ಕ್ರೀಕೆಟ್ ನಲ್ಲಿ ಭಾರತದ ಸಾಧನೆಯನ್ನು ಹೆಚ್ಚಿಸಿದ ಕೀರ್ತಿ ಎಂ.ಎಸ್.ಧೋನಿ ಅವರಿಗೆ ಸಲ್ಲುತ್ತದೆ. ಇತ್ತಿಚೆಗಷ್ಟೆ ವೃತ್ತಿ ಜೀವನಕ್ಕೆ ನಿವೃತ್ತಿ ನಿರ್ಧಾರ ಪ್ರಕಟಿಸಿದ್ದ ಧೋನಿ ನಡೆಯಿಂದ ಅಭಿಮಾನಿಗಳಿಗೆ ಬೇಸರ ಮೂಡಿತ್ತು. ಧೋನಿ ಕ್ರೀಡಾ ಸಾಧನೆ ಬಗ್ಗೆ ಬಿಸಿಸಿಐ ಮೆಚ್ಚುಗೆ ವ್ಯಕ್ತ ಪಡಿಸಿದೆ.

ನವದೆಹಲಿ: ಭಾರತ ತಂಡದ ಮಾಜಿ ನಾಯಕ ಎಂ.ಎಸ್. ಧೋನಿ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಆಗಷ್ಟ್‌ 15ರಂದು ನಿವೃತ್ತಿ ನಿರ್ಧಾರ ಪ್ರಕಟಿಸಿದ್ದಾರೆ.

ಐಪಿಎಲ್ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿ ಧೋನಿ ಕಮ್ ಬ್ಯಾಕ್ ಮಾಡಬಹುದು ಎಂದು ಭಾವಿಸಿದ್ದ ಅಭಿಮಾನಿಗಳಿಗೆ ತುಂಬಲಾರದ ನಷ್ಟವಾಗಿದೆ. ಅವರ ಆತ್ಮೀಯ ಸ್ನೇಹಿತ ಸುರೇಶ್ ರೈನಾ ಕೂಡ ಅಂತಾರಾಷ್ಟ್ರೀಯ ನಿವೃತ್ತಿ ಘೋಷಿಸಿದ್ದಾರೆ. ದೇಶಕ್ಕೆ ಎರಡು ವಿಶ್ವಕಪ್‌, ಒಂದು ಚಾಂಪಿಯನ್ಸ್ ಟ್ರೋಫಿ ಗೆಲ್ಲಿಸಿಕೊಟ್ಟಿರುವ ‘ಕ್ಯಾಪ್ಟನ್ ಕೂಲ್‌’ಗೆ ಕ್ರಿಕೆಟ್ ನ ದಿಗ್ಗಜರು, ಅಭಿಮಾನಿಗಳು ವಿಶೇಷವಾಗಿ ಅಭಿನಂದನೆ ಸಲ್ಲಿಸಿದ್ದಾರೆ.

ಸದ್ಯ ಬಿಸಿಸಿಐ ಈ ನಾಯಕನಿಗಾಗಿ ವಿಶೇಷ ವಿಡಿಯೋ ಮಾಡಿದೆ. ಅಲ್ಲದೇ, ಇದನ್ನು ಅಧಿಕೃತವಾಗಿ ಟ್ವೀಟರ್ ನಲ್ಲಿ ಶೇರ್ ಮಾಡಿದೆ. ವೃತ್ತಿ ಜೀವನಕ್ಕೆ ಕೊನೆ ಹಾಡಿದ ಎಂಎಸ್ ಧೋನಿಗೆ, ಭಾರತ ತಂಡದ ಸದಸ್ಯರು ಅದ್ಭುತ ಕ್ಷಣಗಳನ್ನು ನೆನಪಿಸಿಕೊಂಡು ತನ್ನ ನಾಯಕನಿಗೆ ತುಂಬು ಹೃದಯದ ಗೌರವ ಸಲ್ಲಿಸಿದ್ದಾರೆ ಎಂದು ಬರೆದುಕೊಂಡಿದೆ.

Leave a Reply

Your email address will not be published. Required fields are marked *

You May Also Like

ಪಂಜಾಬ್ ತಂಡ ಮಣಿಸಿ ಐತಿಹಾಸಿಕ ಗೆಲುವು ಸಾಧಿಸಿದ ರಾಜಸ್ಥಾನ್!

ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ಹಾಗೂ ಕಿಂಗ್ಸ್ ಇಲವೆನ್ ಪಂಜಾಬ್ ನಡುವಿನ ಪಂದ್ಯದಲ್ಲಿ ಐತಿಹಾಸಿಕ ಗೆಲುವನ್ನು ರಾಜಸ್ಥಾನ್ ರಾಯಲ್ಸ್ ದಾಖಲಿಸಿದೆ.

ಇಂದು ಬಿಸಿಸಿಐ ಸಭೆ: ಐಪಿಎಲ್ ಮತ್ತೆ ಮೈದಾನಕ್ಕೆ?

ಕೋರೊನಾ ಬಿಕ್ಕಟ್ಟಿನ ಕಾರಣಕ್ಕೆ ಕ್ರಿಕೆಟ್ ಮಲಗಿದೆ. ತಿಂಗಳುಗಳ ನಂತರ ಇಂದು ಬಿಸಿಸಿಐ ಮಹತ್ವದ ಸಭೆ ನಡೆಸುತ್ತಿದ್ದು,…

ಆಸ್ಪತ್ರೆಗೆ ದಾಖಲಾದ ಭಾರತೀಯ ಕ್ರಿಕೆಟ್ ನ ದಂತಕಥೆ ಕಪಿಲ್ ದೇವ್!

ನವದೆಹಲಿ : ಭಾರತೀಯ ಕ್ರಿಕೆಟ್ ನ ದಂತಕಥೆ ಕಪಿಲ್ ದೇವ್(61) ಅವರಿಗೆ ಹೃದಯಘಾತವಾಗಿದ್ದು, ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.

ಕಿಂಗ್ ಕೊಹ್ಲಿ ಆಟಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಅಭಿಮಾನಿಗಳು!

ಶಾರ್ಜಾ : ಇಂದಿನ ಪಂದ್ಯಕ್ಕೂ ಮೊದಲು ಮೈದಾನದಲ್ಲಿ ಕೊಹ್ಲಿ ಡ್ಯಾನ್ಸ್ ಮಾಡಿದ್ದು, ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.