ಹೈದರಾಬಾದ್ : ಜಮೀನು ವಿವಾದ ಬಗೆಹರಿಸುವುದಾಗಿ ಹೇಳಿ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿಯೇ ತಹಸೀಲ್ದಾರ್ ಒಬ್ಬರು ಎಸಿಬಿ ಬಲೆಗೆ ಬಿದ್ದ ಘಟನೆ ನಡೆದಿದೆ.

ಈ ಘಟನೆ ತೆಲಂಗಾಣದಲ್ಲಿ ನಡೆದಿದ್ದು, ಕೀಸರದ ತಹಶೀಲ್ದಾರ್ ಎರ್ವಾ ಬಲರಾಜು ನಾಗರಾಜು ಎಸಿಬಿ ಬಲೆಗೆ ಬಿದ್ದಿರುವ ಅಧಿಕಾರಿ.

ಇವರು ಬರೋಬ್ಬರಿ ರೂ. 1.10 ಕೋಟಿಗಿಂತ ಹೆಚ್ಚು ಹಣವನ್ನು ಲಂಚದ ರೂಪದಲ್ಲಿ ಪಡೆಯುತ್ತಿದ್ದರು ಎನ್ನಲಾಗಿದೆ. ಆದರೆ, ಪಡೆಯುವ ಸಂದರ್ಭದಲ್ಲಿಯೇ ಅಧಿಕಾರಿಗಳು ಬಲೆ ಬೀಸಿ ಹಿಡಿದಿದ್ದಾರೆ. ನೋಟುಗಳ ಎಣಿಕೆ ಒಂದು ರಾತ್ರಿ ಪೂರ್ಣವಾಗಿ ನಡೆದಿದೆ.

ರಾಂಪಲ್ಲಿ ದಯಾರದಲ್ಲಿ 28 ಎಕರೆ ಜಮೀನಿನ ವಿವಾದ ಸೃಷ್ಟಿಯಾಗಿತ್ತು. ಈ ವಿವಾದಿತ ಪ್ರದೇಶವನ್ನು ಶ್ರೀ ಸತ್ಯ ಡೆವಲಪರ್ ಚೌಲಾ ಶ್ರೀನಾಥ್ ಪರ ಮಾಡಿಕೊಡಲು ತಹಸೀಲ್ದಾರ್ ಲಂಚ ಪಡೆಯುತ್ತಿದ್ದರು. ಹಣ ಪಡೆಯುತ್ತಿದ್ದ ಸಂದರ್ಭದಲ್ಲಿಯೇ ದಾಳಿ ಮಾಡಿದ ಅಧಿಕಾರಿಗಳು, ಚೌಲಾ ಶ್ರೀನಾಥ್, ತಹಶೀಲ್ದಾರ್ ನಾಗರಾಜು ಮತ್ತು ಲ್ಯಾಂಡ್ ಬ್ರೋಕರ್ ಕೆ.ಅಂಜಿ ರೆಡ್ಡಿ ಅವರನ್ನು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೊರೊನಾಗೆ ಜಗತ್ತಿನಲ್ಲಿ ಇಲ್ಲಿಯವರೆಗೂ ಬಲಿಯಾದವರ ಸಂಖ್ಯೆ ಎಷ್ಟು ಗೊತ್ತಾ?

ಜಗತ್ತಿನಲ್ಲಿ ಮಹಾಮಾರಿಯ ಆರ್ಭಟ ಮುಂದುವರೆದಿದೆ. ಇಲ್ಲಿಯವರೆಗೂ 2.33 ಲಕ್ಷ ಜನರು ಇದಕ್ಕೆ ಬಲಿಯಾಗಿದ್ದಾರೆ. ಸೋಂಕಿತರ ಸಂಖ್ಯೆ 33 ಲಕ್ಷ ದಾಟಿದೆ ಎಂದು ತಿಳಿದು ಬಂದಿದೆ.

ಗಡಿಯಲ್ಲಿ 60 ಸಾವಿರ ಸೈನಿಕರನ್ನು ನಿಯೋಜಿಸಿದ ಚೀನಾ!

ವಾಷಿಂಗ್ಟನ್ : ಗಡಿಯಲ್ಲಿ ಚೀನಾ ರಾಷ್ಟ್ರದ ಉಪಟಳ ಮುಂದುವರೆದಿದೆ. ಚೀನಾ ಭಾರತದ ಮೇಲೆ ದಾಳಿ ಮಾಡುವ ಹುನ್ನಾರ ನಡೆಸುತ್ತಿದೆಯೇ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಗಡಿಯಲ್ಲಿ 60 ಸಾವಿರ ಸೈನಿಕರನ್ನು ನಿಯೋಜಿಸಿದ್ದೆ ಈ ಸಂಶಯಕ್ಕೆ ಕಾರಣವಾಗುತ್ತಿದೆ.

ಹಳೆಯ ಧಾರಾವಾಹಿಗಳಿಗೆ ಮೊರೆ: ದಾಖಲೆ ಸೇರಿದ ರಾಮಾಯಣ ಧಾರಾವಾಹಿ

ಲಾಕ್ ಡೌನ್ ಹಿನ್ನೆಲೆ ಬಹುತೇಕ ಚಾಲ್ತಿಯಲ್ಲಿರು ಧಾರಾವಾಹಿ ಶೂಟಿಂಗ್ ಕಾರ್ಯ ಕೂಡ ನಿಂತಿದೆ. ಇದರಿಂದಾಗಿ ಡಿಡಿ ವಾಹಿನಿ ಮತ್ತೆ ರಾಮಾಯಣ ಧಾರಾವಾಹಿ ಮರುಪ್ರಸಾರ ಮಾಡಿದ್ದು ವೀಕ್ಷಕರ ಸಂಖ್ಯೆಯಲ್ಲಿ ದಾಖಲೆ ಮೆರೆದಿದೆ.

ಕೋರಿಯಾದಿಂದ ಕೋಲಾರಕ್ಕೂ ಬಂದಿವೆ ಸೋಂಕು ಟೆಸ್ಟ್ ಕಿಟ್ ಗಳು

ಕೊರೋನಾ ಸೋಂಕು ತುರ್ತಾಗಿ ಪತ್ತೆ ಹಚ್ಚಲು ಕೋರಿಯಾದಿಂದ ಕೋಲಾರ ಜಿಲ್ಲೆಯ ಆರೋಗ್ಯ ಇಲಾಖೆಗೆ ರ್ಯಾಪಿಡ್ ಆಂಟಿ ಬಾಡಿ ಟೆಸ್ಟಿಂಗ್ ಕಿಟ್ ಗಳು ಬಂದಿವೆ. ಈ ಮೂಲಕ ಇಪ್ಪತ್ತು ನಿಮಿಷದೊಳಗಾಗಿ ಕೊರೋನಾ ಸೇರಿ ಯಾವುದೇ ಸೋಂಕಿದ್ದರೂ ಪತ್ತೆ ಹಚ್ಚಬಹುದಾಗಿದೆ. ಇದು ದೇಶದಲ್ಲಿ ಮೊದಲ ಪ್ರಯತ್ನ ಎಂದು ಹೇಳಲಾಗುತ್ತಿದೆ.