ಐಸಿಸ್ ನ ಉಗ್ರರಿಗೆ ವೈದ್ಯಕೀಯ ಸೇವೆ ಒದಗಿಸುವುದಕ್ಕಾಗಿ ಹಾಗೂ ಶಸ್ತ್ರಾಸ್ತ್ರ ಪೂರೈಕೆ ಮಾಡಲು ರಹಸ್ಯವಾಗಿ ಸಂವಹನ ನಡೆಸುವುದಕ್ಕಾಗಿ ಪ್ರತ್ಯೇಕ ಆಪ್ ಗಳನ್ನು ನಗರ ಮೂಲದ ನೇತ್ರ ವೈದ್ಯನೊಬ್ಬ ಅಭಿವೃದ್ಧಿ ಪಡಿಸುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

ಬೆಂಗಳೂರು: ಐಸಿಸ್ ನ ಉಗ್ರರಿಗೆ ವೈದ್ಯಕೀಯ ಸೇವೆ ಒದಗಿಸುವುದಕ್ಕಾಗಿ ಹಾಗೂ ಶಸ್ತ್ರಾಸ್ತ್ರ ಪೂರೈಕೆ ಮಾಡಲು ರಹಸ್ಯವಾಗಿ ಸಂವಹನ ನಡೆಸುವುದಕ್ಕಾಗಿ ಪ್ರತ್ಯೇಕ ಆಪ್ ಗಳನ್ನು ನಗರ ಮೂಲದ ನೇತ್ರ ವೈದ್ಯನೊಬ್ಬ ಇದೀಗ ಪೊಲೀಸರ ಅತಿಥಿಯಾಗಿದೆ.

ರಾಷ್ಟ್ರೀಯ ತನಿಖಾ ದಳ(ಎನ್ಐಎ) ಈ ವಿಷಯವನ್ನು ಬಹಿರಂಗಪಡಿಸಿದೆ. ಬಸವನಗುಡಿ ನಿವಾಸಿ ಡಾ. ಅಬ್ದುರ್ ರೆಹಮಾನ್(28) ಎಂಬ ವ್ಯಕ್ತಿಯೇ ಈ ಕೃತ್ಯ ಎಸಗುತ್ತಿದ್ದವ. ಈ ಕಾರಣದಿಂದ ಸದ್ಯ ಅಧಿಕಾರಿಗಳು ಈತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಅಲ್ಲದೇ, ಆರೋಪಿಯ ಮನೆ ಸೇರಿದಂತೆ ಮೂರು ಸ್ಥಳಗಳ ಮೇಲೆ ದಾಳಿ ನಡೆಸಿ ಮೊಬೈಲ್, ಕೆಮಿಕಲ್, ಲ್ಯಾಪ್ ಟಾಪ್ ಸೇರಿದಂತೆ ಇನ್ನಿತರ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.  

ಜಗತ್ತಿನಲ್ಲಿ ಎಲ್ಲೇ ವಿಧ್ವಂಸಕ ಕೃತ್ಯ ನಡೆದರೂ ಈ ಸಂದರ್ಭದಲ್ಲಿ ಗಾಯಗೊಳ್ಳುವ ಐಸಿಸ್ ಶಂಕಿತ ಉಗ್ರರಿಗೆ ವೈದ್ಯಕೀಯ ಸೇವೆ ಒದಗಿಸಲು ಹಾಗೂ ಶಸ್ತ್ರಾಸ್ತ್ರ ಪೂರೈಕೆ ಮಾಡಲು ರಹಸ್ಯವಾಗಿ ಸಂವಹನ ನಡೆಸುವ ಉದ್ಧೇಶದಿಂದ ಅಬ್ದುರ್ ಆಪ್ ಗಳನ್ನು ರೂಪಿಸುತ್ತಿದ್ದ, ಹಾಗೂ ಇದಕ್ಕಾಗಿ ಈತ ತರಬೇತಿ ಕೂಡ ಐಸಿಸ್ ನಲ್ಲಿಯೇ ಪಡೆದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕಾಂಗ್ರೆಸ್ ನಾಯಕ ಖರ್ಗೆ ಕುಟುಂಬಕ್ಕೆ ಜೀವಬೆದರಿಕೆ..!

ಬೆಂಗಳೂರು: ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಜೀವ ಬೆದರಿಕೆಯ ಕರೆ ಬಂದಿದೆ…

ರಾಮಮಂದಿರ ಶಿಲಾನ್ಯಾಸ ಎಂದೋ ಆಗುತ್ತಿತ್ತು…!

ಲಖ್ನೋ: ಪ್ರಧಾನಿ ನರೇಂದ್ರ ಮೋದಿಯವರನ್ನು ಆದಷ್ಟು ಶೀಘ್ರದಲ್ಲೇ ಭೇಟಿಯಾಗಲಿದ್ದೇವೆ. ಇನ್ನೂ ದಿನಾಂಕ ನಿಗದಿಯಾಗಿಲ್ಲ. ಕೊರೊನಾ ಹಿನ್ನೆಲೆಯಲ್ಲಿ…

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 576ಕ್ಕೆ ಏರಿಕೆ!

ರಾಜ್ಯದಲ್ಲಿ ಇಂದು ನೂತನವಾಗಿ 11 ಕೊರೊನಾ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ನಿಟ್ಟಿನಲ್ಲಿ ಸೋಂಕಿತರ ಸಂಖ್ಯೆ 576ಕ್ಕೆ ಏರಿಕೆ ಕಂಡಿದೆ. ಈ ಪೈಕಿ 22 ಜನ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿಂದು 204 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 204 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 6245…