ಮುಂಬಯಿ : ಮಹೇಂದ್ರಸಿಂಗ್ ಧೋನಿ ಅವರು ಸದ್ಯ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ಹೀಗಾಗಿ ಭಾರತೀಯ ತಂಡದ ವಿಕೇಟ್ ಕೀಪಿಂಗ್ ಬಗ್ಗೆ ಚರ್ಚೆಗಳು ಶುರುವಾಗಿದೆ. ಇದಕ್ಕೆ ಹತ್ತಾರು ಹೆಸರುಗಳು ಮುನ್ನೆಲೆಗೆ ಬಂದು ಚರ್ಚೆಗೆ ಕಾರಣವಾಗುತ್ತಿವೆ.

ಸದ್ಯ ಈ ಹೆಸರಿನಲ್ಲಿ ಮುಂಚೂಣಿಯಲ್ಲಿರುವುದು ಕನ್ನಡಿಗ ಕೆ.ಎಲ್. ರಾಹುಲ್ ಅವರ ಹೆಸರು. ಈ ಹಿಂದೆ ಧೋನಿ ನಂತರದ ಸ್ಥಾನ ಯಾರಿಗೆ ಎಂಬ ಪ್ರಶ್ನೆಗಳು ಕೇಳಿ ಬಂದಾಗ ರಿಷಭ್ ಪಂತ್ ಅವರ ಹೆಸರು ಕೇಳಿ ಬಂದಿತ್ತು. ಆದರೆ, ಅವರು ನಿರೀಕ್ಷಿತ ಫಲಿತಾಂಶ ನೀಡಲು ವಿಫಲರಾದರು.

ಸಂಜು ಸ್ಯಾಮ್ಸನ್ ಕೂಡ ಅವಕಾಶಗಳನ್ನು ನಿರಾಶೆಗೊಳಿಸಿದರು. ಆದರೆ, ಕೆ.ಎಲ್.ರಾಹುಲ್ ಸೈ ಎನಿಸಿಕೊಂಡು ನಡೆದರು. ಹೀಗಾಗಿ ಟೆಸ್ಟ್ ತಂಡದ ವಿಕೆಟ್ ಕೀಪರ್ ವೃದ್ಧಿಮಾನ್ ಸಾಹ ರಾಹುಲ್ ವಿಕೆಟ್ ಕೀಪಿಂಗ್ ಬಗ್ಗೆ ಹೇಳಿಕೆ ನೀಡಿದ್ದಾರೆ.

ರಾಹುಲ್ ತನಗೆ ಸಿಕ್ಕ ಜವಾಬ್ಧಾರಿಯನ್ನು ನಿಷ್ಠೆಯಿಂದ ಮಾಡಿದ್ದಾರೆ. ಬ್ಯಾಟ್ ಹಾಗೂ ವಿಕೆಟ್‌ನ ಹಿಂದೆ ಕೆ.ಎಲ್.ರಾಹುಲ್ ಉತ್ತಮವಾಗಿ ಆಡುತ್ತಿದ್ದಾರೆ. ಅವರು ಅದಕ್ಕೆ ತುಂಬಾ ಚೆನ್ನಾಗಿ ಹೊಂದಾಣಿಕೆಯಾಗುತ್ತಿದ್ದಾರೆ ಎಂದು ವೃದ್ಧಿಮಾನ್ ಸಾಹ ರಾಹುಲ್ ವಿಕೆಟ್ ಕೀಪಿಂಗ್ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಆನ್‌ ದಿ ಫೀಲ್ಡ್ ಹಾಗೂ ಆಫ್ ದಿ ಫೀಲ್ಡ್ ಎರಡರಲ್ಲಿಯೂ ಧೋನಿ ಉತ್ತಮ ಆಟಗಾರ. ಯಾವಾಗಲೂ ಊಹಿಸಲು ಅಸಾಧ್ಯವಾಗುವಂತಹ ನಿರ್ಧಾರವನ್ನು ಅವರು ತೆಗೆದುಕೊಂಡಿದ್ದಾರೆ. ಆತನನ್ನು ನಾನು ಯಾವಾಗಲೂ ಸಕಾರಾತ್ಮಕವಾಗಿಯೇ ನೋಡಿದ್ದೇನೆ. ಆತನ ದೇಹದಲ್ಲಿ ಒಂದೇ ಒಂದು ಋಣಾತ್ಮಕ ಎಲುಬಿಲ್ಲ ಎಂದು ಧೋನಿಯ ಬಗ್ಗೆ ಸಾಹ ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಆರಂಭಿಕ ಪಂದ್ಯಗಳಲ್ಲಿ ಕೊಹ್ಲಿ ವಿಫಲವಾಗಿದ್ದೇಕೆ?

ದುಬೈ : ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಆರಂಭಿಕ ವೈಫಲ್ಯ ಅನುಭವಿಸಿರುವ ಹಿಂದಿನ ಕಾರಣವನ್ನು ಕಿಂಗ್ ಕೊಹ್ಲಿ ಬಿಚ್ಚಿಟ್ಟಿದ್ದಾರೆ.

ಇಂಡೋ-ನೇಪಾಳ ಕ್ರಿಕೆಟ್ ಟ್ರೋಫಿ “ನಿಡಗುಂದಿ ತಂಡಕ್ಕೆ ಚಿನ್ನದ ಪದಕ”

ಉತ್ತರಪ್ರಭ ಸುದ್ದಿ ನಿಡಗುಂದಿ: ನೇಪಾಳದ ಪೊಖರಾದಲ್ಲಿ ನಡೆದ ಇಂಡೋ-ನೇಪಾಳ ಇಂಟರ್ ನ್ಯಾಷನಲ್ ಕ್ರಿಕೆಟ್ ಚಾಂಪಿಯನ್ ಶಿಪ್…

ಸಾಲು ಮರದ ತಿಮ್ಮಕ್ಕನನ್ನು ನೆನೆದ ಬಜ್ಜಿ

ಭಾರತ ಕ್ರಿಕೆಟ್ ತಂಡದ ಆಟಗಾರ ಹರ್ಭಜನ್ ಸಿಂಗ್, ರಾಜ್ಯದ ಹೆಮ್ಮೆಯ ತಾಯಿಯನ್ನು ನೆನೆದು ಟ್ವೀಟ್ ಮಾಡಿದ್ದಾರೆ.ಸಾಲುಮರದ ತಿಮ್ಮಕ್ಕ ಅವರನ್ನು ಭಜ್ಜಿ ನೆನೆದು ಟ್ವೀಟ್ ಮಾಡಿದ್ದಾರೆ.

ಹಸಿರು ಜೆರ್ಸಿ ತೊಟ್ಟಾಗ ಆರ್ ಸಿಬಿಯ ಸಾಧನೆ ಏನು?

ದುಬೈ : ಭಾರೀ ಆತ್ಮವಿಶ್ವಾಸದಲ್ಲಿ ಆರ್ ಸಿಬಿ ತಂಡ ಹಸಿರು ಜೆರ್ಸಿ ತೊಟ್ಟು, ಚೆನ್ನೈ ವಿರುದ್ಧ ನಡೆದ ಪಂದ್ಯದಲ್ಲಿ ಹೀನಾಯ ಸೋಲು ಕಂಡಿದ್ದಾರೆ.