ನವದೆಹಲಿ : ಕೊರೊನಾವೈರಸ್, ಟೀಮ್ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ನಿವೃತ್ತಿಯ ನಿರ್ಧಾರ ತಾಳುವಂತೆ ಮಾಡಿತು ಎಂದು ಭಾರತದ ಸ್ಪಿನ್ನರ್ ಯುಜುವೇಂದ್ರ ಚಾಹಲ್ ಬೇಸರ ವ್ಯಕ್ತಪಡಿಸಿದ್ದಾರೆ.

ಮಹಾಮಾರಿ ಬಾರದಿದ್ದರೆ ಧೋನಿ, ಧೋನಿ ಟಿ20 ವಿಶ್ವಕಪ್‌ನಲ್ಲಿ ಆಡುತ್ತಿದ್ದರು ಎಂದು ಚಾಹಲ್ ಹೇಳಿದ್ದಾರೆ. ಭಾರತ ತಂಡಕ್ಕೆ ಎಲ್ಲ ರೀತಿಯ ಐಸಿಸಿ ಟ್ರೋಫಿಗಳನ್ನು ಗೆಲ್ಲಿಸಿಕೊಟ್ಟ ಏಕೈಕ ನಾಯಕ ಎಂಎಸ್ ಧೋನಿ ಕಳೆದ ಶನಿವಾರ ತಮ್ಮ ವೃತ್ತಿ ಬದುಕಿಗೆ ವಿದಾಯ ಹೇಳಿದ್ದಾರೆ. ಅಲ್ಲದೇ, ಅವರೊಂದಿಗೆ ಅವರ ಆತ್ಮೀಯ ಸ್ನೇಹಿತ ಸುರೇಶ್ ರೈನಾ ಕೂಡ ನಿವೃತ್ತಿ ಘೋಷಿಸಿದ್ದಾರೆ. 

ಈ ವರ್ಷ ಆಸ್ಟ್ರೇಲಿಯಾದಲ್ಲಿ ನಡೆಯಬೇಕಿರುವ ಟಿ20 ವಿಶ್ವಕಪ್‌ನಲ್ಲಿ ಧೋನಿ ಆಡಲಿದ್ದರು. ಆದರೆ, ಮಹಾಮಾರಿಯ ಅಟ್ಟಹಾಸದಿಂದಾಗಿ ಈ ಟೂರ್ನಿ 2022ಕ್ಕೆ ಮುಂದೂಡಲ್ಪಟ್ಟಿತು. ಹೀಗಾಗಿ ಧೋನಿ ನಿವೃತ್ತಿ ಘೋಷಿಸಿದ್ದಾರೆ. ಇಲ್ಲದಿದ್ದರೆ ಧೋನಿ ಟಿ20 ವಿಶ್ವಕಪ್‌ನಲ್ಲಿ ಆಡುತ್ತಿದ್ದರು ಎಂಬ ಗಾಳಿಸುದ್ದಿ ಕ್ರಿಕೆಟ್ ವಲಯದಲ್ಲಿ ಓಡಾಡುತ್ತಿದೆ. ಇದೇ ಮಾತನ್ನು ಚಾಹಲ್ ಕೂಡ ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಎಡಗೈ ಆಟಗಾರರು ನಿಜವಾಗಿಯೂ ಪ್ರತಿಭಾವಂತರೆ?

ಭಾರತ ತಂಡದ ಪ್ರತಿಭಾವಂತೆ ಹಾಗೂ ಸ್ಟೈಲಿಷ್ಟ್ ಆಟಗಾರ್ತಿ ಸ್ಮೃತಿ ಮಂಧನಾ ಅವರು ಶನಿವಾರ ತಮ್ಮ 24ನೇ ಹುಟ್ಟು ಹಬ್ಬದ ಸಂಭ್ರಮ ಆಚರಿಸಿಕೊಂಡಿದ್ದಾರೆ. ಅವರಿಗೆ ಖ್ಯಾತ ಆಟಗಾರರು ಹಾಗೂ ಅಭಿಮಾನಿ

ಇಂದಿನ ಪಂದ್ಯದಲ್ಲಿ ಆರ್ ಸಿಬಿ, ರಾಜಸ್ಥಾನವನ್ನು ಮಣಿಸಲಿದೆಯೇ?

ಬೆಂಗಳೂರು : ಪ್ರಸಕ್ತ ಸಾಲಿನ ಐಪಿಎಲ್ ಕದನದಲ್ಲಿ ಬೆಂಗಳೂರು ತಂಡವು ಇಂದು ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲಿದೆ.

ಕ್ರಿಕೆಟ್ ನಲ್ಲಿ ಧೋನಿ ಸ್ಥಾನದಲ್ಲಿ ಧೋನಿ ಮಾತ್ರ ಇದ್ದಾರೆ…ಬೇರೆ ಯಾರೂ ಇಲ್ಲ ಎಂದ ರಾಹುಲ್!

ನಾಲ್ಕು ಬಾರಿ ಚಾಂಪಿಯನ್ ಆಗಿರುವ ಮುಂಬಯಿ ಇಂಡಿಯನ್ಸ್ ತಂಡದ ವಿರುದ್ಧ ಎರಡು ಸೂಪರ್ ಓವರ್ ಆಡಿ ಭರ್ಜರಿಯಾಗಿ ಗೆದ್ದು ಬೀಗಿರುವ ಖುಷಿಯಲ್ಲಿರುವ ಪ್ರೀತಿಯ ಹುಡುಗರು, ಈಗ ಆತ್ಮವಿಶ್ವಾಸದಲ್ಲಿದ್ದಾರೆ.

ಧೋನಿ ನಿವೃತ್ತಿ ಘೋಷಿಸುವ ಸಿದ್ಧತೆಯಲ್ಲಿದ್ದಾರೆಯೇ?

ಅಬುಧಾಬಿ : ಮ್ಯಾಚ್ ವಿನ್ನರ್ ಧೋನಿ ಐಪಿಎಲ್ ಗೂ ನಿವೃತ್ತಿ ಘೋಷಿಸಲಿದ್ದಾರೆಯೇ ಎಂಬ ಸಂಶಯ ಮೂಡುತ್ತಿದೆ. ಹಾಗಂತ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಮಾಡುತ್ತಿದ್ದಾರೆ.