ಹೈದರಾಬಾದ್ : ಜಮೀನು ವಿವಾದ ಬಗೆಹರಿಸುವುದಾಗಿ ಹೇಳಿ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿಯೇ ತಹಸೀಲ್ದಾರ್ ಒಬ್ಬರು ಎಸಿಬಿ ಬಲೆಗೆ ಬಿದ್ದ ಘಟನೆ ನಡೆದಿದೆ.

ಈ ಘಟನೆ ತೆಲಂಗಾಣದಲ್ಲಿ ನಡೆದಿದ್ದು, ಕೀಸರದ ತಹಶೀಲ್ದಾರ್ ಎರ್ವಾ ಬಲರಾಜು ನಾಗರಾಜು ಎಸಿಬಿ ಬಲೆಗೆ ಬಿದ್ದಿರುವ ಅಧಿಕಾರಿ.

ಇವರು ಬರೋಬ್ಬರಿ ರೂ. 1.10 ಕೋಟಿಗಿಂತ ಹೆಚ್ಚು ಹಣವನ್ನು ಲಂಚದ ರೂಪದಲ್ಲಿ ಪಡೆಯುತ್ತಿದ್ದರು ಎನ್ನಲಾಗಿದೆ. ಆದರೆ, ಪಡೆಯುವ ಸಂದರ್ಭದಲ್ಲಿಯೇ ಅಧಿಕಾರಿಗಳು ಬಲೆ ಬೀಸಿ ಹಿಡಿದಿದ್ದಾರೆ. ನೋಟುಗಳ ಎಣಿಕೆ ಒಂದು ರಾತ್ರಿ ಪೂರ್ಣವಾಗಿ ನಡೆದಿದೆ.

ರಾಂಪಲ್ಲಿ ದಯಾರದಲ್ಲಿ 28 ಎಕರೆ ಜಮೀನಿನ ವಿವಾದ ಸೃಷ್ಟಿಯಾಗಿತ್ತು. ಈ ವಿವಾದಿತ ಪ್ರದೇಶವನ್ನು ಶ್ರೀ ಸತ್ಯ ಡೆವಲಪರ್ ಚೌಲಾ ಶ್ರೀನಾಥ್ ಪರ ಮಾಡಿಕೊಡಲು ತಹಸೀಲ್ದಾರ್ ಲಂಚ ಪಡೆಯುತ್ತಿದ್ದರು. ಹಣ ಪಡೆಯುತ್ತಿದ್ದ ಸಂದರ್ಭದಲ್ಲಿಯೇ ದಾಳಿ ಮಾಡಿದ ಅಧಿಕಾರಿಗಳು, ಚೌಲಾ ಶ್ರೀನಾಥ್, ತಹಶೀಲ್ದಾರ್ ನಾಗರಾಜು ಮತ್ತು ಲ್ಯಾಂಡ್ ಬ್ರೋಕರ್ ಕೆ.ಅಂಜಿ ರೆಡ್ಡಿ ಅವರನ್ನು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಪ್ಲಾಸ್ಮಾ ಥೆರೆಪಿ ಭರವಸೆ ಹುಸಿಯಾಯಿತೇ?

ಕೊರೊನಾ ಚಿಕಿತ್ಸೆಗೆ ಪ್ಲಾಸ್ಲಾ ಥೆರೆಪಿ ರಾಮಬಾಣ ಎಂದೇ ಎಲ್ಲರೂ ಹೇಳುತ್ತಿದ್ದರು. ಆದರೆ, ಸದ್ಯ ಇದು ಹುಸಿಯಾಗಿದೆ ಎನ್ನಲಾಗುತ್ತಿದೆ.

ಸಾಯುವ ಸಮಯವನ್ನು ನಟ ಸುಶಾಂತ್ ಮೊದಲೇ ನಿರ್ಧರಿಸಿದ್ದರೆ?

ಬೆಂಗಳೂರು: ನಟ ಸುಶಾಂತ್ ಸಿಂಗ್ ರಜಪೂತ್ ಅವರ ಆತ್ಮಹತ್ಯೆಯ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದು, ಹಲವರ…

ಒಂದು ಫೇರ್ & ಲವ್ಲಿ ಜಗಳ : ಗ್ಲೋ & ಹ್ಯಾಂಡ್ಸಮ್ Vs ಫೇರ್ & ಹ್ಯಾಂಡ್ಸಮ್

ಫೇಸ್ ಕ್ರೀಮ್ ಹೆಸರುಗಳಿಗಾಗಿ ಈಗ ಇಮಾಮಿ ಮ಻ತ್ತು ಹಿಂದೂಸ್ತಾನ್ ಯುನಿಲಿವರ್ ಕಂಪನಿಗಳು ಕೋರ್ಟಿನ ಅಂಗಳದಲ್ಲಿ ಕಾದಾಡುತ್ತಿವೆ.…

ಕೊರೋನಾ ಸೊಂಕು ನಿಯಂತ್ರಣಕ್ಕೆ ಪ್ಲಾಸ್ಮಾ ಥೆರಫಿ

ಕೊರೋನಾ ಸೋಂಕಿಗೆ ಯಾವುದೇ ಔಷಧಿ ಕಂಡು ಹಿಡಿಯಲಾಗಿಲ್ಲ. ಆದರೆ ರಾಜ್ಯದಲ್ಲಿ ಈ ಸೋಂಕು ನಿಯಂತ್ರಣಕ್ಕೆ ಪ್ಲಾಸ್ಮಾ ಥೆರಫಿ ಚಿಕಿತ್ಸೆಗೆ ರಾಜ್ಯದ ವೈದ್ಯರು ಮುಂದಾಗಿದ್ದು ಇಬ್ಬರು ಪ್ಲಾಸ್ಮಾ ದಾನ ಮಾಡುವ ಮೂಲಕ ಇತರರಿಗೂ ಪ್ರೇರಣೆಯಾಗಿದ್ದಾರೆ.