ಕೋಟಿ ಕೋಟಿ ಹಣದೊಂದಿಗೆ ಎಸಿಬಿ ಬಲೆಗೆ ಬಿದ್ದ ತಹಸೀಲ್ದಾರ್!

ಹೈದರಾಬಾದ್ : ಜಮೀನು ವಿವಾದ ಬಗೆಹರಿಸುವುದಾಗಿ ಹೇಳಿ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿಯೇ ತಹಸೀಲ್ದಾರ್ ಒಬ್ಬರು ಎಸಿಬಿ ಬಲೆಗೆ ಬಿದ್ದ ಘಟನೆ ನಡೆದಿದೆ.

ಈ ಘಟನೆ ತೆಲಂಗಾಣದಲ್ಲಿ ನಡೆದಿದ್ದು, ಕೀಸರದ ತಹಶೀಲ್ದಾರ್ ಎರ್ವಾ ಬಲರಾಜು ನಾಗರಾಜು ಎಸಿಬಿ ಬಲೆಗೆ ಬಿದ್ದಿರುವ ಅಧಿಕಾರಿ.

ಇವರು ಬರೋಬ್ಬರಿ ರೂ. 1.10 ಕೋಟಿಗಿಂತ ಹೆಚ್ಚು ಹಣವನ್ನು ಲಂಚದ ರೂಪದಲ್ಲಿ ಪಡೆಯುತ್ತಿದ್ದರು ಎನ್ನಲಾಗಿದೆ. ಆದರೆ, ಪಡೆಯುವ ಸಂದರ್ಭದಲ್ಲಿಯೇ ಅಧಿಕಾರಿಗಳು ಬಲೆ ಬೀಸಿ ಹಿಡಿದಿದ್ದಾರೆ. ನೋಟುಗಳ ಎಣಿಕೆ ಒಂದು ರಾತ್ರಿ ಪೂರ್ಣವಾಗಿ ನಡೆದಿದೆ.

ರಾಂಪಲ್ಲಿ ದಯಾರದಲ್ಲಿ 28 ಎಕರೆ ಜಮೀನಿನ ವಿವಾದ ಸೃಷ್ಟಿಯಾಗಿತ್ತು. ಈ ವಿವಾದಿತ ಪ್ರದೇಶವನ್ನು ಶ್ರೀ ಸತ್ಯ ಡೆವಲಪರ್ ಚೌಲಾ ಶ್ರೀನಾಥ್ ಪರ ಮಾಡಿಕೊಡಲು ತಹಸೀಲ್ದಾರ್ ಲಂಚ ಪಡೆಯುತ್ತಿದ್ದರು. ಹಣ ಪಡೆಯುತ್ತಿದ್ದ ಸಂದರ್ಭದಲ್ಲಿಯೇ ದಾಳಿ ಮಾಡಿದ ಅಧಿಕಾರಿಗಳು, ಚೌಲಾ ಶ್ರೀನಾಥ್, ತಹಶೀಲ್ದಾರ್ ನಾಗರಾಜು ಮತ್ತು ಲ್ಯಾಂಡ್ ಬ್ರೋಕರ್ ಕೆ.ಅಂಜಿ ರೆಡ್ಡಿ ಅವರನ್ನು ಬಂಧಿಸಿದ್ದಾರೆ.

Exit mobile version