ಗದಗ: ರಾಜ್ಯದ 270 ಸರಕಾರಿ ಹಾಗೂ 196 ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಅಗಷ್ಟ-2020 ನೇ ಸಾಲಿಗೆ ಮೆರಿಟ್-ಕಂ-ರಿಸರ್ವೇಷನ್ ಆಧಾರಿತ ಪ್ರವೇಶಗಳನ್ನು ಆನ್‍ಲೈನ್ ಮುಖಾಂತರ ಮಾಡಲಾಗುತ್ತಿದೆ. ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅಭ್ಯರ್ಥಿಗಳು ಸರಕಾರಿ/ಅನುದಾನಿತ ಐ.ಟಿ.ಐಗಳಲ್ಲಿ ಸಿ.ಟಿ.ಎಸ್ ಯೋಜನೆ ಅಡಿಯಲ್ಲಿ ತಾಂತ್ರಿಕ/ ತಾಂತ್ರಿಕೇತರ ವೃತ್ತಿಗಳಿಗೆ ರಾಜ್ಯದ ಯಾವುದೇ ಭಾಗದಿಂದ ಇಲಾಖೆಯ ವೆಬ್‍ಸೈಟ್ ವಿಳಾಸ- www.emptrg.kar.nic.in ಮೂಲಕ ಅಗಸ್ಟ 31 ರವರೆಗೆ ಆನ್‍ಲೈನ್ ಅರ್ಜಿ ಸಲ್ಲಿಸಬಹುದಾಗಿದೆ.

ಗದಗ ಜಿಲ್ಲೆಯ 9 ಸರಕಾರಿ ಐ.ಟಿ.ಐಗಳಾದ ಗದಗ, ಮುಂಡರಗಿ, ನರಗುಂದ, ಶಿರಹಟ್ಟಿ, ಸೂಡಿ, ಹೊಂಬಳ, ಸೊರಟೂರ, ಕುರ್ತಕೋಟಿ, ಯಾವಗಲ್ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ  ಹಾಗೂ 7 ಅನುದಾನಿತ ಐ.ಟಿ.ಐಗಳಾದ ಗದಗನ ಸರ್ ಸಿದ್ಧಪ್ಪ ಕಂಬಳಿ ಖಾಸಗಿ ಐ.ಟಿಐ, ಡಂಬಳದ ಜಗದ್ಗುರು ತೋಂಟದಾರ್ಯ ಖಾಸಗಿ ಐಟಿಐ,  ಲಕ್ಷ್ಮೇಶ್ವರದ ಬಾಪೂಜಿ ಖಾಸಗಿ ಐ.ಟಿ.ಐ, ಹೊಳೆಆಲೂರನ ಸಂಜಯ ಗ್ರಾಮೀಣ ವಿದ್ಯಾ ಸಂಸ್ಥೆಯ ಐ.ಟಿ.ಐ, ಗಜೇಂದ್ರಗಡದ ಶ್ರೀ ಜಗದ್ಗುರು ಅನ್ನದಾನೇಶ್ವರ  ಖಾಸಗಿ ಐ.ಟಿ.ಐ,  ನರೇಗಲ್‍ದ ಕೊಟ್ಟೂರು ಸ್ವಾಮಿ ಖಾಸಗಿ ಐ.ಟಿ.ಐ, ಶಿರೋಳದ ಮಾದಾರ ಚನ್ನಯ್ಯ ಖಾಸಗಿ ಐ.ಟಿ.ಐ  ಕಾಲೇಜುಗಳಲ್ಲಿ ಆನ್‍ಲೈನ್ ಮುಖಾಂತರ ಪ್ರವೇಶ ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರ ಕಾರ್ಯಾಲಯ, ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಗದಗ ಬೆಟಗೇರಿ 582101 ದೂರವಾಣಿ ಸಂಖ್ಯೆ 08372-245018 ಅಥವಾ ಇಲಾಖೆ ವೆಬ್‍ಸೈಟ್ www.emptrg.kar.nic.in ಸಂಪರ್ಕಿಸಬಹುದಾಗಿದೆ.

