ಗದಗ: ಸರ್ಕಾರ ನಿಗದಿಪಡಿಸಿದ ಮಾರಾಟ ಬೆಲೆಗಿಂತ ಹೆಚ್ಚಿನ ದರದಲ್ಲಿ ಯೂರಿಯಾ ರಸಗೊಬ್ಬರವನ್ನು ವಿತರಿಸುತ್ತಿರುವ ಬಗ್ಗೆ ಬಂದ ದೂರಿನ ಹಿನ್ನಲೆಯಲ್ಲಿ ಜಂಟಿ ಕೃಷಿ ನಿರ್ದೇಶಕರ ಕಾರ್ಯಾಲಯದ ಸಹಾಯಕ ನಿರ್ದೇಶಕರ ಜಾರಿ ದಳ ತಂಡವು ಜಿಲ್ಲೆಯಲ್ಲಿನ ಕೆಳಕಂಡ ಕೃಷಿ ಪರಿಕರಗಳ ಮಾರಾಟ ಮಳಿಗೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಲಾಗಿ ಹೆಚ್ಚಿನ ದರಕ್ಕೆ ಯೂರಿಯಾ ರಸಗೊಬ್ಬರ ಮಾರಾಟ ಮಾಡಿರುವುದು ದೃಢಪಟ್ಟಿರುತ್ತದೆ.

ಜಿಲ್ಲೆಯ ಗದಗನ ಶ್ರೀ ಮಂಜುನಾಥ ಟ್ರೇಡರ್ಸ, ರೇಣುಕಾ ಅಗ್ರೋ ಕೇಂದ್ರ, ಶ್ರೀ ಚನ್ನವೀರೇಶ್ವರ ಅಗ್ರೋ ಕೇಂದ್ರ, ಎಸ್.ವಿ.ಹಲವಾಗಲಿ & ಸನ್ಸ್, ಮಹಾಂತೇಶ ಅಗ್ರೋ ಏಜೆನ್ಸಿ, ಅಂತೂರು-ಬೆಂತೂರಿನ ಶ್ರೀ ಅಗ್ರೋ ಕೇಂದ್ರ, ಗಜೇಂದ್ರಗಡ ತಾಲೂಕಿನ ಮಹಾಂತೇಶ ಅಗ್ರೋ ಕೇಂದ್ರ, ರೋಣ ತಾಲೂಕಿನ ಮಹಾವೀರ ಟ್ರೇಡರ್ಸ ಹಾಗೂ ಶಿರಹಟ್ಟಿ ತಾಲೂಕಿನ ಹೊಳೆಇಟಗಿಯ ಸುರೇಶ ಟ್ರೇಡರ್ಸ ಈ ಕೃಷಿ ಮಾರಾಟ ಮಳಿಗೆಗಳ ರಸಗೊಬ್ಬರ ಮಾರಾಟ ಪರವಾನಿಗೆಯನ್ನು 15 ದಿನಗಳ ಕಾಲ ಅಮಾನತ್ತಿನಲ್ಲಿರಿಸಲಾಗಿದೆ.

ಇಲಾಖೆಯ ಜಾರಿ ದಳ ತಂಡದಿಂದ ಜಿಲ್ಲೆಯಲ್ಲಿನ 60ಕ್ಕೂ ಹೆಚ್ಚಿನ ಕೃಷಿ ಪರಿಕರ ಮಾರಾಟ ಮಳಿಗೆಯ ರಸಗೊಬ್ಬರ ಮಾರಾಟ ಮಳಿಗೆಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ದಾಖಲಾತಿಗಳನ್ನು ಪರಿಶೀಲಿಸಿ ನೋಟೀಸ್ ನೀಡಲಾಗಿದೆ.

