ಸ್ವಾತಂತ್ರ್ಯ ದಿನಾಚರಣೆಯ ಈ ಸುಸಂದರ್ಭದಲ್ಲಿ ನಟ ದರ್ಶನ್ ನಾಡಿನ ಜನತೆಗೆ ಟ್ವೀಟ್ ಮಾಡಿದ್ದಾರೆ.

ಬೆಂಗಳೂರು: ದೇಶದಲ್ಲಿ ಇಂದು ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜನತೆಗೆ ಶುಭ ಕೋರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಆಗಷ್ಟ್ 15 ಎಂಬುವುದು ಭಾರತೀಯರ ಸುದಿನ. ಈ ಶುಭ ದಿನವನ್ನು ನಾವು ಹೆಮ್ಮೆಯಿಂದ ಆಚರಿಸಬೇಕು. ನಮ್ಮ ಜೀವನದ ಕಣಕಣದಲ್ಲಿಯೂ ದೇಶಭಕ್ತಿ ಜಾಗೃತವಾಗಿರಬೇಕು. ಸರ್ವರಿಗೂ 74ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ.

ಅಲ್ಲದೇ, ಇದಕ್ಕೂ ಮೊದಲು ದಚ್ಚು ಅವರು, ಸಂಗೋಳ್ಳಿ ರಾಯಣ್ಣ ಅವರನ್ನು ನೆನಪು ಮಾಡಿಕೊಂಡಿದ್ದಾರೆ. ಕನ್ನಡ ನಾಡು ಕಂಡ ಕೆಚ್ಚೆದೆಯ ನಾಯಕ ಬ್ರಿಟಿಷರ ವಿರುದ್ಧ ವೀರಾವೇಶದಿಂದ ಹೋರಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ 222ನೇ ಜಯಂತ್ಯೋತ್ಸವದ ಮತ್ತು 74ನೇ ಸ್ವಾತಂತ್ರ್ಯೋತ್ಸವದ ಶುಭಾಶಯಗಳು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಎಸ್.ಪಿ.ಬಿ. ಜನ್ಮದಿನ: ಟ್ವೀಟರ್ ನಲ್ಲಿ ಶುಭಾಶಯಗಳ ಸುರಿಮಳೆ

ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಸುಮಾರು 40,000ಕ್ಕೂ ಹೆಚ್ಚು ಚಿತ್ರಗೀತೆಗಳನ್ನು ಹಾಡಿರುವ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಮ್ ಅವರಿಗೆ ಇಂದು 73ನೇ ಜನ್ಮದಿನದ ಸಂಭ್ರಮ.

ಈ ನಟ ಈಗ ಟಾಪ್ ನಟರ ಪಟ್ಟಿಯಲ್ಲಿ ಮೊದಲಿಗ!

ಡಿಯರ್‌ ಕಾಮ್ರೇಡ್‌, ಟ್ಯಾಕ್ಸಿವಾಲ, ನೋಟಾ ಚಿತ್ರಗಳು ಗಲ್ಲಾಪೆಟ್ಟಿಗೆಯಲ್ಲಿ ಸಾಧನೆ ಮಾಡಲಿಲ್ಲ. ಆದರೂ ಬಾಲಿವುಡ್ ನ ಕೆಲವು ನಾಯಕರನ್ನು ಮಣಿಸಿ ದೇವರಕೊಂಡ ಮುನ್ನುಗ್ಗುತ್ತಿದ್ದಾರೆ.

ಗೋಲ್ಡನ್ ಸ್ಟಾರ್ ಗೆ ಅಡ್ವಾನ್ಸ್ ವಿಶ್ ಮಾಡಿದ ಕಿಚ್ಚ

ಬೆಂಗಳೂರು : ಕಿಚ್ಚ ಸುದೀಪ್ ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ಅಡ್ವಾನ್ಸ್ ವಿಶ್ ಮಾಡಿದ್ದಾರೆ. ಗೋಲ್ಡನ್…

ಸಾಯುವ ಸಮಯವನ್ನು ನಟ ಸುಶಾಂತ್ ಮೊದಲೇ ನಿರ್ಧರಿಸಿದ್ದರೆ?

ಬೆಂಗಳೂರು: ನಟ ಸುಶಾಂತ್ ಸಿಂಗ್ ರಜಪೂತ್ ಅವರ ಆತ್ಮಹತ್ಯೆಯ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದು, ಹಲವರ…