ಇತ್ತಿಚೆಗಷ್ಟೆ ಪದ್ಮಶ್ರೀ ಪ್ರಶಸ್ತಿ ಪಡೆದ ಬಾಲಿವುಡ್ ನಿರ್ಮಾಪಕ ಕರಣ್ ಜೋಹರ್ ವಿರುದ್ಧ ನಟಿ ಕಂಗನಾ ರಾಣಾವತ್ ಹಲವು ಆರೋಪ ಮಾಡಿದ್ದಾರೆ. ಹೀಗಾಗಿ ಕರಣ್ ಗೆ ನೀಡಿರುವ ಪದ್ಮಶ್ರೀ ಪ್ರಶಸ್ತಿಯನ್ನು ಹಿಂಪಡೆಯಬೇಕು ಎಂದು ಮನವಿ ಮಾಡಿದ್ದಾರೆ.

ನವದೆಹಲಿ: ನಿರ್ಮಾಪಕ ಕರಣ್ ಜೋಹರ್ ನೀಡಿದ್ದ ಪದ್ಮಶ್ರೀ ಪ್ರಶಸ್ತಿ ಹಿಂಪಡೆಯಬೇಕು ಎಂದು ನಟಿ ಕಂಗನಾ ರಾಣಾವತ್ ಮನವಿ ಮಾಡಿದ್ದಾರೆ.

ನೇರವಾಗಿಯೇ ಮಾತನಾಡುವ ವ್ಯಕ್ತಿತ್ವ ಇರುವ ಅವರು ಈ ಬಾರಿ ಕರಣ್ ಜೋಹರ್ ಬಗ್ಗೆ ಮಾತನಾಡಿದ್ದಾರೆ. ಈ ಕುರಿತು ಅವರು ಟ್ವೀಟ್ ಮಾಡಿದ್ದಾರೆ.

ಇದನ್ನು ಓದಿ: ಸೂಪರ್ ಸ್ಟಾರ್ ಚಿತ್ರ ತಂಡದ ಗಿಫ್ಟ್ ಏನು ಗೊತ್ತಾ?

ಕರಣ್‌ ಜೋಹರ್‌ ಅವರಿಗೆ ನೀಡಿದ ಪದ್ಮಶ್ರೀ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು. ಅಂತರಾಷ್ಟ್ರೀಯ ವೇದಿಕೆಯಲ್ಲಿಯೇ ಸಿನಿಮಾ ರಂಗ ತೊರೆಯುವಂತೆ ನನಗೆ ಬೆದರಿಸಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ವಿರುದ್ಧ ಪಿತೂರಿ ನಡೆಸಿ ಅವರ ವೃತ್ತಿ ಜೀವನವನ್ನು ನಾಶಮಾಡಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಉರಿ ಹೋರಾಟದ ಸಮಯದಲ್ಲಿ ಪಾಕಿಸ್ತಾನ ಪರವಾಗಿದ್ದ ಕರಣ್‌ ಈಗ ರಾಷ್ಟ್ರ ವಿರೋಧಿ ಸಿನಿಮಾ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ. ನೆಟ್‌ ಫ್ಲಿಕ್ಸ್ ನಲ್ಲಿ ತೆರೆ ಕಂಡಿರುವ ಗುಂಜನ್‌ ಸಕ್ಸೆನಾ ಸಿನಿಮಾವನ್ನು ಕರಣ್‌ ಜೋಹರ್‌ ಅವರ ಧರ್ಮ ಪ್ರೊಡಕ್ಷನ್‌ ನಿರ್ಮಿಸಿದೆ. ಈ ಚಿತ್ರದ ಬಗ್ಗೆ ಭಾರೀ ಟೀಕೆ ವ್ಯಕ್ತವಾಗಿದೆ.

ಕರಣ್‌ ಜೋಹರ್‌ ಮತ್ತು ಕಂಗನಾ ರಣಾವತ್‌ ಅವರಿಗೆ ಈ ವರ್ಷ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ರಾಷ್ಟ್ರಪತಿ ರಮಾನಾಥ್‌ ಕೋವಿಂದ್‌ ಪುರಸ್ಕರಿಸಿದ್ದರು.

ಇದನ್ನು ಓದಿ: ನಮ್ಮ ಜೀವನದ ಕಣಕಣದಲ್ಲಿಯೂ ದೇಶಭಕ್ತಿ ಜಾಗೃತವಾಗಿರಬೇಕು: ನಟ ದರ್ಶನ್

Leave a Reply

Your email address will not be published. Required fields are marked *

You May Also Like

ಕೊರೊನಾ ಭಯದಿಂದ ದಾರಿ ಮಧ್ಯೆಯೇ ಹೆಣ ಬಿಟ್ಟು ಹೋದ ಕುಟುಂಬಸ್ಥರು!

ವ್ಯಕ್ತಿಯೊಬ್ಬ ಕೊರೊನಾದಿಂದ ಮೃತಪಟ್ಟಿರಬಹುದೆಂಬ ಶಂಕೆಯಿಂದ ಶವವನ್ನು ನಡು ರಸ್ತೆಯಲ್ಲಿಯೇ ಬಿಟ್ಟು ಕುಟುಂಬವೊಂದು ಎಸ್ಕೇಪ್ ಆಗಿರುವ ಘಟನೆ ಬೆಳಕಿಗೆ ಬಂದಿದೆ.

ಶಿರಹಟ್ಟಿಯಲ್ಲಿ ಕಟ್ಟಿಗೆ ಅಡ್ಡೆಗಳ ದರ್ಬಾರಿಗೆ ಅನುಮತಿ ಕೊಟ್ಟವರು ಯಾರು..?

ನಿನ್ನೆಯಷ್ಟೆ ಕಟ್ಟಿಗೆ ಅಡ್ಡೆಗಳಿಂದ ಕೊರೊನಾ ಆತಂಕ ಎನ್ನುವ ಶಿರ್ಷಿಕೆಯಡಿ ವಿಶೇಷ ವರದಿಯನ್ನು ಉತ್ತರಪ್ರಭ ಪ್ರಕಟಿಸಿತ್ತು. ಆದರೆ ಇದರ ಆಳಕ್ಕಿಳಿದಾಗ ಗೊತ್ತಾಗಿದ್ದು, ಶಿರಹಟ್ಟಿಯಲ್ಲಿನ ಕಟ್ಟಿಗೆ ಅಡ್ಡೆಗಳಿಗೆ ಅನುಮತಿ ನೀಡಿದವರು ಯಾರು? ಎನ್ನುವ ಪ್ರಶ್ನೆ.

ತಿರುಪತಿ ತಿಮ್ಮಪ್ಪನ ದರ್ಶನ ಯಾವಾಗ?

ಕೇಂದ್ರ ಸರ್ಕಾರ ಜೂ. 30ರ ವರೆಗೂ ಲಾಕ್ ಡೌನ್ ಘೋಷಣೆ ಮಾಡಿದೆ. ಅಲ್ಲದೇ, ಈ ಬಾರಿ ದೇವಸ್ಥಾನಗಳನ್ನು ತೆರೆಯಲು ಅನುಮತಿ ನೀಡಿದ್ದು, ಅದಕ್ಕಾಗಿ ಈ ವಾರವೇ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಲಿದೆ.

ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ನಾಲ್ವರು

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿಯ ಈರಣ್ಣ ಕಡಾಡಿ,…