ಹೈದರಾಬಾದ್ : ಜಮೀನು ವಿವಾದ ಬಗೆಹರಿಸುವುದಾಗಿ ಹೇಳಿ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿಯೇ ತಹಸೀಲ್ದಾರ್ ಒಬ್ಬರು ಎಸಿಬಿ ಬಲೆಗೆ ಬಿದ್ದ ಘಟನೆ ನಡೆದಿದೆ.

ಈ ಘಟನೆ ತೆಲಂಗಾಣದಲ್ಲಿ ನಡೆದಿದ್ದು, ಕೀಸರದ ತಹಶೀಲ್ದಾರ್ ಎರ್ವಾ ಬಲರಾಜು ನಾಗರಾಜು ಎಸಿಬಿ ಬಲೆಗೆ ಬಿದ್ದಿರುವ ಅಧಿಕಾರಿ.

ಇವರು ಬರೋಬ್ಬರಿ ರೂ. 1.10 ಕೋಟಿಗಿಂತ ಹೆಚ್ಚು ಹಣವನ್ನು ಲಂಚದ ರೂಪದಲ್ಲಿ ಪಡೆಯುತ್ತಿದ್ದರು ಎನ್ನಲಾಗಿದೆ. ಆದರೆ, ಪಡೆಯುವ ಸಂದರ್ಭದಲ್ಲಿಯೇ ಅಧಿಕಾರಿಗಳು ಬಲೆ ಬೀಸಿ ಹಿಡಿದಿದ್ದಾರೆ. ನೋಟುಗಳ ಎಣಿಕೆ ಒಂದು ರಾತ್ರಿ ಪೂರ್ಣವಾಗಿ ನಡೆದಿದೆ.

ರಾಂಪಲ್ಲಿ ದಯಾರದಲ್ಲಿ 28 ಎಕರೆ ಜಮೀನಿನ ವಿವಾದ ಸೃಷ್ಟಿಯಾಗಿತ್ತು. ಈ ವಿವಾದಿತ ಪ್ರದೇಶವನ್ನು ಶ್ರೀ ಸತ್ಯ ಡೆವಲಪರ್ ಚೌಲಾ ಶ್ರೀನಾಥ್ ಪರ ಮಾಡಿಕೊಡಲು ತಹಸೀಲ್ದಾರ್ ಲಂಚ ಪಡೆಯುತ್ತಿದ್ದರು. ಹಣ ಪಡೆಯುತ್ತಿದ್ದ ಸಂದರ್ಭದಲ್ಲಿಯೇ ದಾಳಿ ಮಾಡಿದ ಅಧಿಕಾರಿಗಳು, ಚೌಲಾ ಶ್ರೀನಾಥ್, ತಹಶೀಲ್ದಾರ್ ನಾಗರಾಜು ಮತ್ತು ಲ್ಯಾಂಡ್ ಬ್ರೋಕರ್ ಕೆ.ಅಂಜಿ ರೆಡ್ಡಿ ಅವರನ್ನು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೋವಿಡ್ ಬಲಿ: ಹೈದರಾಬಾದ್ ನಲ್ಲಿ ವೈದ್ಯರ ಮೇಲೆ ದಾಳಿ

ಹೈದರಾಬಾದ್: ಹೈದರಾಬಾದ್ ನ ಗಾಂಧಿ ಆಸ್ಪತ್ರೆಯಲ್ಲಿ ಕೊರೊನಾ ರೋಗಿ ಚಿಕಿತ್ಸೆ ಫಲಕಾರಿಯಾಗದೆ ಬಲಿಯಾದ ನಂತರ ವೈದ್ಯರ…

3 ಲಕ್ಷ ರೂ. ಚಿನ್ನದ ಮಾಸ್ಕ್ ಧರಿಸುವ ಶಂಕರ್ ಕುರಾಡೆ

ಪುಣೆ: ಈ ಮನುಷ್ಯನಿಗೆ ಚಿನ್ನದ ಹುಚ್ಚು ಮತ್ತು ಪ್ರಚಾರದ ತೆವಲು ಎಷ್ಟಿದೆಯೆಂದರೆ, ಕೊರೋನಾ ಬಿಕ್ಕಟ್ಟಿನಲ್ಲಿ ಚಿನ್ನದ…

ಶ್ರೀಮಂತರ ಪಟ್ಟಿಯಲ್ಲಿ ಕೆಳಕ್ಕೆ ಇಳಿದ ಮುಖೇಶ್ ಅಂಬಾನಿ!

ಮುಂಬಯಿ : ಫೋರ್ಬ್ಸ್ ಪಟ್ಟಿಯಲ್ಲಿ ಹಿಂದಕ್ಕೆ ಬಿದ್ದಿರುವ ಭಾರತೀಯ ಉದ್ಯಮಿ ಮುಖೇಶ್ ಅಂಬಾನಿ ಅವರು 9ನೇ ಸ್ಥಾನಕ್ಕೆ ಕುಸಿತ ಕಂಡಿದ್ದಾರೆ.

ಚೀನಾಕ್ಕೆ ಟಾಂಗ್ ನೀಡಿದ ಭಾರತ ಹಾಗೂ ಅಮೆರಿಕ!

ನವದೆಹಲಿ : ಭಾರತ ಹಾಗೂ ಅಮೆರಿಕದ ನಡುವೆ ಮಹತ್ತರವಾದ ರಕ್ಷಣಾ ಒಪ್ಪಂದಗಳಾಗಿವೆ. ಎರಡೂ ರಾಷ್ಟ್ರಗಳ ನಡುವೆ ಮಿಲಿಟರಿ ತಂತ್ರಜ್ಞಾನ, ವರ್ಗೀಕೃತ ಉಪಗ್ರಹ ದತ್ತಾಂಶ ಹಾಗೂ ಸೂಕ್ಷ್ಮ ಮಾಹಿತಿಗಳ ವಿನಿಮಯದ ಕುರಿತು 2+2 ಮಾತುಕತೆ ನಡೆದಿವೆ.