ಬೆಂಗಳೂರು: ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಣಕುಂಬಿ ಗ್ರಾಮದ ಬಳಿ ಮಹದಾಯಿ‌ ನದಿಗೆ ಅಣೆಕಟ್ಟುನಿರ್ಮಿಸಿ ಕೂಡು ಕಾಲುವೆ ಮುಖಾಂತರ 1.72 ಟಿ ಎಂ ಸಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಲಪ್ರಭಾ ನದಿಗೆತಿರುಗಿಸುವ ಕಳಸಾ ನಾಲಾ ತಿರುವು ಯೋಜನೆಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ. 

ಹಾಗೆಯೇ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ನೆರಸೆ ಗ್ರಾಮದ ಬಳಿ ಬಂಡೂರ  ಹಳ್ಳಕ್ಕೆ ಅಣೆಕಟ್ಟು  ನಿರ್ಮಿಸಿ, ಕೂಡು ಕಾಲುವೆ ಮುಖಾಂತರ 2.18 ಟಿಎಂಸಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ  ಬಳಸಿಕೊಳ್ಳಲು  ಮಲಪ್ರಭಾ ನದಿಗೆ ತಿರುಗಿಸುವ ಬಂಡೂರಿ ನಾಲಾ  ತಿರುವು ಯೋಜನೆಗೂ ಆಡಳಿತಾತ್ಮಕ  ಅನುಮೋದನೆ‌ ನೀಡಿದೆ‌.

ಬಹುವರ್ಷದ ಹೋರಾಟ

ರಾಜ್ಯದ ಪಾಲಿನ ಕುಡಿಯುವ ನೀರನ್ನ ಪಡೆಯಲು ಎರಡು ದಶಕಗಳ ಕಾಲದಿಂದ ಹೋರಾಟ ನಡೆಯುತ್ತ ಬಂದಿತ್ತು. ಗೋವಾ ರಾಜ್ಯ ಸರ್ಕಾರವು ಪ್ರತಿ ಸಲ ತಗಾದೆ ತೆಗೆಯುತ್ತ, ವ್ಯಾಜ್ಯವನ್ನು ಸುಪ್ರಿಂಕೋರ್ಟ್ ಮೆಟ್ಟಿಲಿಗೆ ಒಯ್ಯುತ್ತ ಬಂದಿತ್ತು. ಈ ವ್ಯಾಜ್ಯವನ್ನು ನ್ಯಾಯ ಮಂಡಳಿಗೆ ಒಪ್ಪಿಸಿದ ನಂತರ ವಾದ-ವಿವಾದಗಳು ನಡೆದು, ಅಂತಿಮದಲ್ಲಿ ಸಮಾಧಾನಕರ ಎಂಬಂತಹ ಆದೇಶ ಬಂದಿತ್ತು. ಆದೇಶ ಬಂದು ಎರಡು ವರ್ಷವಾದರೂ ಕೇಂದ್ರ ಹಲವು ಇಲಾಖೆಗಳ ಅನುಮತಿ ಪಡೆಯುವುದು ತಡವಾಗಿತ್ತು. ಈಗ ದಾರಿ ಸುಗಮವಾಗಿದೆ.

ಹಣಕಾಸು ಅನುದಾನ ಎಲ್ಲಿ?

 ಅನುಮೋದನೆ‌ ನೀಡಿದ  ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅಭಿನಂದಿಸಿದ್ದಾರೆ. ಆದರೆ, ಆಡಳಿತಾತ್ಮಕ ಅನುಮೋದನೆಯಷ್ಟೇ ಸಾಕಾಗುವುದಿಲ್ಲ, ಹಣಕಾಸು ಅನುಮೋದನೆ ಸಿಗಬೇಕು. ಬಜೆಟ್ಟಿನಲ್ಲಿ ಯೋಜನೆಗೆ ಬೇಕಾಗುವಷ್ಟು ಅನುದಾನ ಮೀಸಲಿಟ್ಟಿಲ್ಲ. ಸದ್ಯ ರಾಜ್ಯ ಸರ್ಕಾರದ ಬೊಕ್ಕಸ ಸುಭದ್ರವಾಗಿಲ್ಲ. ಅದಕ್ಕೆ ಈ ಕುರಿತು ಸಚಿವ ರಮೇಶ್ ಜಾರಕಿಹೊಳಿ ಮಾತನ್ನೇ ಆಡಿಲ್ಲ.

ಆಡಳಿತಾತ್ಮಕ ಅನುಮೋದನೆ ತೋರಿಸುತ್ತ ಜನರನ್ನು ದಾರಿ ತಪ್ಪಿಸುವ ಸಾಧ್ಯತೆಯೇ ಹೆಚ್ಚಾಗಿವೆ. ಮುಂಬೈ ಕರ್ನಾಟಕದ ಜನಪ್ರತಿನಿಧಿಗಳು, ಕಳಸಾ-ಬಂಡೂರಿ ಹೋರಾಟಗಾರರು ಈ ಬಗ್ಗೆ ಒತ್ತಡ ಹೇರುವ ಕೆಲಸವನ್ನು ಈಗಿಂದಲೇ ಆರಂಭಿಸಬೇಕು.

