಿ ನರೇಂದ್ರ ಮೊದಿ ಅವರು ಹೇಳಿತ್ತಿರುವುದು ಬೇಜವಾಬ್ದಾರಿ ಹೇಳಿಕೆಯಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದಯಾಮಯ್ಯ ತಮ್ಮ ಟ್ವೀಟರ್ ನಲ್ಲಿ ಟ್ವೀಟ್ ಮಾಡಿದ್ದಾರೆ.