Leave a Reply

Your email address will not be published. Required fields are marked *

You May Also Like

ಪಕ್ಷದ ಏಳಿಗೆಗಾಗಿ ತಮ್ಮ ಜೀವನವನ್ನೇ ಸವೆದಿರುವ ಬಿ.ಎಸ್. ಯಡಿಯೂರಪ್ಪ

ಆಲಮಟ್ಟಿ:ಬಿ.ಎಸ್.ಯಡಿಯೂರಪ್ಪ, ರಾಜಕಾರಣದಿಂದ ನಿವೃತ್ತಿಯಾಗಲ್ಲ, ಅವರು ಚುನಾವಣಾ ರಾಜಕೀಯದಿಂದ ಮಾತ್ರ ನಿವೃತ್ತರಾಗುತ್ತಾರೆ, ಪಕ್ಷಕ್ಕೆ ಕೋಚ್ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಾರೆ…

ಜಿಲ್ಲಾ ಜೆಡಿಎಸ್ ನಿಂದ ಬಂಡೆಪ್ಪ ಕಾಶಂಪೂರ 57ನೇ ಹುಟ್ಟುಹಬ್ಬ ಆಚರಣೆ

ಬಂಡೆಪ್ಪ ಕಾಶಂಪೂರ ಅವರು ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರದಲ್ಲಿ ಕೃಷಿ ಸಚಿವರಾಗಿ ಅನೇಕ ರೈತಪರ, ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದರು. ಕುಮಾರಸ್ವಾಮಿ ಮಂತ್ರಿಮಂಡಲದಲ್ಲಿ ಉತ್ಸಾಹಿ ಯುವ ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದು ಶ್ಲಾಘನೀಯ

ಉತ್ತರ ಕರ್ನಾಟಕ ಮಹಾಸಭಾದಿಂದ ಜಾಗೃತಿ ಅಭಿಯಾನ

ಹೋಬಳಿ ವ್ಯಾಪ್ತಿಯ ಶಿಂಗಟರಾಯನಕೇರಿ ತಾಂಡೆ, ಡೋಣಿ ತಾಂಡೆ ಗ್ರಾಮಗಳಲ್ಲಿ ಉತ್ತರ ಕರ್ನಾಟಕ ಮಹಾಸಭಾದಿಂದ ಬಗರ್ ಹುಕುಂ ಸಾಗುವಳಿದಾರರ ಹಕ್ಕಿಗಾಗಿ ಜಾಗೃತಿ ಅಭಿಯಾನ ನಡೆಸಲಾಯಿತು.

ಕೈಗೆ ಸಿಕ್ಕ ಅಧಿಕಾರಿಗೆ ಟ್ರ‍್ಯಾಕ್ಟರ್ ನಲ್ಲಿ ರಸ್ತೆ ದರ್ಶನ: ಕೆಲವು ತಿಂಗಳಕ್ ಕಿತ್ತು ಹೋಗೈತ್ಯಂತ ದೊಡ್ಡೂರು ರಸ್ತೆ!

ಹೇಳಿ, ಹೇಳಿ ಸಾಕಾಗಿ ಹೋಯ್ತು. ಕಾಮಗಾರಿ ಮುಗಿದ್ ಒಂದ್ ತಿಂಗಳದಾಗ ಮಾಡಿದ್ ರೋಡ್ ಹಳ್ಳಾ ಹಿಡಿದೈತಿ. ಬರ್ರಿ.. ನೀವಾರಾ ನೋಡ್ ಬರ್ರಿ.., ಕೆಲ್ಸಾ ಮಾಡಿದ್ ಗುತ್ತಿಗೆದಾರರಾದ್ರು ಯಾರು? ಹಿಂಗೆಲ್ಲ ಹೇಳಿ ಅಧಿಯಾರಿಯೊಬ್ಬರನ್ನು ತರಾಟೆಗೆ ತೆಗೆದುಕೊಂಡ ಘಟನೆ ಲಕ್ಷ್ಮೇಶ್ವರದಲ್ಲಿ ನಡೆಯಿತು.