ಶಿರಹಟ್ಟಿ: ಬೆಳಗಾವಿ ಜಿಲ್ಲೆಯ ಪೀರನವಾಡಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ತೆರವುಗೊಳಿಸದ್ದನ್ನು ಖಂಡಿಸಿ ತಾಲೂಕು ಕುರುಬರ ಸಂಘ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಸೋಮವಾರ ಮನವಿ ಸಲ್ಲಿಸಲಾಯಿತು.

ಈ ವೇಳೆ ತಾಲೂಕ ಕುರುಬರ ಸಂಘದ ಅಧ್ಯಕ್ಷ ಮಂಜುನಾಥ ಘಂಟಿ ಮಾತನಾಡಿ, ಸಂಗೊಳ್ಳಿ ರಾಯಣ್ಣ ಅಪ್ರತಿಮ ದೇಶಭಕ್ತನಾಗಿದ್ದು, ಗೆರಿಲ್ಲಾ ಯದ್ದ ತಂತ್ರವನ್ನು ಅಳವಡಿಸಿಕೊಂಡು ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿದ ಮಹಾನ್ ನಾಯಕ. ಇಂತಹ ಸ್ವಾತಂತ್ರ್ಯ ಹೋರಾಟಗಾರರ ಮೂರ್ತಿಯನ್ನು ತೆರವುಗೊಳಿಸಿದ್ದು ಅತ್ಯಂತ ಖಂಡನೀಯ ಎಂದು ಆಕ್ರೊಶ ವ್ಯಕ್ತಪಡಿಸಿದರು.  

ಈ ಕೂಡಲೇ ಸರಕಾರ ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ ಕೈಗೊಂಡು, ಮೂರ್ತಿ ತೆರವುಗೊಳಿಸಿದ ಪೀರನವಾಡಿ ಗ್ರಾಮದಲ್ಲಿ ಮತ್ತೆ ಅದೇ ಸ್ಥಳದಲ್ಲಿ ರಾಯಣ್ಣನ ಮೂರ್ತಿಯನ್ನು ಪ್ರತಿಷ್ಠಾಪಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ರಾಯಣ್ಣನ ಅಭಿಮಾನಿಗಳಿಂದ ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ:ತೋಳದ ದಾಳಿಗೆ 15 ಕುರಿಗಳು ಬಲಿ

ಈ ಸಂದರ್ಭದಲ್ಲಿ ಸಂತೋಷ ಕುರಿ, ಗೂಳಪ್ಪ ಕರಿಗಾರ, ನೀಲಪ್ಪ ಪಡಿಗೇರಿ, ಸೋಮನಗೌಡ ಮರಿಗೌಡ್ರ, ಪರಶುರಾಮ ಡೊಮಕಬಳ್ಳಿ, ಮಲ್ಲಿಕಾರ್ಜುನ ಸಾವಿರಕುರಿ, ಸುರೇಶ ಅಕ್ಕಿ, ಮಂಜುನಾಥ ಸೊಂಟನೂರ, ದೇವಪ್ಪ ಬಟ್ಟೂರ, ಮುತ್ತು ಕುರಿ,  ಪ್ರವೀಣ ಹಾಲಪ್ಪನವರ, ಮಂಜುನಾಥ ರಡ್ಡೇರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಸುರಕ್ಷೆ ಮತ್ತು ಪರಿಹಾರ ಕಾರ್ಯಗಳಿಗೆ ಸರ್ಕಾರದಿಂದ ಎಲ್ಲ ಅಗತ್ಯ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು

ಉತ್ತರಪ್ರಭ ಸುದ್ದಿ: ಬೆಂಗಳೂರು: ಆ. ೨-ಇಡೀ ರಾಜ್ಯದಲ್ಲಿ ಮತ್ತೆ ಮಳೆಯಾಗುತ್ತಿದೆ. ಕರಾವಳಿಯಲ್ಲಿ ಸಾವು-ನೋವುಗಳು ಆಗಿವೆ. ಈ…

ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಗೆ ಕೊರೊನಾ ಪಾಸಿಟಿವ್..!

ಗಂಗಾವತಿ : ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿಯಲ್ಲಿ ಸೋಂಕು ಇರುವುದು ಖಚಿತವಾಗಿದೆ. ಈ ಘಟನೆ ಕಾರಟಗಿಯಲ್ಲಿ…

ಸೀಲ್ ಡೌನ್ ಹೆಸರಿನಲ್ಲಿ ನಡೆಯಿತೇ ಕೋಟಿ ಕೋಟಿ ಅವ್ಯವಹಾರ?

ಕೊರೊನಾ ಸೋಂಕಿತರ ಮನೆಯ ಪ್ರದೇಶವನ್ನು ಸೀಲ್ ಡೌನ್ ಮಾಡಲಾಗುತ್ತಿದೆ. ಈ ಹಿಂದೆ ಇದರ ಪ್ರಮಾಣ ತುಸು ಹೆಚ್ಚಾಗಿತ್ತು. ಆದರೆ, ಈ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ.