ಐಸಿಸ್ ನ ಉಗ್ರರಿಗೆ ವೈದ್ಯಕೀಯ ಸೇವೆ ಒದಗಿಸುವುದಕ್ಕಾಗಿ ಹಾಗೂ ಶಸ್ತ್ರಾಸ್ತ್ರ ಪೂರೈಕೆ ಮಾಡಲು ರಹಸ್ಯವಾಗಿ ಸಂವಹನ ನಡೆಸುವುದಕ್ಕಾಗಿ ಪ್ರತ್ಯೇಕ ಆಪ್ ಗಳನ್ನು ನಗರ ಮೂಲದ ನೇತ್ರ ವೈದ್ಯನೊಬ್ಬ ಅಭಿವೃದ್ಧಿ ಪಡಿಸುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

ಬೆಂಗಳೂರು: ಐಸಿಸ್ ನ ಉಗ್ರರಿಗೆ ವೈದ್ಯಕೀಯ ಸೇವೆ ಒದಗಿಸುವುದಕ್ಕಾಗಿ ಹಾಗೂ ಶಸ್ತ್ರಾಸ್ತ್ರ ಪೂರೈಕೆ ಮಾಡಲು ರಹಸ್ಯವಾಗಿ ಸಂವಹನ ನಡೆಸುವುದಕ್ಕಾಗಿ ಪ್ರತ್ಯೇಕ ಆಪ್ ಗಳನ್ನು ನಗರ ಮೂಲದ ನೇತ್ರ ವೈದ್ಯನೊಬ್ಬ ಇದೀಗ ಪೊಲೀಸರ ಅತಿಥಿಯಾಗಿದೆ.

ರಾಷ್ಟ್ರೀಯ ತನಿಖಾ ದಳ(ಎನ್ಐಎ) ಈ ವಿಷಯವನ್ನು ಬಹಿರಂಗಪಡಿಸಿದೆ. ಬಸವನಗುಡಿ ನಿವಾಸಿ ಡಾ. ಅಬ್ದುರ್ ರೆಹಮಾನ್(28) ಎಂಬ ವ್ಯಕ್ತಿಯೇ ಈ ಕೃತ್ಯ ಎಸಗುತ್ತಿದ್ದವ. ಈ ಕಾರಣದಿಂದ ಸದ್ಯ ಅಧಿಕಾರಿಗಳು ಈತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಅಲ್ಲದೇ, ಆರೋಪಿಯ ಮನೆ ಸೇರಿದಂತೆ ಮೂರು ಸ್ಥಳಗಳ ಮೇಲೆ ದಾಳಿ ನಡೆಸಿ ಮೊಬೈಲ್, ಕೆಮಿಕಲ್, ಲ್ಯಾಪ್ ಟಾಪ್ ಸೇರಿದಂತೆ ಇನ್ನಿತರ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.  

ಜಗತ್ತಿನಲ್ಲಿ ಎಲ್ಲೇ ವಿಧ್ವಂಸಕ ಕೃತ್ಯ ನಡೆದರೂ ಈ ಸಂದರ್ಭದಲ್ಲಿ ಗಾಯಗೊಳ್ಳುವ ಐಸಿಸ್ ಶಂಕಿತ ಉಗ್ರರಿಗೆ ವೈದ್ಯಕೀಯ ಸೇವೆ ಒದಗಿಸಲು ಹಾಗೂ ಶಸ್ತ್ರಾಸ್ತ್ರ ಪೂರೈಕೆ ಮಾಡಲು ರಹಸ್ಯವಾಗಿ ಸಂವಹನ ನಡೆಸುವ ಉದ್ಧೇಶದಿಂದ ಅಬ್ದುರ್ ಆಪ್ ಗಳನ್ನು ರೂಪಿಸುತ್ತಿದ್ದ, ಹಾಗೂ ಇದಕ್ಕಾಗಿ ಈತ ತರಬೇತಿ ಕೂಡ ಐಸಿಸ್ ನಲ್ಲಿಯೇ ಪಡೆದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೊರೊನಾ ಭಯದಿಂದ ದಾರಿ ಮಧ್ಯೆಯೇ ಹೆಣ ಬಿಟ್ಟು ಹೋದ ಕುಟುಂಬಸ್ಥರು!

ವ್ಯಕ್ತಿಯೊಬ್ಬ ಕೊರೊನಾದಿಂದ ಮೃತಪಟ್ಟಿರಬಹುದೆಂಬ ಶಂಕೆಯಿಂದ ಶವವನ್ನು ನಡು ರಸ್ತೆಯಲ್ಲಿಯೇ ಬಿಟ್ಟು ಕುಟುಂಬವೊಂದು ಎಸ್ಕೇಪ್ ಆಗಿರುವ ಘಟನೆ ಬೆಳಕಿಗೆ ಬಂದಿದೆ.

ಇನ್ಮುಂದೆ ಗ್ರಾಮ ಪಂಚಾಯತಿಯಲ್ಲೆ ಸಿಗಲಿದೆ ಜನನ-ಮರಣ ಪ್ರಮಾಣ ಪತ್ರ

ರಾಷ್ಟ್ರೀಯ ಜನನ-ಮರಣ ಕಾಯ್ದೆ 1967ರ ಅಧ್ಯಾಯ 5ರ ಪ್ರಕರಣ 27 ರ ಅಡಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು (ಪಿಡಿಒ) ಜನನ ಮತ್ತು ಮರಣ ಪತ್ರಗಳ ವಿತರಣಾಧಿಕಾರಿ ಎಂದು ರಾಜ್ಯಪಾಲರ ಆದೇಶದ ಪ್ರಕಾರ ನೇಮಕ ಮಾಡಿ, ಸರ್ಕಾರದ ಅಧೀನ ಕಾರ್ಯದರ್ಶಿ (ಜಿಪಂ) (ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ) ಆದೇಶ ಹೊರಡಿಸಿದ್ದಾರೆ.

ಬಿಡುವೆನೆಂದರೂ ಬಿಡದಂತೆ ಕಾಡುತ್ತಿರುವ ಆಕೆ ಹೋಗಿದ್ದಾರೂ ಎಲ್ಲಿಗೆ..?

ಅದ್ಯಾಕೋ ಗೊತ್ತಿಲ್ಲ ನಾನು ಅವಳಿಗೆ ಫಿದಾ ಆಗಿಬಿಟ್ಟಿದ್ದೆ. ಕ್ಷಣವೂ ಬಿಟ್ಟಿರದಷ್ಟು ಗಾಢ ಪ್ರೀತಿ ಬೆಳೆದಿತ್ತು. ನಮ್ಮಿಬ್ಬರ ಪ್ರೀತಿಯ ಬೆಸುಗೆಗೆ ಮೂರು ವರ್ಷವಾಗಿತ್ತು. ನನ್ನ ಹೃದಯದ ಭಾಷೆ ಅವಳಿಗೆ ಗೊತ್ತು.

ನನ್ನ ಮಗ ದೇಶಕ್ಕಾಗಿ ಪ್ರಾಣ ಬಿಟ್ಟಿದ್ದಾನೆ – ಹುತಾತ್ಮ ಯೋಧನ ತಂದೆ!

ಇರುವ ಒಬ್ಬನೇ ಮಗನನ್ನು ಕಳೆದುಕೊಂಡಿರುವುದಕ್ಕೆ ನಮಗೆ ತುಂಬಾ ದುಃಖವಾಗುತ್ತಿದೆ. ಆದರೆ ನನ್ನ ಮಗ ದೇಶಕ್ಕಾಗಿ ತನ್ನ ಪ್ರಾಣಾರ್ಪಣೆ ಮಾಡಿದ್ದಕ್ಕೆ ಹೆಮ್ಮೆ ಇದೆ ಎಂದು ಗಲ್ವಾನ್ ನಲ್ಲಿ ಚೀನಾ ಯೋಧರ ದಾಳಿಗೆ ಬಲಿಯಾದ ಕರ್ನಲ್ ಸಂತೋಷ್ ಬಾಬಿ ಪೋಷಕರು ಹೇಳಿದ್ದಾರೆ.