ಕ್ರೀಕೆಟ್ ನಲ್ಲಿ ಭಾರತದ ಸಾಧನೆಯನ್ನು ಹೆಚ್ಚಿಸಿದ ಕೀರ್ತಿ ಎಂ.ಎಸ್.ಧೋನಿ ಅವರಿಗೆ ಸಲ್ಲುತ್ತದೆ. ಇತ್ತಿಚೆಗಷ್ಟೆ ವೃತ್ತಿ ಜೀವನಕ್ಕೆ ನಿವೃತ್ತಿ ನಿರ್ಧಾರ ಪ್ರಕಟಿಸಿದ್ದ ಧೋನಿ ನಡೆಯಿಂದ ಅಭಿಮಾನಿಗಳಿಗೆ ಬೇಸರ ಮೂಡಿತ್ತು. ಧೋನಿ ಕ್ರೀಡಾ ಸಾಧನೆ ಬಗ್ಗೆ ಬಿಸಿಸಿಐ ಮೆಚ್ಚುಗೆ ವ್ಯಕ್ತ ಪಡಿಸಿದೆ.

ನವದೆಹಲಿ: ಭಾರತ ತಂಡದ ಮಾಜಿ ನಾಯಕ ಎಂ.ಎಸ್. ಧೋನಿ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಆಗಷ್ಟ್‌ 15ರಂದು ನಿವೃತ್ತಿ ನಿರ್ಧಾರ ಪ್ರಕಟಿಸಿದ್ದಾರೆ.

ಐಪಿಎಲ್ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿ ಧೋನಿ ಕಮ್ ಬ್ಯಾಕ್ ಮಾಡಬಹುದು ಎಂದು ಭಾವಿಸಿದ್ದ ಅಭಿಮಾನಿಗಳಿಗೆ ತುಂಬಲಾರದ ನಷ್ಟವಾಗಿದೆ. ಅವರ ಆತ್ಮೀಯ ಸ್ನೇಹಿತ ಸುರೇಶ್ ರೈನಾ ಕೂಡ ಅಂತಾರಾಷ್ಟ್ರೀಯ ನಿವೃತ್ತಿ ಘೋಷಿಸಿದ್ದಾರೆ. ದೇಶಕ್ಕೆ ಎರಡು ವಿಶ್ವಕಪ್‌, ಒಂದು ಚಾಂಪಿಯನ್ಸ್ ಟ್ರೋಫಿ ಗೆಲ್ಲಿಸಿಕೊಟ್ಟಿರುವ ‘ಕ್ಯಾಪ್ಟನ್ ಕೂಲ್‌’ಗೆ ಕ್ರಿಕೆಟ್ ನ ದಿಗ್ಗಜರು, ಅಭಿಮಾನಿಗಳು ವಿಶೇಷವಾಗಿ ಅಭಿನಂದನೆ ಸಲ್ಲಿಸಿದ್ದಾರೆ.

ಸದ್ಯ ಬಿಸಿಸಿಐ ಈ ನಾಯಕನಿಗಾಗಿ ವಿಶೇಷ ವಿಡಿಯೋ ಮಾಡಿದೆ. ಅಲ್ಲದೇ, ಇದನ್ನು ಅಧಿಕೃತವಾಗಿ ಟ್ವೀಟರ್ ನಲ್ಲಿ ಶೇರ್ ಮಾಡಿದೆ. ವೃತ್ತಿ ಜೀವನಕ್ಕೆ ಕೊನೆ ಹಾಡಿದ ಎಂಎಸ್ ಧೋನಿಗೆ, ಭಾರತ ತಂಡದ ಸದಸ್ಯರು ಅದ್ಭುತ ಕ್ಷಣಗಳನ್ನು ನೆನಪಿಸಿಕೊಂಡು ತನ್ನ ನಾಯಕನಿಗೆ ತುಂಬು ಹೃದಯದ ಗೌರವ ಸಲ್ಲಿಸಿದ್ದಾರೆ ಎಂದು ಬರೆದುಕೊಂಡಿದೆ.