Leave a Reply

Your email address will not be published. Required fields are marked *

You May Also Like

ನಕ(ಇ)ಲಿ ಹಿಂದೂಗಳು ಬೀದಿಗೆ ಬಿದ್ದು ಅರಚಾಡುತ್ತಿವೆ

ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡದ ಮನೆಗಳನ್ನು ಗುರುತಿಟ್ಟುಕೊಳ್ಳಲಾಗುತ್ತಿದೆ ಎಂಬ ಗಂಭೀರ ಆರೋಪ ಮಾಡಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಅವರ ವಿರುದ್ಧ ಬಲ ಪಂಥೀಯ ಸಂಘಟನೆಗಳು ಕಿಡಿ ಕಾರಿದ್ದವು. ಇದೊಂದು ಪ್ರಚಾರದ ಗಿಮಿಕ್ ಎಂದು ಟೀಕಿಸಿದ್ದವು. ಈಗ ಕುಮಾರಸ್ವಾಮಿ ಅವರು ಈ ಎಲ್ಲಾ ಟೀಕೆಗಳಿಗೆ ಉತ್ತರ ನೀಡಿದ್ದಾರೆ.

ಆಂತರಿಕ ಕಚ್ಚಾಟದಿಂದ ಬಿಜೆಪಿ ಸರ್ಕಾರ ಪತನವಾದರೆ ನಾವು ಜವಾಬ್ದಾರರಲ್ಲ-ಸಿದ್ದರಾಮಯ್ಯ

ಕಾಂಗ್ರೆಸ್ ಪಕ್ಷದ ಯಾವ ಶಾಸಕರು ರಾಜಿನಾಮೆ ನೀಡುವುದಿಲ್ಲ. ತಮ್ಮ ಪಕ್ಷದ ಹುಳುಕು ಮುಚ್ಚಿಕೊಳ್ಳಲು ಸಚಿವ ರಮೇಶ್ ಜಾರಕಿಹೊಳಿ ಸುಳ್ಳು ಹೇಳುತ್ತಿದ್ದಾರೆ. ಬಿಜೆಪಿಯಲ್ಲಿನ ಆಂತರಿಕ ಕಚ್ಚಾಟವೇ ಬಿಜೆಪಿಗೆ ಮುಳುವಾಗಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

ಗಜೇಂದ್ರಗಡದಲ್ಲಿ ಮುಷ್ಕರ: ಪೊಲೀಸ್-ಪ್ರತಿಭಟನಾಕಾರರ ಮದ್ಯೆ ಮಾತಿನ ಚಕಮಕಿ

ರೈತ, ಕಾರ್ಮಿಕ, ವಿದ್ಯುತ್, ಎಪಿಎಂಸಿ ಕಾಯ್ದೆ, ಬೆಲೆ ನಿಯಂತ್ರಣ ಕಾಯ್ದೆ, ಭೂ ಸುಧಾರಣೆ ಕಾಯ್ದೆ ಸೇರಿದಂತೆ ಜನ ವಿರೋದಿ ನೀತಿ ಖಂಡಿಸಿ ರಾಷ್ಟ್ರವ್ಯಾಪಿ, ಕಾರ್ಮಿಕ, ರೈತ ಹಾಗೂ ವಿವಿಧ ಸಂಘಟನೆಗಳು ಕರೆ ನೀಡಿರುವ ಮುಷ್ಕರದ ಅಂಗವಾಗಿ ಗದಗ ಜಿಲ್ಲೆ ಗಜೇಂದ್ರಗಡದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ನರೆಗಲ್- ತೊಂಡಿಹಾಳ್ ರಸ್ತೆ ದುರಸ್ಥಿಗೆ ಮುಕ್ತಿ ಯಾವಾಗ..?

ನರೇಗಲ್ಲ: ಹೋಬಳಿ ವ್ಯಾಪ್ತಿಯಯಲ್ಲಿ ಮೊದಲೇ ಹಾಳಾಗಿದ್ದ ರಸ್ತೆಗಳು ಈಗ ಆರಂಭವಾಗಿರುವ ಮುಂಗಾರು ಮಳೆಗೆ ಮತ್ತಷ್ಟು ಹಾಳಾಗಿ ಅಪಘಾತಗಳಿಗೆ ಅಹ್ವಾನ ನೀಡುತ್ತಿವೆ. ನರೆಗಲ್ಲ ಪಟ್ಟಣದಿಂದ ಯಲಬುರ್ಗಾ ತಾಲ್ಲೂಕಿನ ಗ್ರಾಮಗಳಿಗೆ ತೆರಳುವ ರಸ್ತೆಯು ಸಂಪೂರ್ಣವಾಗಿ ಕಿತ್ತು ಹೋಗಿದೆ.