ನವದೆಹಲಿ : ಕೊರೊನಾವೈರಸ್, ಟೀಮ್ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ನಿವೃತ್ತಿಯ ನಿರ್ಧಾರ ತಾಳುವಂತೆ ಮಾಡಿತು ಎಂದು ಭಾರತದ ಸ್ಪಿನ್ನರ್ ಯುಜುವೇಂದ್ರ ಚಾಹಲ್ ಬೇಸರ ವ್ಯಕ್ತಪಡಿಸಿದ್ದಾರೆ.
ಮಹಾಮಾರಿ ಬಾರದಿದ್ದರೆ ಧೋನಿ, ಧೋನಿ ಟಿ20 ವಿಶ್ವಕಪ್ನಲ್ಲಿ ಆಡುತ್ತಿದ್ದರು ಎಂದು ಚಾಹಲ್ ಹೇಳಿದ್ದಾರೆ. ಭಾರತ ತಂಡಕ್ಕೆ ಎಲ್ಲ ರೀತಿಯ ಐಸಿಸಿ ಟ್ರೋಫಿಗಳನ್ನು ಗೆಲ್ಲಿಸಿಕೊಟ್ಟ ಏಕೈಕ ನಾಯಕ ಎಂಎಸ್ ಧೋನಿ ಕಳೆದ ಶನಿವಾರ ತಮ್ಮ ವೃತ್ತಿ ಬದುಕಿಗೆ ವಿದಾಯ ಹೇಳಿದ್ದಾರೆ. ಅಲ್ಲದೇ, ಅವರೊಂದಿಗೆ ಅವರ ಆತ್ಮೀಯ ಸ್ನೇಹಿತ ಸುರೇಶ್ ರೈನಾ ಕೂಡ ನಿವೃತ್ತಿ ಘೋಷಿಸಿದ್ದಾರೆ.
ಈ ವರ್ಷ ಆಸ್ಟ್ರೇಲಿಯಾದಲ್ಲಿ ನಡೆಯಬೇಕಿರುವ ಟಿ20 ವಿಶ್ವಕಪ್ನಲ್ಲಿ ಧೋನಿ ಆಡಲಿದ್ದರು. ಆದರೆ, ಮಹಾಮಾರಿಯ ಅಟ್ಟಹಾಸದಿಂದಾಗಿ ಈ ಟೂರ್ನಿ 2022ಕ್ಕೆ ಮುಂದೂಡಲ್ಪಟ್ಟಿತು. ಹೀಗಾಗಿ ಧೋನಿ ನಿವೃತ್ತಿ ಘೋಷಿಸಿದ್ದಾರೆ. ಇಲ್ಲದಿದ್ದರೆ ಧೋನಿ ಟಿ20 ವಿಶ್ವಕಪ್ನಲ್ಲಿ ಆಡುತ್ತಿದ್ದರು ಎಂಬ ಗಾಳಿಸುದ್ದಿ ಕ್ರಿಕೆಟ್ ವಲಯದಲ್ಲಿ ಓಡಾಡುತ್ತಿದೆ. ಇದೇ ಮಾತನ್ನು ಚಾಹಲ್ ಕೂಡ ಹೇಳಿದ್ದಾರೆ.