ಬೆಂಗಳೂರು: ಕೊರೊನಾ ಸೋಂಕಿತರ ಮನೆಯ ಪ್ರದೇಶವನ್ನು ಸೀಲ್ ಡೌನ್ ಮಾಡಲಾಗುತ್ತಿದೆ. ಈ ಹಿಂದೆ ಇದರ ಪ್ರಮಾಣ ತುಸು ಹೆಚ್ಚಾಗಿತ್ತು. ಆದರೆ, ಈ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ.

ಈ ಕುರಿತು ವರದಿ ಪಡೆಯಲಾಗುತ್ತಿದ್ದು, ಬಿಬಿಎಂಪಿಯು ಕಂಟೈನ್ಮೆಂಟ್‌ ವಲಯಗಳಲ್ಲಿ ಸೀಲ್ ಡೌನ್ ಗಾಗಿ ರೂ. 20 ರಿಂದ ರೂ. 25 ಕೋಟಿಯಷ್ಟು ಖರ್ಚುಗಳಾಗಿರಬಹುದು ಎಂದು ಅಂದಾಜಿಸಿದೆ. ಬಿಬಿಎಂಪಿಯಲ್ಲಿ ನಡೆದ ಕೌನ್ಸಿಲ್‌ ಸಭೆಯಲ್ಲಿ ಮಾತನಾಡಿದ ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌, ಸೋಂಕಿತರ ಮನೆಯ ಸುತ್ತ ಸೀಲ್‌ಡೌನ್‌ ಮಾಡುವುದಕ್ಕಾಗಿ ಅಗತ್ಯವಿದ್ದ ಬ್ಯಾರಿಕೇಡ್‌, ತಗಡಿನ ಶೀಟುಗಳು, ಮರದ ಕಂಬಗಳ ಖರೀದಿಗಾಗಿ ಕೆಲವು ಎಂಜನೀಯರ್ ಗಳು ಮನಬಂದಂತೆ ಖರ್ಚು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಜರಾಜೇಶ್ವರಿ ನಗರದ ವಲಯವೊಂದರಲ್ಲಿಯೇ ಜೂನ್‌ ಪ್ರಾರಂಭದಿಂದ ಜು.15ರವರೆಗೆ ಸೀಲ್‌ಡೌನ್‌ಗಾಗಿ ಬರೋಬ್ಬರಿ ರೂ.1.50 ಕೋಟಿ ಖರ್ಚು ಮಾಡಲಾಗಿದೆ. ಕೆಲವು ವಲಯಗಳಲ್ಲಿ ಒಬ್ಬ ಸೋಂಕಿತರ ಮನೆಗಾಗಿ ಖರೀದಿಸಿದ್ದ ವಸ್ತುಗಳನ್ನು ಬೇರೆಡೆಯೂ ಬಳಸಿಕೊಳ್ಳಲಾಗಿದೆ.

ಪಾಲಿಕೆಯ ಎಂಟು ವಲಯಗಳ ಎಂಜಿನಿಯರ್‌ಗಳೊಂದಿಗೆ ಸಭೆ ನಡೆಸಿ, ಕಂಟೈನ್ಮೆಂಟ್‌ ವಲಯಗಳಲ್ಲಿ ಸೀಲ್‌ಡೌನ್‌ಗಾಗಿ ಖರ್ಚು ಮಾಡಿರುವ ಮೊತ್ತ, ಅದಕ್ಕೆ ಅನುಮೋದನೆ ಕೊಟ್ಟವರು ಯಾರು ಎಂಬುವುದರ ವರದಿ ಪಡೆಯಲಾಗುತ್ತಿದೆ ಎಂದು ತಿಳಿಸಿದರು.

ನಗರದಲ್ಲಿ 12 ಸಾವಿರ ಕಂಟೈನ್ಮೆಂಟ್‌ ವಲಯಗಳಿದ್ದು, ಸೀಲ್‌ಡೌನ್‌ಗೆ ಇಲ್ಲಿಯವರೆಗೆ ಗರಿಷ್ಠ ರೂ.25 ಕೋಟಿಯವರೆಗೂ ಖರ್ಚಾಗಿರಬಹುದೆಂದು ಅಂದಾಜಿಸಲಾಗಿದೆ ಎಂದು ತಿಳಿಸಿದ್ದಾರೆ.

ಕೊರೊನಾ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಲು ಅಥವಾ ಹೋಮ್‌ ಐಸೊಲೇಷನ್‌ಗೆ ಒಳಪಡಿಸಲು ಲಂಚ ಪಡೆಯುತ್ತಿರುವ ದೂರುಗಳು ಕೂಡ ಕೇಳಿ ಬರುತ್ತಿವೆ. ಹಣ ಪಡೆದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಈ ಸಂದರ್ಭದಲ್ಲಿ ಎಚ್ಚರಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಜಗತ್ತಿನಾದ್ಯಂತ ಮುಂದುವರೆದ ಮರಣ ಮೃದಂಗ!

ಕೊರೊನಾ ಹಾವಳಿ ದಿನದಿಂದ ದಿನಕ್ಕೆಹೆಚ್ಚಾಗುತ್ತಿದ್ದು, ಇಲ್ಲಿಯವರೆಗೂ ಜಗತ್ತಿನಲ್ಲಿ 2.48 ಲಕ್ಷ ಜನರು ಸಾವನ್ನಪ್ಪಿದ್ದಾರೆ.

ಸಿದ್ದರಾಮಯ್ಯ ಬಿಜೆಪಿ ಜೊತೆ ಕೈ ಜೋಡಿಸಿದ್ದಾರೆ – ಪ್ರತಾಪ್ ಸಿಂಹ!

ಮೈಸೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ಜೊತೆ ಕೈ ಜೋಡಿಸಿರುವ ಗುಮಾನಿ ಇದೆ ಎಂದು ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದಾರೆ.

ಎಸ್.ಎಸ್.ಎಲ್.ಸಿ ಪರೀಕ್ಷೆ ವಿದ್ಯಾರ್ಥಿಗಳು ಪಾಲಿಸಬೇಕಾದ ನಿಯಮಗಳೇನು..?

ಎಸ್.ಎಸ್.ಎಲ್.ಸಿ ಪರೀಕ್ಷೆ ವಿದ್ಯಾರ್ಥಿಗಳು ಪಾಲಿಸಬೇಕಾದ ನಿಯಮಗಳೇನು..? ಪರೀಕ್ಷೆ ನಡೆಯುವ 1 ಗಂಟೆ 30 ನಿಮಿಷ ಮೊದಲೇ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಲ್ಲಿ ಹಾಜರಿರಬೇಕು.