ಐಸಿಸ್ ನ ಉಗ್ರರಿಗೆ ವೈದ್ಯಕೀಯ ಸೇವೆ ಒದಗಿಸುವುದಕ್ಕಾಗಿ ಹಾಗೂ ಶಸ್ತ್ರಾಸ್ತ್ರ ಪೂರೈಕೆ ಮಾಡಲು ರಹಸ್ಯವಾಗಿ ಸಂವಹನ ನಡೆಸುವುದಕ್ಕಾಗಿ ಪ್ರತ್ಯೇಕ ಆಪ್ ಗಳನ್ನು ನಗರ ಮೂಲದ ನೇತ್ರ ವೈದ್ಯನೊಬ್ಬ ಅಭಿವೃದ್ಧಿ ಪಡಿಸುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

ಬೆಂಗಳೂರು: ಐಸಿಸ್ ನ ಉಗ್ರರಿಗೆ ವೈದ್ಯಕೀಯ ಸೇವೆ ಒದಗಿಸುವುದಕ್ಕಾಗಿ ಹಾಗೂ ಶಸ್ತ್ರಾಸ್ತ್ರ ಪೂರೈಕೆ ಮಾಡಲು ರಹಸ್ಯವಾಗಿ ಸಂವಹನ ನಡೆಸುವುದಕ್ಕಾಗಿ ಪ್ರತ್ಯೇಕ ಆಪ್ ಗಳನ್ನು ನಗರ ಮೂಲದ ನೇತ್ರ ವೈದ್ಯನೊಬ್ಬ ಇದೀಗ ಪೊಲೀಸರ ಅತಿಥಿಯಾಗಿದೆ.

ರಾಷ್ಟ್ರೀಯ ತನಿಖಾ ದಳ(ಎನ್ಐಎ) ಈ ವಿಷಯವನ್ನು ಬಹಿರಂಗಪಡಿಸಿದೆ. ಬಸವನಗುಡಿ ನಿವಾಸಿ ಡಾ. ಅಬ್ದುರ್ ರೆಹಮಾನ್(28) ಎಂಬ ವ್ಯಕ್ತಿಯೇ ಈ ಕೃತ್ಯ ಎಸಗುತ್ತಿದ್ದವ. ಈ ಕಾರಣದಿಂದ ಸದ್ಯ ಅಧಿಕಾರಿಗಳು ಈತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಅಲ್ಲದೇ, ಆರೋಪಿಯ ಮನೆ ಸೇರಿದಂತೆ ಮೂರು ಸ್ಥಳಗಳ ಮೇಲೆ ದಾಳಿ ನಡೆಸಿ ಮೊಬೈಲ್, ಕೆಮಿಕಲ್, ಲ್ಯಾಪ್ ಟಾಪ್ ಸೇರಿದಂತೆ ಇನ್ನಿತರ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.  

ಜಗತ್ತಿನಲ್ಲಿ ಎಲ್ಲೇ ವಿಧ್ವಂಸಕ ಕೃತ್ಯ ನಡೆದರೂ ಈ ಸಂದರ್ಭದಲ್ಲಿ ಗಾಯಗೊಳ್ಳುವ ಐಸಿಸ್ ಶಂಕಿತ ಉಗ್ರರಿಗೆ ವೈದ್ಯಕೀಯ ಸೇವೆ ಒದಗಿಸಲು ಹಾಗೂ ಶಸ್ತ್ರಾಸ್ತ್ರ ಪೂರೈಕೆ ಮಾಡಲು ರಹಸ್ಯವಾಗಿ ಸಂವಹನ ನಡೆಸುವ ಉದ್ಧೇಶದಿಂದ ಅಬ್ದುರ್ ಆಪ್ ಗಳನ್ನು ರೂಪಿಸುತ್ತಿದ್ದ, ಹಾಗೂ ಇದಕ್ಕಾಗಿ ಈತ ತರಬೇತಿ ಕೂಡ ಐಸಿಸ್ ನಲ್ಲಿಯೇ ಪಡೆದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

2019-20: ತೆರಿಗೆಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು

2019-20ರ ಹಣಕಾಸು ವರ್ಷದ ತೆರಿಗೆಗೆ ಸಂಬಂಧಿಸಿದಂತೆ ಕೆಲವು ಪ್ರಮುಖ ದಿನಾಂಕ ಮತ್ತು ಅಂತಿಮ ದಿನಾಂಕಗಳನ್ನು (ಡೆಡ್ ಲೈನ್) ಇಲ್ಲಿ ಪ್ರಕಟಿಸಲಾಗಿದೆ. ತೆರಿಗೆ ಪಾವತಿದಾರರಾಗಿದ್ದಲ್ಲಿ, ಇವನ್ನು ನೋಟ್ ಮಾಡಿಟ್ಟುಕೊಳ್ಳುವುದು ಒಳ್ಳೆಯದು.

ಗರ್ಭಿಣಿಗೆ ಸೋಂಕು: ಗದಗ ಹೆರಿಗೆ ಆಸ್ಪತ್ರೆ ಸೀಲ್ ಡೌನ್

ಗದಗ: ನಗರದ ಕೆ.ಸಿ ರಾಣಿ ರಸ್ತೆಯಲ್ಲಿರುವ ಸರಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಮಹಿಳೆಯೋರ್ವರ ಗಂಟಲುದ್ರವದ…

ಕೊರೋನಾ ಸೋಂಕು ತಪಾಸಣೆಗೆ ಒಳಪಡುವವರು ಬೇರೆಯವರ ಮೊಬೈಲ್ ನಮೂದಿಸಬೇಡಿ: ಸುಧಾಕರ್

ಕೊರೋನಾ ಸೋಂಕು ತಪಾಸಣೆಗೆ ಒಳಪಡುವ ಸಾರ್ವಜನಿಕರು ತಾವು ಬಳಸುವ ತಮ್ಮದೇ ಮೊಬೈಲ್ ಸಂಖ್ಯೆಯನ್ನು ಅಧಿಕೃತ ನಮೂನೆಯಲ್ಲಿ ದಾಖಲಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾಕ್ಟರ್ ಕೆ.ಸುಧಾಕರ್ ಮನವಿ ಮಾಡಿದ್ದಾರೆ .

ಗದಗ ಜಿಲ್ಲೆಯಲ್ಲಿ ಊರೂರು ವ್ಯಾಪಿಸುತ್ತಿರುವ ವೈರಸ್: ಯಾವ ಊರಲ್ಲಿ ಎಷ್ಟು?

ಗದಗ: ಜಿಲ್ಲೆಯಲ್ಲಿ ಶುಕ್ರವಾರ ದಿ. 17 ರಂದು 60(ಹೆಲ್ಥ್ ಬುಲೆಟಿನ್ ನಲ್ಲಿ 59) ಜನರಿಗೆ ಕೊವಿಡ್-19…