ಶಿರಹಟ್ಟಿ: ಬೆಳಗಾವಿ ಜಿಲ್ಲೆಯ ಪೀರನವಾಡಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ತೆರವುಗೊಳಿಸದ್ದನ್ನು ಖಂಡಿಸಿ ತಾಲೂಕು ಕುರುಬರ ಸಂಘ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಸೋಮವಾರ ಮನವಿ ಸಲ್ಲಿಸಲಾಯಿತು.

ಈ ವೇಳೆ ತಾಲೂಕ ಕುರುಬರ ಸಂಘದ ಅಧ್ಯಕ್ಷ ಮಂಜುನಾಥ ಘಂಟಿ ಮಾತನಾಡಿ, ಸಂಗೊಳ್ಳಿ ರಾಯಣ್ಣ ಅಪ್ರತಿಮ ದೇಶಭಕ್ತನಾಗಿದ್ದು, ಗೆರಿಲ್ಲಾ ಯದ್ದ ತಂತ್ರವನ್ನು ಅಳವಡಿಸಿಕೊಂಡು ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿದ ಮಹಾನ್ ನಾಯಕ. ಇಂತಹ ಸ್ವಾತಂತ್ರ್ಯ ಹೋರಾಟಗಾರರ ಮೂರ್ತಿಯನ್ನು ತೆರವುಗೊಳಿಸಿದ್ದು ಅತ್ಯಂತ ಖಂಡನೀಯ ಎಂದು ಆಕ್ರೊಶ ವ್ಯಕ್ತಪಡಿಸಿದರು.  

ಈ ಕೂಡಲೇ ಸರಕಾರ ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ ಕೈಗೊಂಡು, ಮೂರ್ತಿ ತೆರವುಗೊಳಿಸಿದ ಪೀರನವಾಡಿ ಗ್ರಾಮದಲ್ಲಿ ಮತ್ತೆ ಅದೇ ಸ್ಥಳದಲ್ಲಿ ರಾಯಣ್ಣನ ಮೂರ್ತಿಯನ್ನು ಪ್ರತಿಷ್ಠಾಪಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ರಾಯಣ್ಣನ ಅಭಿಮಾನಿಗಳಿಂದ ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ:ತೋಳದ ದಾಳಿಗೆ 15 ಕುರಿಗಳು ಬಲಿ

ಈ ಸಂದರ್ಭದಲ್ಲಿ ಸಂತೋಷ ಕುರಿ, ಗೂಳಪ್ಪ ಕರಿಗಾರ, ನೀಲಪ್ಪ ಪಡಿಗೇರಿ, ಸೋಮನಗೌಡ ಮರಿಗೌಡ್ರ, ಪರಶುರಾಮ ಡೊಮಕಬಳ್ಳಿ, ಮಲ್ಲಿಕಾರ್ಜುನ ಸಾವಿರಕುರಿ, ಸುರೇಶ ಅಕ್ಕಿ, ಮಂಜುನಾಥ ಸೊಂಟನೂರ, ದೇವಪ್ಪ ಬಟ್ಟೂರ, ಮುತ್ತು ಕುರಿ,  ಪ್ರವೀಣ ಹಾಲಪ್ಪನವರ, ಮಂಜುನಾಥ ರಡ್ಡೇರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಲಾರಿ ಡಿಕ್ಕಿ ಸ್ಥಳದಲ್ಲಿಯೇ ಯುವತಿ ಸಾವು

ದ್ವಿಚಕ್ರ ವಾಹನದಿಂದ ಗದುಗಿನ ರೈಲ್ವೆ ನಿಲ್ದಾಣಕ್ಕೆ ಬಿಟ್ಟು ಮರಳಿ ತನ್ನ ಊರಿಗೆ  ಬರುವ ಮಾರ್ಗ ಮದ್ಯದಲ್ಲಿ ಅಡವಿಸೋಮಾಪುರದ ಮಲ್ಲಿಕಾರ್ಜುನ ಮಠದ ಹತ್ತಿರ ರಬಸವಾಗಿ ಬಂದ ವಾಹನ ಡಿಕ್ಕಿ  ಹೊಡೆದು ಯುವತಿ  ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾತ್ರಿ 10 ಘಂಟೆಗೆ ನಡೆದಿದೆ.

ರಾಜ್ಯದಲ್ಲಿಂದು ತಿವ್ರಗೊಂಡ ಸೋಂಕು, ಸಾವು!: 2738 ಪಾಸಿಟಿವ್, 73 ಸಾವು

ದಿನೇ ದಿನೇ ರಾಜ್ಯದಲ್ಲಿ ಸೋಂಕಿನ ತೀವ್ರತೆ ಹೆಚ್ಚುತ್ತಿದ್ದು, ಇನ್ನೊಂದು ಕಡೆ ಸತತ ನಾಲ್ಕು ದಿನಗಳಿಂದ ಪ್ರತಿ ದಿನ 70ಕ್ಕೂ ಹೆಚ್ಚು ಸಾವುಗಳು ಸಂಭವಿಸುತ್ತಿವೆ. ಈ ಮೂಲಕ ಕೇಸ್ ಲೋಡ್ ನಲ್ಲಿ ಕರ್ನಾಟಕ ಐದನೇ ಸ್ಥಾನದಲ್ಲಿ ಮುಂದುವರೆದಿದೆ.

ನೀರಿನ ಬವಣೆ ನೀಗಿಸಲು ಮುಂದಾದ ರೋಣ ಪುರಸಭೆ

ಜಲಶಕ್ತಿ ಅಭಿಯಾನದಡಿಯಲ್ಲಿ ನೀರಿನ ಟ್ಯಾಂಕುಗಳನ್ನು ಸ್ವಚ್ಛಗೊಳಿಸಿದ ಪುರಸಭೆ ಸಿಬ್ಬಂಧಿಗಳ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಯಿತು. ನಗರಕ್ಕೆ ಪ್ರತಿನಿತ್ಯ 20 ಲಕ್ಷ ಲೀಟರ್ ನೀರಿನ ಅವಶ್ಯಕತೆ ಇದೆ. ಬೇಸಿಗೆ ನಿರ್ವಹಣೆ ಸ್ವಲ್ಪ ಕಷ್ಟ. ಆದರೂ ಪುರಸಭೆ ಇದಕ್ಕೆ ಸೂಕ್ತ ಕ್ರಮಗಳನ್ನು ತಗೆದುಕೊಂಡು ಸಾರ್ವಜನಿಕರಿಗೆ ಯಾವುದೇ ರೀತಿಯ ಕುಡಿಯುವ ನೀರಿನ ತೊಂದರೆಯಾಗಬಾರದು ಎಂದು ಕಾಳಜಿವಹಿಸಿದ್ದಾರೆ ಎಂಬುವದು ಎಂದು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಿವೃತ್ತ ಪಿಡಿಓ ಟಿ. ಮಹಮದಲಿ ನಿಧನ

ಗ್ರಾಮ ಪಂಚಾಯಿತಿಯಲ್ಲಿ ಕರವಸೂಲಿಗಾರರಾಗಿ ಸೇರಿಕೊಂಡು ಹಂತಹಂತವಾಗಿ ಮುಂಬಡ್ತಿ ಪಡೆದು ಕಾರ್ಯದರ್ಶಿ ಹುದ್ದೆಗೇರಿ ಪಿಡಿಒ ಆಗಿ ಬಡ್ತಿ…