ಬೆಂಗಳೂರು: ಕರ್ನಾಟಕದ ಸರ್ಕಾರೀ ವಿಶ್ವವಿದ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ತಾತ್ಕಾಲಿಕ, ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಮತ್ತು ವೇತನ ತಾರತಮ್ಯ ಸರಿಪಡಿಸಲು ಒತ್ತಾಯಿಸಿ ರಾಜ್ಯಮಟ್ಟದ ವಿಚಾರ ಸಂಕಿರಣ (ವೆಬಿನಾರ್) ಅನ್ನು 2020 ಆಗಸ್ಟ್ 19 ರಂದು ಬುಧವಾರ ಮಧ್ಯಾಹ್ನ 2.30 ಕ್ಕೆ (ಸಾಮಾಜಿಕ ಜಾಲತಾಣದ ಮೂಲಕ) ಆಯೋಜಿಸಲಾಗಿದೆ.

ಖ್ಯಾತ ಸಾಹಿತಿ, ನಾಡೋಜ ಪ್ರೊ. ಬರಗೂರು ರಾಮಚಂದ್ರಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ವಿಷಯ ಮಂಡನೆ: ಸೇವಾ ಭದ್ರತೆ- ಸರ್ಕಾರ ಅನುಸರಿಸಬಹುದಾದ ಕ್ರಮಗಳು ಎಂಬ ವಿಷಯವಾಗಿ ಕರ್ನಾಟಕ ಉಚ್ಚ ನ್ಯಾಲಯದ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನದಾಸ್ ವಿಷಯ ಮಂಡಿಸಲಿದ್ದಾರೆ. ಹಿರಿಯ ಆರ್ಥಿಕ ತಜ್ಞ ಪ್ರೊ.ಟಿ.ಆರ್.ಚಂದ್ರಶೇಖರ ಉನ್ನತ ಶಿಕ್ಷಣ ಪದವೀಧರರು ಮತ್ತು ವಿವಿಗಳಲ್ಲಿ ಉದ್ಯೋಗಾವಕಾಶಗಳು ಎಂಬ ವಿಷಯವಾಗಿ ಮಾತನಾಡಲಿದ್ದಾರೆ.

ಪ್ರಜಾವಾಣಿ ದಿನ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ ಅವರು ಉನ್ನತ ಶಿಕ್ಷಣ ಪದವೀಧರರ ನಿರುದ್ಯೋಗ- ಸಮೂಹ ಮಾಧ್ಯಮಗಳ ಪಾತ್ರ ಎಂಬ ವಿಷಯ ಮಂಡಿಸಲಿದ್ದು, ಸಾಮಾಜಿಕ ಚಿಂತಕ ಬಿ.ರಾಜಶೇಖರ ಮೂರ್ತಿ ಸೇವಾ ಭದ್ರತೆ- ಉಪನ್ಯಾಸಕರು ಮುಂದಿಡಬೇಕಾದ ಹೆಜ್ಜೆಗಳು ಎಂಬುದಾಗಿ ವಿಚಾರ ಮಂಡನೆ ಮಾಡಲಿದ್ದಾರೆ.

ಕರ್ನಾಟಕ ರಾಜ್ಯದ ಎಲ್ಲ ಸರ್ಕಾರಿ ವಿಶ್ವವಿದ್ಯಾಲಯ ಹಾಗೂ ವಿವಿಗಳ ಸ್ನಾತಕೋತ್ತರ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ/ ಅರೆಕಾಲಿಕ/ ತಾತ್ಕಾಲಿಕ ಉಪನ್ಯಾಸಕರು ಹೆಚ್ಚಿನ ಸಂಖ್ಯೆಯಲ್ಲಿ ಮಧ್ಯಾಹ್ನ 2.25 ಕ್ಕೆ ಸಾಮಾಜಿಕ ಜಾಲತಾಣದ ಮೂಲಕ ಲಾಗಿನ್ ಆಗಬೇಕಾಗಿ ಕರ್ನಾಟಕ ವಿವಿಗಳ ಅತಿಥಿ ಉಪನ್ಯಾಸಕರ ಒಕ್ಕೂಟದ ಪ್ರಕಟಣೆ ತಿಳಿಸಿದೆ.

