ನವದೆಹಲಿ : ಕೊರೊನಾವೈರಸ್, ಟೀಮ್ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ನಿವೃತ್ತಿಯ ನಿರ್ಧಾರ ತಾಳುವಂತೆ ಮಾಡಿತು ಎಂದು ಭಾರತದ ಸ್ಪಿನ್ನರ್ ಯುಜುವೇಂದ್ರ ಚಾಹಲ್ ಬೇಸರ ವ್ಯಕ್ತಪಡಿಸಿದ್ದಾರೆ.

ಮಹಾಮಾರಿ ಬಾರದಿದ್ದರೆ ಧೋನಿ, ಧೋನಿ ಟಿ20 ವಿಶ್ವಕಪ್‌ನಲ್ಲಿ ಆಡುತ್ತಿದ್ದರು ಎಂದು ಚಾಹಲ್ ಹೇಳಿದ್ದಾರೆ. ಭಾರತ ತಂಡಕ್ಕೆ ಎಲ್ಲ ರೀತಿಯ ಐಸಿಸಿ ಟ್ರೋಫಿಗಳನ್ನು ಗೆಲ್ಲಿಸಿಕೊಟ್ಟ ಏಕೈಕ ನಾಯಕ ಎಂಎಸ್ ಧೋನಿ ಕಳೆದ ಶನಿವಾರ ತಮ್ಮ ವೃತ್ತಿ ಬದುಕಿಗೆ ವಿದಾಯ ಹೇಳಿದ್ದಾರೆ. ಅಲ್ಲದೇ, ಅವರೊಂದಿಗೆ ಅವರ ಆತ್ಮೀಯ ಸ್ನೇಹಿತ ಸುರೇಶ್ ರೈನಾ ಕೂಡ ನಿವೃತ್ತಿ ಘೋಷಿಸಿದ್ದಾರೆ. 

ಈ ವರ್ಷ ಆಸ್ಟ್ರೇಲಿಯಾದಲ್ಲಿ ನಡೆಯಬೇಕಿರುವ ಟಿ20 ವಿಶ್ವಕಪ್‌ನಲ್ಲಿ ಧೋನಿ ಆಡಲಿದ್ದರು. ಆದರೆ, ಮಹಾಮಾರಿಯ ಅಟ್ಟಹಾಸದಿಂದಾಗಿ ಈ ಟೂರ್ನಿ 2022ಕ್ಕೆ ಮುಂದೂಡಲ್ಪಟ್ಟಿತು. ಹೀಗಾಗಿ ಧೋನಿ ನಿವೃತ್ತಿ ಘೋಷಿಸಿದ್ದಾರೆ. ಇಲ್ಲದಿದ್ದರೆ ಧೋನಿ ಟಿ20 ವಿಶ್ವಕಪ್‌ನಲ್ಲಿ ಆಡುತ್ತಿದ್ದರು ಎಂಬ ಗಾಳಿಸುದ್ದಿ ಕ್ರಿಕೆಟ್ ವಲಯದಲ್ಲಿ ಓಡಾಡುತ್ತಿದೆ. ಇದೇ ಮಾತನ್ನು ಚಾಹಲ್ ಕೂಡ ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಮಹೇಶ್ ಬಾಬು ಡೈಲಾಗ್ ಟಿಕ್ ಮಾಡಿದ ವಾರ್ನರ್

ಆಸ್ಟ್ರೇಲಿಯಾ ಕ್ರಿಕೇಟಿಗರೊಬ್ಬರು ಇಂಡಿಯಾದ ಚಿತ್ರನಟರೊಬ್ಬರ ಡೈಲಾಗ್ ನ್ನು ಟಿಕ್ ಟಾಕ್ ಮಾಟಿದ್ದು ಇದೀಗ ವೈರಲ್ ಆಗಿದೆ.

ಅಜಿತ್ ಅಗರ್ಕರ್ ಪಾಂಟಿಂಗ್ ಗೆ ಹಾಕಿದ ಸವಾಲು ಏನು?

ಮುಂಬಯಿ: ಕ್ರಿಕೆಟ್ ಕಾಶಿ ಎಂದೇ ಖ್ಯಾತಿ ಪಡೆದಿರುವ ಲಾರ್ಡ್ಸ್ ಮೈದಾನದಲ್ಲಿ ಮಾಜಿ ಆಲ್‌ರೌಂಡರ್‌ ಅಜಿತ್‌ ಅಗರ್ಕರ್‌…

ಅನಿಲ್ ಕುಂಬ್ಳೆಗೆ ಶುಭಾಶಯ ಕೋರಿ ಸಾಧನೆ ಕೊಂಡಾಡಿದ ಸುದೀಪ್!

ಬೆಂಗಳೂರು : ಕಿಚ್ಚ ಸುದೀಪ್ ಅವರು ಮಾಜಿ ಕ್ರಿಕೆಟ್ ಅನಿಲ್ ಕುಂಬ್ಳೆ ಅವರ ಹುಟ್ಟು ಹಬ್ಬಕ್ಕೆ ಶುಭಾಶಯ ಕೋರಿ, ಅವರ ಸಾಧನೆಯನ್ನು ಕೊಂಡಾಡಿದ್ದಾರೆ.

ಕಿಂಗ್ ಕೊಹ್ಲಿ ಆಟಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಅಭಿಮಾನಿಗಳು!

ಶಾರ್ಜಾ : ಇಂದಿನ ಪಂದ್ಯಕ್ಕೂ ಮೊದಲು ಮೈದಾನದಲ್ಲಿ ಕೊಹ್ಲಿ ಡ್ಯಾನ್ಸ್ ಮಾಡಿದ್ದು, ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.