ಸರ್ಕಾರ ನಿಗದಿಪಡಿಸಿದ ಮಾರಾಟ ಬೆಲೆಗಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡಿದರಲ್ಲಿ ರೈತರು ಇಲಾಖೆಯ ಜಾರಿದಳ ತಂಡದ ಮುಖ್ಯಸ್ಥ ಸಂತೋಷ ಪಟ್ಟದಕಲ್ಲ, ಸಹಾಯಕ ಕೃಷಿ ನಿರ್ದೇಶಕರು, ಜಂಟಿ ಕೃಷಿ ನಿರ್ದೇಶಕರ ಕಾರ್ಯಾಲಯದ ಗದಗ ಮೊಬೈಲ್ ಸಂಖ್ಯೆ 8618742613 ಸಂಪರ್ಕಿಸಲು ಜಂಟಿ ಕೃಷಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೆ.ಎಸ್ಆರ.ಟಿ.ಸಿ ನೌಕರರಿಗೆ ಸಂಬಳರಹಿತ ರಜೆ ಅಮಾನವೀಯ:ಸರ್ಕಾರ ದಿವಾಳಿಯಾಗಿದೆಯೇ?: ಸಿದ್ದರಾಮಯ್ಯ ಆಕ್ರೋಶ

ಕೆ.ಎಸ್.ಆರ.ಟಿ.ಸಿ ನೌಕರರಿಗೆ 1 ವರ್ಷ ಸಂಬಳರಹಿತ ರಜೆ ನೀಡಲು ಹೊರಟಿರುವುದು ಕಾರ್ಮಿಕ ವಿರೋಧಿ ನಡೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.ಸರ್ಕಾರದ ಯೋಚನೆ ಕಾರ್ಮಿಕ ವಿರೋಧಿ ಮತ್ತು ಅಮಾನವೀಯ

ಮುಂಡರಗಿ ಮಿನಿ ವಿಧಾನಸೌಧಕ್ಕೂ ಶುರುವಾಯಿತೆ ಕೊರೊನಾ ಭೀತಿ..!

ಪಟ್ಟಣದಲ್ಲಿ ಕಳೆದ ಎರಡು ಮೂರು ದಿನಗಳಿಂದ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಇದರಿಂದ ಮುಂಡರಗಿಯ ಜನ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ ದಿಂದ ಆತಂಕಕ್ಕೀಡಾಗಿದ್ದಾರೆ. ಆದರೆ ಇಂದು ಪಟ್ಟಣದ ಮಿನಿವಿಧಾನ ಸೌಧ ಕಾರ್ಯಾಲಯ ಗೇಟ್ ಗೆ ಬೀಗ ಹಾಕಿರುವುದು ಜನರ ಆತಂಕಕ್ಕೆ ಕಾರಣವಾಗಿದೆ.

ಕಸಾಪ ಜಿಲ್ಲಾಧ್ಯಕ್ಷ ಶರಣು ಹೇಳಿಕೆ: ಸಾಹಿತ್ಯ ಭವನಗಳ ಕಾಮಗಾರಿ ಪೂರ್ಣಗೊಳಿಸಿದ ಹೆಮ್ಮೆ ಇದೆ

ರಾಜ್ಯಕ್ಕೆ ಮಾದರಿಯಾದ ಜಿಲ್ಲಾ ಸಾಹಿತ್ಯ ಭವನ ಕಳೆದ 24 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರೋಣ ತಾಲೂಕ ಕನ್ನಡ ಸಾಹಿತ್ಯ ಭವನಗಳು ನಮ್ಮ ಅವಧಿಯಲ್ಲಿ ಪೂರ್ಣಗೊಳಿಸಿ ಉದ್ಘಾಟನೆಯಾಗಿರುವುದು ಹೆಮ್ಮೆಯ ಸಂಗತಿಯಾಗಿದೆ

ಗ್ರಾಮೀಣ ಪ್ರದೇಶಗಳಲ್ಲಿ ಕೆರೆಗಳ ಒತ್ತುವರಿ ತೆರವಿಗೆ ಸೂಚನೆ: ಡಿಸಿ ಎಂ.ಸುಂದರೇಶ್ ಬಾಬು

ಜಿಲ್ಲೆಯ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಕೆರೆಗಳ ಗಡಿ ಗುರುತಿಸಿ, ಅತಿಕ್ರಮಣವಾದ ಕೆರೆಗಳನ್ನು ನವೆಂಬರ್ ತಿಂಗಳ ಅಂತ್ಯದೊಳಗಾಗಿ ತೆರವುಗೊಳಿಸಿ ಉದ್ಯಾನವನ (ಪ್ಲಾಂಟೇಷನ್) ನಿರ್ಮಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅವರು ಪಿಡಿಒಗಳಿಗೆ ಸೂಚನೆ ನೀಡಿದರು.