1 comment
Leave a Reply

Your email address will not be published. Required fields are marked *

You May Also Like

ಕರ್ನಾಟಕದಲ್ಲಿ ದೀಪಾವಳಿ ಆಚರಣೆಗೆ ಸರ್ಕಾರದ ಕೊವಿಡ್-19 ಮಾರ್ಗಸೂಚಿ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ 3ನೇ ಅಲೆ ಮತ್ತು ರೂಪಾಂತರ ವೈರಸ್ ಭೀತಿ ನಡುವೆ…

5 ರಂದು ನಡೆಯುವ ಯುವಜನ ಸಂಕಲ್ಪ ನಡಿಗೆ ಯಾತ್ರೆ ಯಶಸ್ವಿಗೆ ಮನವಿ

ಆಲಮಟ್ಟಿ: 75 ನೇ ಸ್ವಾತಂತ್ರ‍್ಯದ ಅಮೃತ ಮಹೋತ್ಸವದಂಗವಾಗಿ ಸದೃಢ, ಸಶಕ್ತ ಭಾರತಕ್ಕಾಗಿ ಅಗಷ್ಟ 5 ರಂದು…

ಗಜೇಂದ್ರಗಡದಲ್ಲಿ ಮುಷ್ಕರ: ಪೊಲೀಸ್-ಪ್ರತಿಭಟನಾಕಾರರ ಮದ್ಯೆ ಮಾತಿನ ಚಕಮಕಿ

ರೈತ, ಕಾರ್ಮಿಕ, ವಿದ್ಯುತ್, ಎಪಿಎಂಸಿ ಕಾಯ್ದೆ, ಬೆಲೆ ನಿಯಂತ್ರಣ ಕಾಯ್ದೆ, ಭೂ ಸುಧಾರಣೆ ಕಾಯ್ದೆ ಸೇರಿದಂತೆ ಜನ ವಿರೋದಿ ನೀತಿ ಖಂಡಿಸಿ ರಾಷ್ಟ್ರವ್ಯಾಪಿ, ಕಾರ್ಮಿಕ, ರೈತ ಹಾಗೂ ವಿವಿಧ ಸಂಘಟನೆಗಳು ಕರೆ ನೀಡಿರುವ ಮುಷ್ಕರದ ಅಂಗವಾಗಿ ಗದಗ ಜಿಲ್ಲೆ ಗಜೇಂದ್ರಗಡದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಸಂಗೀತಾಳಿಗೆ ಬೇಕಿದೆ ಸಹಾಯ: ಪಿಯಸಿಯಲ್ಲಿ ಶೇ.90 ಅಂಕ; ಬೆಂಬಿಡದ ಬಡತನದಿಂದ ಶಿಕ್ಷಣ ನಿಲ್ಲಿಸಲು ಮುಂದಾದ ವಿದ್ಯಾರ್ಥಿನಿ..!

ಪಿಯುಸಿ ಪರೀಕ್ಷೆಯಲ್ಲಿ ಶೇ.90 ಅಂಕ ಪಡೆದ ಪ್ರತಿಭಾವಂತೆಯ ಕಥೆ ಇದು. ಪಿಯುಸಿಯಲ್ಲಿನ ಹೆಚ್ಚು ಅಂಕದ ಉತ್ಸಾಹದಲ್ಲಿದ್ದ ವಿದ್ಯಾರ್ಥಿನಿಗೆ ಕುಟುಂಬದ ಆರ್ಥಿಕ ಸ್ಥಿತಿ ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸುವ ಹಂತಕ್ಕೆ ತಂದಿದೆ. ಹೀಗಾಗಿ ಬದುಕಿನಲ್ಲಿ ಓದಿ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹತ್ತು ಹಲವು ಕನಸು ಕಟ್ಟಿಕೊಂಡಿದ್ದ ವಿದ್ಯಾರ್ಥಿನಿ ಸಂಗೀತಾಳಿಗೆ ಓದು ಮುಂದುವರೆಸುವುದು ಕಷ್ಟವಾಗಿದೆ.