ಹೈದರಾಬಾದ್ : ಜಮೀನು ವಿವಾದ ಬಗೆಹರಿಸುವುದಾಗಿ ಹೇಳಿ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿಯೇ ತಹಸೀಲ್ದಾರ್ ಒಬ್ಬರು ಎಸಿಬಿ ಬಲೆಗೆ ಬಿದ್ದ ಘಟನೆ ನಡೆದಿದೆ.

ಈ ಘಟನೆ ತೆಲಂಗಾಣದಲ್ಲಿ ನಡೆದಿದ್ದು, ಕೀಸರದ ತಹಶೀಲ್ದಾರ್ ಎರ್ವಾ ಬಲರಾಜು ನಾಗರಾಜು ಎಸಿಬಿ ಬಲೆಗೆ ಬಿದ್ದಿರುವ ಅಧಿಕಾರಿ.

ಇವರು ಬರೋಬ್ಬರಿ ರೂ. 1.10 ಕೋಟಿಗಿಂತ ಹೆಚ್ಚು ಹಣವನ್ನು ಲಂಚದ ರೂಪದಲ್ಲಿ ಪಡೆಯುತ್ತಿದ್ದರು ಎನ್ನಲಾಗಿದೆ. ಆದರೆ, ಪಡೆಯುವ ಸಂದರ್ಭದಲ್ಲಿಯೇ ಅಧಿಕಾರಿಗಳು ಬಲೆ ಬೀಸಿ ಹಿಡಿದಿದ್ದಾರೆ. ನೋಟುಗಳ ಎಣಿಕೆ ಒಂದು ರಾತ್ರಿ ಪೂರ್ಣವಾಗಿ ನಡೆದಿದೆ.

ರಾಂಪಲ್ಲಿ ದಯಾರದಲ್ಲಿ 28 ಎಕರೆ ಜಮೀನಿನ ವಿವಾದ ಸೃಷ್ಟಿಯಾಗಿತ್ತು. ಈ ವಿವಾದಿತ ಪ್ರದೇಶವನ್ನು ಶ್ರೀ ಸತ್ಯ ಡೆವಲಪರ್ ಚೌಲಾ ಶ್ರೀನಾಥ್ ಪರ ಮಾಡಿಕೊಡಲು ತಹಸೀಲ್ದಾರ್ ಲಂಚ ಪಡೆಯುತ್ತಿದ್ದರು. ಹಣ ಪಡೆಯುತ್ತಿದ್ದ ಸಂದರ್ಭದಲ್ಲಿಯೇ ದಾಳಿ ಮಾಡಿದ ಅಧಿಕಾರಿಗಳು, ಚೌಲಾ ಶ್ರೀನಾಥ್, ತಹಶೀಲ್ದಾರ್ ನಾಗರಾಜು ಮತ್ತು ಲ್ಯಾಂಡ್ ಬ್ರೋಕರ್ ಕೆ.ಅಂಜಿ ರೆಡ್ಡಿ ಅವರನ್ನು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ದೇಶದ ಜನರಲ್ಲಿ ಹೊಸ ಪ್ರಭೇದ ಸೊಂಕು ಪತ್ತೆ

ಜಗತ್ತಲ್ಲಿ ಕೊರೊನಾ ಸೊಂಕು ಜನರ ಬದುಕು ತೆಗೆದರೂ, ಇನ್ನು ತಣ್ಣಗಾಗುವ ಲಕ್ಷಗಳು ಕಾಣುತ್ತಿಲ್ಲ.

ಸಾಮಾಜಿಕ ಜಾಲತಾಣ ದುರ್ಬಳಕೆ ಮಾಡಿಕೊಂಡರೆ ಹುಷಾರ್!

ನವದೆಹಲಿ : ಸಾಮಾಜಿಕ ಜಾಲತಾಣ ದುರ್ಬಳಕೆಯಾದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ರವಿಶಂಕರ್ ಪ್ರಸಾದ್ ಎಚ್ಚರಿಕೆ ನೀಡಿದ್ದಾರೆ.

5-8 ಮಿಲಿಯನ್ ವರ್ಷಗಳಷ್ಟು ಹಿಂದಿನ ಆನೆ ಪಳೆಯುಳಿಕೆ ಪತ್ತೆ.!

ಲಖ್ನೋ: ಉತ್ತರಪ್ರದೇಶದ ಸಹರನ್ಪುರದ ಬದ್ಶಾಹಿ ಬಾಗ್ ಬಳಿಯಲ್ಲಿ ಸುಮಾರು 5-8 ಮಿಲಿಯನ್ ವರ್ಷಗಳಷ್ಟು ಹಿಂದಿನ ಆನೆಯ…