Leave a Reply

Your email address will not be published. Required fields are marked *

You May Also Like

ಫೆ. 12 ರಂದು ರಾಜ್ಯ ಮಟ್ಟದ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾವಳಿ

ಮುಳಗುಂದ ಸಮೀಪದ ಹೊಸೂರ ಗ್ರಾಮದಲ್ಲಿ ಶ್ರೀ ಮಾರುತೇಶ್ವರ ಯಂಗ್ ಸ್ಟಾರ್ ವತಿಯಿಂದ ಪ್ರಥಮ ಬಾರಿಗೆ ರಾಜ್ಯ ಮಟ್ಟದ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾವಳಿಗಳನ್ನ ಇದೇ ಫೆ. 12 ರಂದು ಮಹಾಂತೇಶಗೌಡ ಗೌಡರ ಅವರ ಹೊಲದಲ್ಲಿ ಸಿದ್ದಗೊಳಿಸಿದ ಮೈದಾನದಲ್ಲಿ ಏರ್ಪಡಿಸಲಾಗಿದೆ. ಎಂದು ಸಮಿತಿ ಸದಸ್ಯ ಬಸವರಾಜ ಬಂಡಿವಡ್ಡರ ತಿಳಿಸಿದರು.

ಐಪಿಎಲ್ ನಲ್ಲಿ ಕೊಹ್ಲಿ, ಎಬಿಡಿಯನ್ನು ಕೈ ಬಿಡಬೇಕು ಎಂದಿರುವ ರಾಹುಲ್!

ಅಬುಧಾಬಿ : ಕೆ.ಎಲ್. ರಾಹುಲ್ ಅವರು ಮುಂದಿನ ಐಪಿಎಲ್ ನಲ್ಲಿ ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ ಹಾಗೂ ಎಬಿಡಿ ವಿಲಿಯರ್ಸ್ ಅವರನ್ನು ಕೈ ಬಿಡಬೇಕು ಎಂದು ಹೇಳಿದ್ದಾರೆ.

ಸಾಲು ಮರದ ತಿಮ್ಮಕ್ಕನನ್ನು ನೆನೆದ ಬಜ್ಜಿ

ಭಾರತ ಕ್ರಿಕೆಟ್ ತಂಡದ ಆಟಗಾರ ಹರ್ಭಜನ್ ಸಿಂಗ್, ರಾಜ್ಯದ ಹೆಮ್ಮೆಯ ತಾಯಿಯನ್ನು ನೆನೆದು ಟ್ವೀಟ್ ಮಾಡಿದ್ದಾರೆ.ಸಾಲುಮರದ ತಿಮ್ಮಕ್ಕ ಅವರನ್ನು ಭಜ್ಜಿ ನೆನೆದು ಟ್ವೀಟ್ ಮಾಡಿದ್ದಾರೆ.

ಅರಬರ ನೆಲದಲ್ಲಿ ಇಂಡಿಯನ್ ಐಪಿಎಲ್! ಜೂಜುಕೋರ ಬಿಸಿಸಿಐನ ಕೋವಿಡ್ ಗೇಮ್

ಇಂಡಿಯನ್ಪ್ರಿಮೀಯರ್ ಲೀಗ್ ಎಂಬುದು ಕೇವಲ ಆಟವಲ್ಲ, ಅದೊಂದುಬ್ಯುಸಿನೆಸ್ ಮತ್ತು ಕಪ್ಪು ಹಣ ಬಿಳಿಪಾಗಿಸುವ ದಂಧೆ.ಹೀಗಾಗಿ ಈ ಕೋರೊನಾ ಬಿಕ್ಕಟ್ಟಿನಲ್ಲೂ ಐಪಿಎಲ್ ನಡೆಸಲುಶತಾಯಗತಾಯ ಯತ್ನಗಳು ನಡೆದ