ಶಿರಹಟ್ಟಿ: ಬೆಳಗಾವಿ ಜಿಲ್ಲೆಯ ಪೀರನವಾಡಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ತೆರವುಗೊಳಿಸದ್ದನ್ನು ಖಂಡಿಸಿ ತಾಲೂಕು ಕುರುಬರ ಸಂಘ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಸೋಮವಾರ ಮನವಿ ಸಲ್ಲಿಸಲಾಯಿತು.

ಈ ವೇಳೆ ತಾಲೂಕ ಕುರುಬರ ಸಂಘದ ಅಧ್ಯಕ್ಷ ಮಂಜುನಾಥ ಘಂಟಿ ಮಾತನಾಡಿ, ಸಂಗೊಳ್ಳಿ ರಾಯಣ್ಣ ಅಪ್ರತಿಮ ದೇಶಭಕ್ತನಾಗಿದ್ದು, ಗೆರಿಲ್ಲಾ ಯದ್ದ ತಂತ್ರವನ್ನು ಅಳವಡಿಸಿಕೊಂಡು ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿದ ಮಹಾನ್ ನಾಯಕ. ಇಂತಹ ಸ್ವಾತಂತ್ರ್ಯ ಹೋರಾಟಗಾರರ ಮೂರ್ತಿಯನ್ನು ತೆರವುಗೊಳಿಸಿದ್ದು ಅತ್ಯಂತ ಖಂಡನೀಯ ಎಂದು ಆಕ್ರೊಶ ವ್ಯಕ್ತಪಡಿಸಿದರು.  

ಈ ಕೂಡಲೇ ಸರಕಾರ ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ ಕೈಗೊಂಡು, ಮೂರ್ತಿ ತೆರವುಗೊಳಿಸಿದ ಪೀರನವಾಡಿ ಗ್ರಾಮದಲ್ಲಿ ಮತ್ತೆ ಅದೇ ಸ್ಥಳದಲ್ಲಿ ರಾಯಣ್ಣನ ಮೂರ್ತಿಯನ್ನು ಪ್ರತಿಷ್ಠಾಪಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ರಾಯಣ್ಣನ ಅಭಿಮಾನಿಗಳಿಂದ ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ:ತೋಳದ ದಾಳಿಗೆ 15 ಕುರಿಗಳು ಬಲಿ

ಈ ಸಂದರ್ಭದಲ್ಲಿ ಸಂತೋಷ ಕುರಿ, ಗೂಳಪ್ಪ ಕರಿಗಾರ, ನೀಲಪ್ಪ ಪಡಿಗೇರಿ, ಸೋಮನಗೌಡ ಮರಿಗೌಡ್ರ, ಪರಶುರಾಮ ಡೊಮಕಬಳ್ಳಿ, ಮಲ್ಲಿಕಾರ್ಜುನ ಸಾವಿರಕುರಿ, ಸುರೇಶ ಅಕ್ಕಿ, ಮಂಜುನಾಥ ಸೊಂಟನೂರ, ದೇವಪ್ಪ ಬಟ್ಟೂರ, ಮುತ್ತು ಕುರಿ,  ಪ್ರವೀಣ ಹಾಲಪ್ಪನವರ, ಮಂಜುನಾಥ ರಡ್ಡೇರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ಡಿಎಪಿ ರಸಗೊಬ್ಬರ ದರ ಇಳಿಕೆ

ಧಾರವಾಡ: ಡಿಎಪಿ ರಸಗೊಬ್ಬರ ದರ ಇಳಿಕೆ ಮಾಡಿ ಸರ್ಕಾರ ಆದೇಶಿಸಿದೆ. ಸಂಗ್ರಹವಿರುವ ಡಿಎಪಿ ರಸಗೊಬ್ಬರ ಪ್ರತಿ ಚೀಲಕ್ಜೆ 1200 ರೂ. ನಿಗದಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜಿಲ್ಲೆಯಲ್ಲಿ ಕಾಪು ದಾಸ್ತಾನು ಅಡಿ ಕೆಎಸ್ಸಿಎಮ್ಎಫ್ ದಲ್ಲಿ ಸಂಗ್ರಹವಿದ್ದ 1960 ಟನ್ ಡಿಎಪಿ ಗೊಬ್ಬರ ಪ್ರತಿ ಚೀಲಕ್ಕೆ 1450 ರೂ.ಗಳ ದರ ನಿಗದಿಪಡಿಸಲಾಗಿತ್ತು.

ಗದಗ ಜಿಲ್ಲೆಯಲ್ಲಿಂದು 5 ಕೊರೊನಾ ಪಾಸಿಟಿವ್..!

ಗದಗ: ಜಿಲ್ಲೆಯಲ್ಲಿಂದು 5 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 58 ಕ್ಕೆ ಏರಿಕೆಯಾದಂತಾಗಿದೆ.ಪಿ-7830(37), ಪಿ-7831(23),ಪಿ-7833(45),…

ಡ್ರೈವರ್ ಕಂಡಕ್ಟರ್ ಗಳ ನಿತ್ಯ ಶೋಷಣೆಗೆ ಮುಕ್ತಿ ಎಂದು?

ಕೆಎಸ್ಆರ್ಟಿಸಿ ಚಾಲಕ ಹಾಗೂ ನಿರ್ವಾಹಕರು ಕೊರೋನಾ ವಾರಿಯರ್ಸ್ ಎಂದು ಬಾಯಿ ಮಾತಿಂದ ಹೇಳಿದರೆ ಸಾಲದು. ಪಾಪ..!, ಅವರ ಸಂಕಷ್ಟಗಳಿಗೆ ಸರ್ಕಾರ ಸ್ಪಂದಿಸುವ ಅವಶ್ಯಕತೆ ಇದೆ.

ಕೊರೋನಾ ಕಾವ್ಯ-8

ನಂರುಶಿ ಅವರು ಗಜಲ್ ಸೇರಿದಂತೆ ಸಾಹಿತ್ಯದ ವಿವಿಧ ಪ್ರಕರಾದ ಕೃತಿಗಳು ಈಗಾಗಲೇ ಹೊರತಂದಿದ್ದು, ತಮ್ಮ ಗಜಲ್ ಮೂಲಕ ಕೊರೋನಾ ವೈರಸ್ ನಿಂದಲೇ ಮಾತನಾಡಿಸಿದ್ದಾರೆ.